Home namma chikmagalur ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ
namma chikmagalurchikamagalurHomeLatest News

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

Share
Share

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ ಪೈಪೋಟಿ ಪ್ರಾರಂಭವಾಗಿದೆ.

ಗ್ರಾಮ ಪಂಚಾಯತಿಯನ್ನು ಮೇಲ್ದರ್ಜೆಗೇರಿಸಿ ಪಟ್ಟಣ ಪಂಚಾಯತಿಯನ್ನಾಗಿಸಿದ್ದು ಕಳೆದ ಏಳು ವರ್ಷಗಳಿಂದ ಕೋರ್ಟ್ ಕಛೇರಿ ಎಂದು ಚುನಾವಣೆ ನಡೆದಿರಲಿಲ್ಲ. ಗ್ರಾಮ ಪಂಚಾಯತಿಯಲ್ಲಿ 29 ವಾರ್ಡ್‌ ಗಳು ಇದ್ದವು ಪಟ್ಟಣ ಪಂಚಾಯತಿಯಲ್ಲಿ 11 ವಾರ್ಡ್‌ ಗಳಿವೆ .
ಮಳೆ ಅಭಾವದಿಂದ ಜನ ಸಂಕಷ್ಟದಲ್ಲಿದ್ದಾರೆ.ಈರುಳ್ಳಿ ಕೈಗೆ ಸಿಕ್ಕಿದರೆ ಜನರಿಗೆ ಅನುಕೂಲವಾಗುತಿತ್ತು ಎನ್ನುತ್ತಿರುವಾಗ ಚುನಾವಣೆಯ ಕಾವು ಏರುವುದು ಖಚಿತ.ಈಗಾಗಲೇ ಒಂದಿಬ್ಬರು ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಜಿ.ನಟರಾಜ್,ಜೋಗಿಪ್ರಕಾಶ್,ಮಸೂದ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ಚುನಾವಣೆ ಗೆ ಸ್ಪರ್ಧೆಸುತ್ತಾರೆ.ಬಿಜೆಪಿಯಿಂದ ಗಿರೀಶ್ ಚವಾಣ್,ರಂಗಸ್ವಾಮಿ, ಮಧುಸೂದನ್ ಮತ್ತು ಜನತಾದಳದ ಎಸ್,ಶಿವಾನಂದ್ ಚುನಾವಣಾ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಐದಾರು ವಾರ್ಡ್ ಗಳಲ್ಲಿ ನೇರ, ನೇರಾ ಸ್ಪರ್ಧೆ ಏರ್ಪಟ್ಟರೆ ಕೆಲವು ವಾರ್ಡ್ ಗಳಲ್ಲಿ ಹೆಚ್ಚಿನ ಸ್ಪರ್ಧಿಗಳು ಇರುವುದು ಖಚಿತ.

ಬಿಜೆಪಿ ಮತ್ತು ದಳ ಹೊಂದಾಣಿಕೆ ಮಾಡಿಕೊಳ್ಳುವದು ಖಚಿತ. ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದಾಗಿ ಪ್ರತಿಷ್ಟೆ ಪ್ರಶ್ನೆಯಾಗಿದೆ.

Ajjampur town panchayat election is pending

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...