Home namma chikmagalur ಜನರನ್ನು ದಾರಿ ತಪ್ಪಿಸಲು ಡಿ.ಕೆ.ಶಿವಕುಮಾರ್-ಸಿದ್ದರಾಮಯ್ಯ ನಾಟಕ
namma chikmagalurchikamagalurHomeLatest News

ಜನರನ್ನು ದಾರಿ ತಪ್ಪಿಸಲು ಡಿ.ಕೆ.ಶಿವಕುಮಾರ್-ಸಿದ್ದರಾಮಯ್ಯ ನಾಟಕ

Share
Share

ಚಿಕ್ಕಮಗಳೂರು: ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಇರ್ತಿನಿ ಅಂತ ಸಿದ್ಧರಾಮಯ್ಯ ಹೇಳುತ್ತಿದ್ದಾರೆ. ನೀವು ಇದ್ದೀ ರೋ ಇಲ್ವೋ, ನಿಮ್ಮ ಪಂಚೆಯನ್ನು ಬೇರೆಯವರು ಎಳೆಯುತ್ತಿದ್ದಾರೋ ಗೊತ್ತಿಲ್ಲ, ಆ ಕೆಲಸ ಮಾಡುತ್ತಿರುವರು ನಿಮ್ಮವರೆ ಹೊರತು ನಾವಲ್ಲ, ಜನರನ್ನು ದಾರಿ ತಪ್ಪಿಸಲು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನಾಟಕ ಮಾಡುತ್ತಿದ್ದಾರೆ. ಇವರ ನಾಟಕಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೃಪಾಪೋಷಿತ ನಾಟಕ ಮಂಡಳಿಯಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಯಾಗಿ ಅವರನ್ನಾದರೂ ಮಾಡಿಕೊಳ್ಳಲಿ, ಇವರನ್ನಾದರೂ ಮಾಡಿಕೊಳ್ಳಲಿ ಮೊದಲು ರಾಜ್ಯದ ಜನಕ್ಕೆ ಒಳ್ಳೆಯದು ಮಾಡಲಿ ಎಂದು ರೈಲ್ವೆ ಮತ್ತು ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ ರಾಜ್ಯ ಸರ್ಕಾರವನ್ನು ಟೀಕಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದಲ್ಲಿ ಒಂದು ಕೆಲಸವಾದರೂ ನೆಪ್ಪು ನೇರಲಾಗಿ ನಡೆಯುತ್ತಿ ದೆಯೇ, ಇದರ ಬಗ್ಗೆ ಯೋಚನೆ ಮಾಡಿ, ಸಿದ್ದರಾಮಯ್ಯ ಸಾಹೇಬ್ರೆ ಕಳೆದೋಗಿದ್ದೀರಾ ಎಂದು ಹೇಳ್ತಿರ್ತಿನಿ, ಇವತ್ತು ಹೇಳ್ತೀನಿ, ನಿಮಗೆ ಯಾರು ತೊಂದರೆ ಮಾಡಿರುವುದು ನಾವ ಎಂದು ಪ್ರಶ್ನಿಸಿದ ಅವರು ನಿಮ್ಮ ಪಕ್ಷದವರೇ, ಮೊದಲು ಮಳೆಯಿಂದ ರಸ್ತೆಗಳೆಲ್ಲ ಗುಂಡಿ ಬಿದ್ದಿವೆ, ಗುಂಡಿ ಮುಚ್ಚಲು ಆಗಿಲ್ಲ, ಮತ್ತೊಂದು ಮಗದೊಂದಿಲ್ಲ, ಅವರ ಬಗ್ಗೆ ನೋಡಿ ಎಂದ ಅವರು ಡಿಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಕ್ಕಟ್ಟು ಬಿಕ್ಕಟ್ಟು ಏನೂ ಇಲ್ಲ, ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ನನಗೆ ಮೋದಿ ಯವರು ಕೆಲಸ ಕೊಟ್ಟಿದ್ದಾರೆ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು ಆದ ಮೇಲೆ ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ. ದೇಶಕ್ಕಾಗಿ ನಮ್ಮ ನಾಯಕರು ತಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದರು.

ಸಿ.ಟಿ.ರವಿಗೆ ರಾಜ್ಯಾಧ್ಯಕ್ಷ ಸ್ಥಾನದ ಹುದ್ದೆ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೋಮಣ್ಣ ಸಿ.ಟಿ.ರವಿಗೆ ಕೆಲಸ ವಿಲ್ಲ ಮತ್ತೊಂದಿಷ್ಟು ಜಾಸ್ತಿಯಾದರೂ ನಮಗೇನು ತೊಂದರೆ ಇಲ್ಲ. ಅಪ್ಪಾ.. ಒಂದು ನಿಮಿಷನಪ್ಪಾ… ಯಾಕಪ್ಪಾ ಹೀಗೆ ಮಾಡ್ತೀರಾ ತಂದೆ.. ಅವನೇನೋ ನನ್ನ ಜತೆ ಚೆನ್ನಾಗಿದ್ದನೆ. ನಾಳೆಯಿಂದ ಅವನು ಬರದಂತಾಗುತ್ತಾನೆ. ನನ್ನ ಕಿರಿಯ ತಮ್ಮ ಆತ್ಮೀಯತೆಯಿಂದ ಹೋಗಪ್ಪಾ ಬಾರಪ್ಪ ಅಂತೀವಿ. ನಮಗೆ ಪಾರ್ಟಿ ದೊಡ್ಡದು ಪಾರ್ಟಿಗಿಂತ ಪಕ್ಷದೊಡ್ಡದು ಎಂದು ರಾಜ್ಯಾಧ್ಯಕ್ಷದ ಸ್ಥಾನದ ಕುರಿತು ಹೇಳಿದರು.

D.K. Shivakumar-Siddaramaiah drama to mislead people

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...