Home ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ
HomechikamagalurLatest Newsnamma chikmagalur

ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ

Share
Share

ನರಸಿಂಹರಾಜಪುರ: ತಾಲ್ಲೂಕಿನ ಪ್ರಗತಿಪರ, ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ (70) ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ  ತೋಟದಲ್ಲಿ ನಡೆಯಿತು.

ಪ್ರಸ್ತುತ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಜೆಡಿಎಸ್ ರಾಜ್ಯಘಟಕದ ಉಪಾಧ್ಯಕ್ಷರೂ ಆಗಿದ್ದ ಎಚ್.ಟಿ.ರಾಜೇಂದ್ರ ಅವರು ಭಾನುವಾರ ರಾತ್ರಿ ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಮಡಬೂರಿನಿಂದ ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಪಟ್ಟಣಕ್ಕೆ ತಂದು ಮೆರವಣಿಗೆಯ ನಡೆಸಲಾಯಿತು.

ಹರಿದು ಬಂದ ಜನಸಾಗರ: ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮದಿಂದ ಪಟ್ಟಣದ ಶಾರದ ವಿದ್ಯಾಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ರಸ್ತೆ ಉದ್ದಕ್ಕೂ ಜನರು ಮೃತರ ನಿಧನಕ್ಕೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದರು.

ಎಚ್.ಟಿ.ರಾಜೇಂದ್ರ ಅವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿ ಗೌರವ ಸಲ್ಲಿಸಿದರು. ಮೆರವಣಿಗೆ ವೇಳೆ ಪಟ್ಟಣದ ಶಾಲೆ, ಆಸ್ಪತ್ರೆ, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅಂತಿಮ ನಮನ ಸಲ್ಲಿಸಿದರು. ಶಾರದ ವಿದ್ಯಾಮಂದಿರ ಶಾಲೆಯ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಅಂತಿಮ ದರ್ಶನ ಪಡೆದರು.

ಶಾಸಕ ಟಿ.ಡಿ.ರಾಜೇಗೌಡ, ವಿಧಾನಪರಿಷತ್ ಸದಸ್ಯರಾದ ಬೋಜೇಗೌಡ, ಸಿ.ಟಿ.ರವಿ, ಭದ್ರಾ ಕಾಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಮಾಜಿ ಶಾಸಕ ಡಿ.ಎನ್.ಜೀವರಾಜ್, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಸೇರಿ ಹಲವು ಗಣ್ಯರು ಮೃತರ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

Funeral of late socialist thinker H.T. Rajendra

 

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...