Home namma chikmagalur ತಿರುಪತಿ ರೈಲಿಗೆ ಬಾಬಾಬುಡನ್ ಹೆಸರಿಡಲು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ
namma chikmagalurchikamagalurHomeLatest News

ತಿರುಪತಿ ರೈಲಿಗೆ ಬಾಬಾಬುಡನ್ ಹೆಸರಿಡಲು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

Share
Share
ಚಿಕ್ಕಮಗಳೂರು: ತಿರುಪತಿ–ಚಿಕ್ಕಮಗಳೂರು ನಡುವೆ ಕಾರ್ಯಾಚರಣೆ ಮಾಡಲಿರುವ ಎಕ್ಸ್‌ಪ್ರೆಸ್ ರೈಲಿಗೆ ‘ಬಾಬಾಬುಡನ್ ಎಕ್ಸ್‌ಪ್ರೆಸ್’ ಎಂದು ನಾಮಕರಣ ಮಾಡುವಂತೆ ಒತ್ತಾಯಿಸಿ ಬಾಬಾ ಬುಡನ್‌ ವಂಶಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

17ನೇ ಶತಮಾನದಲ್ಲಿ ಯೆಮೆನ್‌ನಿಂದ ಏಳು ಕಾಫಿ ಬೀಜಗಳನ್ನು ತಂದು ಚಿಕ್ಕಮಗಳೂರಿನ ಬಾಬಾಬುಡನ್‌ಗಿರಿಯಲ್ಲಿ ಬೆಳೆಸಿ ಭಾರತದಲ್ಲಿ ಕಾಫಿ ಕೃಷಿ ಆರಂಭಕ್ಕೆ ಕಾರಣವಾದವರು ಬಾಬಾಬುಡನ್. ಇದರಿಂದ ಚಿಕ್ಕಮಗಳೂರು ಇಂದು ಭಾರತದ ಕಾಫಿ ತವರೆಂಬ ಹೆಸರು ಪಡೆದಿದೆ’ ಎಂದು ಬಾಬಾಬುಡನ್ ವಂಶಸ್ಥ ಸಯ್ಯದ್ ಫಕ್ರುದ್ದೀನ್ ಶಾ– ಖಾದ್ರಿ ಪತ್ರದಲ್ಲಿ ತಿಳಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೂ ಈ ಪತ್ರ ರವಾನಿಸಿದ್ದಾರೆ.

‘ಆಧ್ಯಾತ್ಮಿಕ ಗುರುವಾದ ಬಾಬಾಬುಡನ್ ಅವರನ್ನು ಎಲ್ಲ ಸಮುದಾಯಗಳ ಜನರೂ ಗೌರವಿಸುತ್ತಿದ್ದಾರೆ. ಸೂಫಿ ತತ್ವವು ಶಾಂತಿ, ಪ್ರೀತಿ ಮತ್ತು ಸಹಬಾಳ್ವೆಯ ಸಂದೇಶ ನೀಡುತ್ತಿದೆ. ಈ ರೈಲಿಗೆ ಅವರ ಹೆಸರಿಟ್ಟರೆ ಭಾರತದ ಸಾಮರಸ್ಯ ಮತ್ತು ಸಂಸ್ಕೃತಿಗೆ ಗೌರವ ತರಲಿದೆ. ಬಾಬಾಬುಡನ್‌ಗಿರಿ ಮತ್ತು ತಿರುಪತಿ ರೀತಿಯ ಆಧ್ಯಾತ್ಮಿಕ ಕೇಂದ್ರಗಳ ನಡುವಿನ ಈ ರೈಲು ಸಂಪರ್ಕವು ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಸಾಂಸ್ಕೃತಿಕ ಸಂಬಂಧ ಬಲಪಡಿಸಲಿದೆ’ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ‘ದತ್ತಪೀಠ–ತಿರುಪತಿ ಎಕ್ಸ್‌ಪ್ರೆಸ್ ಎಂಬುದರಲ್ಲಿ ವಿವಾದ ಇಲ್ಲ. ಇದು ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಾರ್ವಜನಿಕದಿಂದ ಬಂದಿರುವ ಸಲಹೆ. ಪ್ರಧಾನ ಮಂತ್ರಿಗೆ ಕೆಲವರು ಪತ್ರ ಬರೆದಿರಬಹುದು. ಆದರೆ, ದತ್ತಾತ್ರೇಯ ಮೊದಲೋ, ಬಾಬಾಬುಡನ್ ಮೊದಲೋ ಎಂಬುದು ಎಲ್ಲರಿಗೂ ಗೊತ್ತಿದೆ. ಬಾಬಾಬುಡನ್‌ಗಿಂತ ದತ್ತಾತ್ರೇಯ ಪೂರ್ವಿಕರು. ಈ ಇಬ್ಬರನ್ನು ಹೋಲಿಕೆ ಮಾಡುವುದೇ ತಪ್ಪು’ ಎಂದು ಹೇಳಿದರು.

Letter to PM Narendra Modi demanding naming of Tirupati train after Baba Budan

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...