Home namma chikmagalur ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿಗೆ ಬೈಕ್‌ ಹಾನಿ
namma chikmagalurchikamagalurHomeLatest News

ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿಗೆ ಬೈಕ್‌ ಹಾನಿ

Share
Share

ಜಯಪುರ: ಕೊಪ್ಪ ತಾಲ್ಲೂಕಿನ ಲೋಕನಾಥಪುರ ಸಮೀಪದ ಕೋಣಂಬಿ ಹಾಗೂ ಹೇರೂರು ಗ್ರಾಮದ ಹುತ್ತಿನಗದ್ದೆಯಲ್ಲಿ ಆನೆಗಳು ದಾಳಿ ಮಾಡಿ ಬೆಳೆ ಹಾಗೂ ಬೈಕ್‌ ಹಾನಿ ಮಾಡಿವೆ.

ಹೇರೂರು ಗ್ರಾಮದ ಹುತ್ತಿನಗದ್ದೆಯ ನಟರಾಜ್ ಅವರ ತೋಟದಲ್ಲಿ ಎರಡು ಆನೆಗಳು ಬೆಳೆದಿದ್ದ ಅಡಿಕೆ, ಬಾಳೆ, ಕಾಫಿ ಗಿಡಗಳನ್ನು ತುಳಿದು ನಾಶ ಮಾಡಿವೆ. ಸಮೀಪದ ಸೈಟ್ ಬಳಿ ನಿಲ್ಲಿಸಿದ್ದ ಬೈಕನ್ನು ತುಳಿದು ಜಖಂಗೊಳಿಸಿವೆ.

ಸ್ಥಳಕ್ಕೆ ಕೊಪ್ಪ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಆನೆಗಳನ್ನು ಓಡಿಸಲು ಯತ್ನಿಸಿದ್ದಾರೆ. ಲೋಕನಾಥಪುರ ಸಮೀಪದ ಕೋಣಂಬಿ ಶ್ರೀಕರ, ನಾಗರಾಜ್, ಗುರುಪ್ರಸನ್ನ ಅವರ ಬೆಳೆ ಹಾನಿಯಾಗಿದೆ.

ಸ್ಥಳಕ್ಕೆ ಬಾರದ ಅಧಿಕಾರಿಗಳು: ಆನೆಗಳು ದಾಳಿ ನಡೆಸಿದ ಬಗ್ಗೆ ಕೊಪ್ಪ ಡಿಎಫ್‌ಒ ಶಿವಶಂಕರ್ ಅವರನ್ನು ಶ್ರೀಕರ ಅವರು ದೂರವಾಣಿ ಮೂಲಕ ಸಂಪರ್ಕಿಸಿ ತಿಳಿಸಿದಾಗ ಸೋಮವಾರ ಸ್ಥಳಕ್ಕೆ ಅಧಿಕಾರಿಗಳು ಬರುತ್ತಾರೆ ಎಂದು ಹೇಳಿದ್ದರು. ಅಧಿಕಾರಿಯ ಉತ್ತರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಬೆಳೆಹಾನಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದ್ದಾರೆ.

Bike damaged in elephant attack in Huttinagadde

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ...

ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಜೂನ್...

Related Articles

ದೇವಸ್ಥಾನದಲ್ಲೇ ಮಗುವನ್ನು ಮರೆತುಹೋದ ಪೋಷಕರು!

ಕಳಸ: ಪಟ್ಟಣದ ಶ್ರೀಕಲಶೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ದಂಪತಿ, ದೇವರ ದರ್ಶನ ಪಡೆದು ಹಿಂದಿರುಗುವಾಗ ತಮ್ಮ...

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ...

ಮಳಲೂರು ಏತ ನೀರಾವರಿ ಯೋಜನೆಗೆ ಮರುಜೀವ

ಚಿಕ್ಕಮಗಳೂರು: ಕಾಫಿನಾಡಿನ ರೈತರ ಬಹುದಿನಗಳ ಕನಸಾಗಿದ್ದ ಮಳಲೂರು ಏತ ನೀರಾವರಿ ಯೋಜನೆಗೆ ಕೊನೆಗೂ ಮರುಜೀವ ಬಂದಿದ್ದು,...

ಶ್ರೀ ವೀರನಾರಾಯಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ವಿಕೃತಿ

ಚಿಕ್ಕಮಗಳೂರು: ಹೊಯ್ಸಳರ ಕಾಲದ ಅತ್ಯಂತ ಪ್ರಸಿದ್ಧ ಹಾಗೂ ಅಪೂರ್ವ ಕಲೆ-ವಾಸ್ತುಶಿಲ್ಪದ ಹೆಗ್ಗುರುತಾಗಿರುವ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ...