Home ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ
HomechikamagalurLatest Newsnamma chikmagalur

ಅಗಲಿದ ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ ಅಂತ್ಯ ಸಂಸ್ಕಾರ

Share
Share

ನರಸಿಂಹರಾಜಪುರ: ತಾಲ್ಲೂಕಿನ ಪ್ರಗತಿಪರ, ಸಮಾಜವಾದಿ ಚಿಂತಕ ಎಚ್.ಟಿ.ರಾಜೇಂದ್ರ (70) ಅವರ ಅಂತ್ಯ ಸಂಸ್ಕಾರ ಸೋಮವಾರ ಸಂಜೆ  ತೋಟದಲ್ಲಿ ನಡೆಯಿತು.

ಪ್ರಸ್ತುತ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಜೆಡಿಎಸ್ ರಾಜ್ಯಘಟಕದ ಉಪಾಧ್ಯಕ್ಷರೂ ಆಗಿದ್ದ ಎಚ್.ಟಿ.ರಾಜೇಂದ್ರ ಅವರು ಭಾನುವಾರ ರಾತ್ರಿ ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಇದ್ದಾರೆ. ಮಡಬೂರಿನಿಂದ ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಪಟ್ಟಣಕ್ಕೆ ತಂದು ಮೆರವಣಿಗೆಯ ನಡೆಸಲಾಯಿತು.

ಹರಿದು ಬಂದ ಜನಸಾಗರ: ಎಚ್.ಟಿ.ರಾಜೇಂದ್ರ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮದಿಂದ ಪಟ್ಟಣದ ಶಾರದ ವಿದ್ಯಾಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ರಸ್ತೆ ಉದ್ದಕ್ಕೂ ಜನರು ಮೃತರ ನಿಧನಕ್ಕೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದರು.

ಎಚ್.ಟಿ.ರಾಜೇಂದ್ರ ಅವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿ ಗೌರವ ಸಲ್ಲಿಸಿದರು. ಮೆರವಣಿಗೆ ವೇಳೆ ಪಟ್ಟಣದ ಶಾಲೆ, ಆಸ್ಪತ್ರೆ, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅಂತಿಮ ನಮನ ಸಲ್ಲಿಸಿದರು. ಶಾರದ ವಿದ್ಯಾಮಂದಿರ ಶಾಲೆಯ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಅಂತಿಮ ದರ್ಶನ ಪಡೆದರು.

ಶಾಸಕ ಟಿ.ಡಿ.ರಾಜೇಗೌಡ, ವಿಧಾನಪರಿಷತ್ ಸದಸ್ಯರಾದ ಬೋಜೇಗೌಡ, ಸಿ.ಟಿ.ರವಿ, ಭದ್ರಾ ಕಾಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಮಾಜಿ ಶಾಸಕ ಡಿ.ಎನ್.ಜೀವರಾಜ್, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸುಧಾಕರ್ ಎಸ್.ಶೆಟ್ಟಿ ಸೇರಿ ಹಲವು ಗಣ್ಯರು ಮೃತರ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

Funeral of late socialist thinker H.T. Rajendra

 

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ...

Related Articles

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ...

ಬೈಕ್ – ಕಾರೊಂದು ಮುಖಾಮುಖಿ ಡಿಕ್ಕಿ: ಚಾಲಕ ತೀವ್ರ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು...

ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡ ಹುಲಿ

ಚಿಕ್ಕಮಗಳೂರು: ಮುತ್ತೋಡಿ ವಲಯದ ಏಳುನೂರುಖಾನ್ ತೋಟದ ಬಳಿ ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಹುಲಿಯೊಂದು...

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ...