Home Latest News ಲೋಕ ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು
Latest NewschikamagalurHomenamma chikmagalur

ಲೋಕ ಅದಾಲತ್‌ನಿಂದ ಕಕ್ಷಿದಾರರ ಬಾಂಧವ್ಯ ಉಳಿವು

Share
Share

ಚಿಕ್ಕಮಗಳೂರು:  ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದಿಂದ ಪ್ರಕರಣಗಳು ಶೀಘ್ರ ಇತ್ಯರ್ಥಗೊಳ್ಳುವುದರ ಜೊತೆಗೆ ಕಕ್ಷಿದಾರರಲ್ಲಿ ಬಾಂಧವ್ಯವೂ ಉಳಿಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ, ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ರಾಜೇಶ್ವರಿ ಎನ್.ಹೆಗಡೆ ಹೇಳಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಲೋಕ ಅದಾಲತನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲಾ ಇತ್ಯರ್ಥಗೊಳ್ಳಬೇಕೆಂದರೆ ಸಾಕಷ್ಟು ಕಾಲಾವಕಾಶ ಹಿಡಿಯಲಿದೆ. ಹಾಗಾಗಿ ಲೋಕ ಅದಾಲತ್‌ನಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ. ಇದರಿಂದ ಕಕ್ಷಿದಾರರು ಪಾವತಿಸಬೇಕಾದ ನ್ಯಾಯಾಲಯದ ಶುಲ್ಕ ಹಾಗೂ ಸಮಯ ಉಳಿತಾಯವಾಗಲಿದೆ. ಆದರೆ ಕೊಲೆ, ಅತ್ಯಾಚಾರ ಹಾಗೂ ಲೋಕಾಯುಕ್ತದ ಪ್ರಕರಣಗಳು ನ್ಯಾಯಾಲಯದಲ್ಲೇ ಇತ್ಯರ್ಥವಾಗಬೇಕಿದ್ದು, ಸಹಜವಾಗಿಯೇ ವಿಳಂಬವಾಗುತ್ತದೆ ಎಂದರು.

ನಾವ್ಯಾರೂ ಶಾಶ್ವತವಲ್ಲ; ಹೃದಯಾಘಾತದಂತಹ ಪ್ರಸಂಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಪ್ರಕರಣಗಳನ್ನು ವ್ಯಾಜ್ಯಗಳಾಗಿ ಬೆಳೆಸಿಕೊಳ್ಳದೆ ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳುವುದು ಸೂಕ್ತ ಮತ್ತು ಅಗತ್ಯ ಕೂಡ ಎಂದು ಹೇಳಿದರು.
ವಕೀಲರ ಸಂಘದ ಅಧ್ಯಕ್ಷ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ನ್ಯಾಯ ಅರಸಿ ಬರುವ ಕಕ್ಷಿದಾರರಿಗೆ ಅತ್ಯುತ್ತಮವಾದ ತೀರ್ಪು ಸಿಗಬೇಕೆಂದರೆ ಅದು ರಾಜಿ ಸಂಧಾನದಿಂದ ಮಾತ್ರ ಸಾಧ್ಯ. ಅದಾಲತ್‌ನಲ್ಲಿ ಭಾಗವಹಿಸುವ ಮುನ್ನ ಇಲ್ಲಿ ಸಿಗುವಂತೆ ಇನ್ನೆಲ್ಲೂ ನ್ಯಾಯ ಸಿಗಲು ಸಾಧ್ಯವಿಲ್ಲ ಎಂಬುದನ್ನು ಕಕ್ಷಿದಾರರು ಮನದಟ್ಟು ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ವಿವಾದವನ್ನು ಬಗೆಹರಿಸಿಕೊಳ್ಳುವ ಸರಳ ವಿಧಾನ ಮುಂದೆ ಇರುವಾಗ ಸಂಘರ್ಷವನ್ನು ಯಾಕಾಗಿ ಬೆಳೆಸಿಕೊಳ್ಳಬೇಕು? ಪ್ರತಿಯೊಬ್ಬರಲ್ಲೂ ಪ್ರಕರಣಗಳು ಶೀಘ್ರ ಇತ್ಯರ್ಥವಾಗದಿರುವ ಬಗ್ಗೆ ಅಸಮಾಧಾನವಿದ್ದೇ ಇರುತ್ತದೆ. ನಿಮ್ಮೆದುರು ಇರುವ ಕಕ್ಷಿದಾರರು ನಿಮ್ಮ ಶತ್ರುವಲ್ಲ, ಬದಲಾಗಿ ನಿಮ್ಮೊಳಗಿರುವ ಸಿಟ್ಟು, ಅಹಂಕಾರ ಹಾಗೂ ಸಂಘರ್ಷದ ಮನಸ್ಥಿತಿ ಇದೆಯಲ್ಲ ಅವೇ ನಿಮ್ಮ ಶತ್ರು. ಆಸ್ತಿ, ಹಣ ಸಂಪಾದನೆ ಮಾಡುವುದು ನಮ್ಮ ಸುಖ, ಸಂತೋಷಕ್ಕಾಗಿ. ನಮ್ಮ ಸುಖಕ್ಕೆ ಸಿಗದ ಆಸ್ತಿ, ಹಣ ವಯಸ್ಸು ಇರುವಾಗ ಸಿಗದಿದ್ದಲ್ಲಿ ಪ್ರಯೋಜನವಾದರೂ ಏನು ಎಂದು ಪ್ರಶ್ನಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಧಾನಕಾರರು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರುಗಳಾದ ಪ್ರಕಾಶ್, ಮಂಜುನಾಥ, ಕುಲಕರ್ಣಿ, ಗುರುಪ್ರಸಾದ್, ರಾಘವೇಂದ್ರ, ಸುಜಾತ, ದ್ಯಾವಪ್ಪ, ಲತಾ, ಅನುರಾಧ, ಶರತ್ ಕುಮಾರ್, ನಂದಿನಿ, ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು,

Lok Adalat preserves the relationship between the parties

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...