Home namma chikmagalur ಜಿಲ್ಲೆಯ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ‘ಆರಕ್ಷಕ ಗೆಳತಿ’ ಭೇಟಿ
namma chikmagalurchikamagalurHomeLatest News

ಜಿಲ್ಲೆಯ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ‘ಆರಕ್ಷಕ ಗೆಳತಿ’ ಭೇಟಿ

Share
Share

ಚಿಕ್ಕಮಗಳೂರು:  ಜಿಲ್ಲೆಯಲ್ಲಿರುವ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದ್ದು ತಿಂಗಳಲ್ಲಿ ಒಂದು ಬಾರಿ ಹಾಸ್ಟೆಲ್ ಗಳಿಗೆ ಭೇಟಿ ನೀಡು ‘ಆರಕ್ಷಕ ಗೆಳತಿ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿರುವ ಬಾಲಿಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐ ದರ್ಜೆಯ ನೋಡೆಲ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಅಲ್ಲಿರುವ ಬಾಲಕಿಯರ ,ಅವರ ಪೋಷಕರು , ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರೊಡನೆ ಸಂವಾದ ನಡೆಸುವರು.
ಸಮಸ್ಯೆಗಳನ್ನು ಆಲಿಸಿ ಅವರಲ್ಲಿ ಪೋಕ್ಸೋ, ಚೈಲ್ಡ್ ರೈಟ್ಸ್, ಚೈಲ್ಡ್ ಮ್ಯಾರೇಜ್, ಸೈಬರ್ ಕ್ರೈಮ್ಸ್, ಟ್ರಾಫಿಕ್ ರೂಲ್ಸ್, ಡ್ರಗ್ಸ್ ಇತ್ಯಾದಿ ವಿಷಯಗಳಲ್ಲಿ ಕಾನೂನು ಅರಿವು ಮೂಡಿಸಿ ಮನೋಸ್ಥೆರ್ಯ ಹೆಚ್ಚಿಸಿದ್ದಾರೆ.

ಹಾಸ್ಟೆಲ್‌ಗಳ ಮೆಸ್, ಟೀಚಿಂಗ್ ರೂಂಗಳು, ಆವರಣ, ಕಟ್ಟಡಗಳ ಸ್ಥಿತಿಗತಿ, ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಣೆ ಬಗ್ಗೆ, ಕಾಂಪೌಂಡ್, ಸೆಕ್ಯೂರಿಟಿ ಗಾರ್ಡ್ಸ್ ಎಲ್ಲರನ್ನೂಳಗೊಂಡು ಭದ್ರತಾ ಹಿತ ದೃಷ್ಟಿಯಿಂದ ಪರಿಶೀಲಿಸಿದ್ದಾರೆ. ಊಟ ತಿಂಡಿ ವಿತರಣೆ, ವಸತಿ ಸೌಕರ್ಯ, ಶೌಚಾಲಯಗಳಲ್ಲಿ ಸ್ವಚ್ಛತೆ, ಪೋಲಿ ಹುಡುಗರಿಂದ ಏನಾದರೂ ಕಿರಿಕಿರಿ, ತೊಂದರೆ, ಹಾಸ್ಟೆಲ್ ಅಕ್ಕ ಪಕ್ಕದ ವಾತಾವರಣ, ಮಕ್ಕಳಿಗೆ ಅನಾರೋಗ್ಯದ ಸಂದರ್ಭದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ, ಬಾಲಕಿಯರ ಜೊತೆ ಹಾಸ್ಟೆಲ್ ಸಿಬ್ಬಂದಿಯವರ ವರ್ತನೆ -ನಡತೆ ಕುರಿತು ವಿಚಾರಿಸಿದ್ದಾರೆ.

ಹಾಸ್ಟೆಲ್ ಮೇಲ್ವಿಚಾರಕರೊಂದಿಗೆ ಬಾಲಕಿಯರ ರೂಂಗಳನ್ನು ತಪಾಸಣೆ ಮಾಡಿ ಚಾಕುಗಳು, ಕತ್ತರಿಗಳು ಇತರೆ ಕಬ್ಬಿಣದ ವಸ್ತುಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು. ವೈದ್ಯರ ಸಲಹೆ ಹೊರತುಪಡಿಸಿ ಬೇರೆ ಯಾವುದಾದರೂ ಔಷದಿ ಮಾತ್ರೆಗಳು. ಸ್ವಂತವಾಗಿ ಕುಕ್ಕಿಂಗ್ ಮಾಡುತ್ತಿದ್ದರೆ. ಹೊರಗಡೆಯಿಂದ ಪಾರ್ಸಲ್‌ಗಳನ್ನು ತರಿಸುತ್ತಿದ್ದರೆ ಪರಿಶೀಲಿಸಿ ಪ್ರಿನ್ಸಿಪಾಲ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ

ಇಆರ್ ಎಸ್ಎಸ್- 112. ಸ್ಥಳೀಯ ಪೊಲೀಸ್ ಠಾಣೆ. ಪಿಎಸ್‌ಐ (ಕಾ&ಸು) ಮತ್ತು ಕಂಟ್ರೋಲ್ ರೂಂ- 9480805100 ಸಂಖ್ಯೆಗಳನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಸಂಬಂಧಪಟ್ಟ ಪ್ರಿನ್ಸಿಪಾಲ್ ರವರಿಗೆ ಪತ್ರ ವ್ಯವಹಾರ ನಡೆಸಿದ್ದಾರೆ.

‘Police girlfriend’ visits 91 girls’ hostels in the district

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ...

Related Articles

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ...

ಬೈಕ್ – ಕಾರೊಂದು ಮುಖಾಮುಖಿ ಡಿಕ್ಕಿ: ಚಾಲಕ ತೀವ್ರ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು...

ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡ ಹುಲಿ

ಚಿಕ್ಕಮಗಳೂರು: ಮುತ್ತೋಡಿ ವಲಯದ ಏಳುನೂರುಖಾನ್ ತೋಟದ ಬಳಿ ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಹುಲಿಯೊಂದು...

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ...