Home namma chikmagalur ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
namma chikmagalurchikamagalurHomeLatest News

ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

Share
Share

ಚಿಕ್ಕಮಗಳೂರು: : ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿ ಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ್ರವಾಸೋದ್ಯಮ ನೀತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಿರಿ ಪ್ರದೇಶದ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತದಿಂದ ಅಲ್ಲಲ್ಲಿ ಮಣ್ಣು ಆವರಿಸಿದ್ದು, ರಸ್ತೆ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.

ನಿಯಮಾನುಸಾರ ಪ್ರವಾಸಿಗರು ತಮ್ಮ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದ ಅವರು, ಪ್ರವಾಸಿಗರು ಬರುವ ವಾಹನಗಳಿಗೆ ಸ್ಥಳೀಯವಾಗಿ ಗುರುತಿಸಿರುವ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ನಿಲುಗಡೆಗೊಳಿಸಿ ಸ್ಥಳೀಯ ಲಘು ವಾಹನಗಳಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳಬಹುದು. ಪ್ರವಾಸಿಗರನ್ನು ಕರೆದೊಯ್ಯಲು ಬೆಳಿಗ್ಗೆ ೧೦೦ ಹಾಗೂ ಸಂಜೆ ೧೦೦ ವಾಹನಗಳನ್ನು ಮಾತ್ರ ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಸಿಗರಿಗೆ ಅನುಕೂಲವಾಗಲೆಂದು ಆನ್‌ಲೈನ್‌ನಲ್ಲಿ ನೋಂದಣಿ ಉಚಿತವಾಗಿದ್ದು, ಸಂಪೂರ್ಣ ಮಾಹಿತಿ ಅಲ್ಲಿಯೇ ಸಿಗುವುದರಿಂದ ತಪ್ಪದೇ ನಿಯಮಗಳನ್ನು ಪಾಲಿಸಬೇಕು. ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಪ್ಲಾಸ್ಟಿಕ್ ಮತ್ತಿತರ ವಸ್ತುಗಳನ್ನು ಕೊಂಡೊಯ್ಯಬಾರದು. ಈ ನಿಟ್ಟಿನಲ್ಲಿ ಪರಿಸರ ಸ್ನೇಹಿ ವ್ಯವಸ್ಥೆಗೆ ಒತ್ತು ನೀಡುವಂತೆ ಹೇಳಿದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಮೂಲ ಸೌಕರ್ಯ ಅಭಿವೃದ್ಧಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲತೆಗಳನ್ನು ಹೆಚ್ಚಿಸಲು ಉತ್ತಮ ವ್ಯವಸ್ಥೆಯನ್ನು ಕಲ್ಪಿಸಿ ಜಾಲವನ್ನು ಸೃಜಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ವಾಹನ ದಟ್ಟಣೆಯಿಂದ ಗಿರಿಪ್ರದೇಶದಲ್ಲಿ ರಸ್ತೆ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ಹಲವು ಬದಲಾವಣೆಗಳನ್ನು ಮಾಡಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಆತಿಥ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಅನುವಾಗುವಂತೆ ಆಹಾರ ಮತ್ತು ಪಾನೀಯ ವಿತರಣೆ, ಕೊಠಡಿ ನಿರ್ವಹಣೆ, ಸ್ವಾಗತಗಾರಿಕೆ ಹಾಗೂ ವಿವಿಧ ಆಹಾರ ತಯಾರಿಕೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಡಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ ೨೦ ರಿಂದ ೪೫ ವರ್ಷ ವಯೋಮಿತಿಯವರಿಗೆ ಈ ತರಬೇತಿ ನೀಡಲಾಗುತ್ತಿದ್ದು, ಉಚಿತ ಊಟ, ವಸತಿ ಹಾಗೂ ಪ್ರೋತ್ಸಾಹಧನವನ್ನು ನೀಡಲಾಗುವುದು. ಜಿಲ್ಲೆಯ ಅಭ್ಯರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಡಿವೈಎಸ್‌ಪಿ ಶೈಲೇಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶ್ರೀಧರ್ ಸೇರಿದಂತೆ ಅರಣ್ಯ, ಮೆಸ್ಕಾಂ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಸ್ವಾಗತಿಸಿದರು.

Temporary restrictions on tourism destinations in the Giri region

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...