Home namma chikmagalur ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ
namma chikmagalurchikamagalurHomeLatest News

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

Share
Share

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ.

ಒಂದು ತಿಂಗಳಿನಿಂದ ಭುವನೇಶ್ವರಿ ಗುಂಪಿನ 25, ಬೀಟಮ್ಮ 2 ಗುಂಪಿನ 8 ಕಾಡಾನೆಗಳು ಜಿ. ಹೊಸಳ್ಳಿ, ಟಾಟಾ ಎಸ್ಟೇಟ್, ಸಿಲ್ವರ್ ಕಾನು ಎಸ್ಟೇಟ್, ಪಡಿಯ ಕಾಲೊನಿ, ಹೊಸಪುರ, ಹನುಮನಹಳ್ಳಿ ಗ್ರಾಮಗಳಲ್ಲಿ ನಿರಂತರವಾಗಿ ತಿರುಗಾಡುತ್ತಾ ಸಾರ್ವಜನಿಕರಿಗೆ ಉಪಟಳ ನೀಡುತ್ತಿವೆ.

ಬೀಟಮ್ಮ ಗುಂಪಿನ 8 ಆನೆಗಳು ಮೂರು ದಿನದಿಂದ ಹೊಸಪುರ ಗ್ರಾಮದಲ್ಲಿ ಬೀಡುಬಿಟ್ಟಿವೆ. ಭುವನೇಶ್ವರಿ ಗುಂಪಿನಿಂದ ಬೇರ್ಪಟ್ಟ ಮೂರು ಕಾಡಾನೆಗಳು ಜಿ. ಹೊಸಳ್ಳಿಯಿಂದ ಬುಧವಾರ ರಾತ್ರಿ ಹೊರಟು ಬೆಳಿಗ್ಗೆ 5.45ಕ್ಕೆ ಆನೆದಿಬ್ಬ ಗ್ರಾಮದ ಮೂಲಕ ತುಮಕೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ್ಕೇಬೈಲ್ ಗ್ರಾಮದ ಮೂಲಕ ಕಮ್ಮರಗೋಡು ಗ್ರಾಮದತ್ತ ಸಾಗಿವೆ.

ಭುವನೇಶ್ವರಿ ಹಾಗೂ ಬೀಟಮ್ಮ ಎರಡು ಗುಂಪಿನ ಕಾಡಾನೆಗಳು ಜಿ.ಹೊಸಳ್ಳಿ ವ್ಯಾಪ್ತಿಯಲ್ಲಿ ಬೀಡುಬಿಟ್ಟಿವೆ. ಗೋಣಿಬೀಡು ಹೋಬಳಿಯಲ್ಲಿಯೇ 40ಕ್ಕೂ ಅಧಿಕ ಕಾಡಾಣೆಗಳು ತಿರುಗಾಡುತ್ತಿದ್ದು, ರೈತರ ಬೆಳೆಯನ್ನು ದ್ವಂಸಗೊಳಿಸುತ್ತಿವೆ. ಅರಣ್ಯ ಇಲಾಖೆಯ ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾಡಾನೆಯಿರುವ ಪ್ರದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಟಾಸ್ಕ್ ಪೋರ್ಸ್ ಸಿಬ್ಬಂದಿ ಅರ್ಧ ಗಂಟೆಗೊಮ್ಮೆ ವಾಟ್ಸ್‌ಆ್ಯಪ್‌ ಗ್ರೂಪ್ ಮೂಲಕ ಕಾಡಾನೆಗಳು ಇರುವ ಗ್ರಾಮಗಳ ಜನರಿಗೆ ಮಾಹಿತಿ ರವಾನಿಸುತ್ತಾ ಪಟಾಕಿ ಸಿಡಿಸಿ ಜನವಸತಿ ಪ್ರದೇಶದತ್ತ ಲಗ್ಗೆ ಇಡದಂತೆ ಎಚ್ಚರ ವಹಿಸಿದ್ದಾರೆ.

ಜಿ.ಹೊಸಳ್ಳಿ ಗ್ರಾಮದ ದೀಪಕ್, ರಾಜೇಗೌಡ, ಪೂರ್ಣೇಶ್, ವಿನಾಯಕ ಎಸ್ಟೇಟ್, ಶೈಲೇಶ್, ಯೋಗೇಶ್, ಹನುಮನಹಳ್ಳಿ ಗ್ರಾಮದ ಆದರ್ಶ, ಕಮ್ಮರಗೋಡು ಗ್ರಾಮದ ಅರುಣ್ ಸೆರಾವೋ, ಕಣ್ಣಪ್ಪ ಗೌಡ, ಕಸ್ಕೇಬೈಲ್ ಗ್ರಾಮದ ಬಿಳಿಗೌಡ ಸೇರಿದಂತೆ 25ಕ್ಕೂ ಹೆಚ್ಚು ರೈತರ ತೋಟಗಳನ್ನು ನಾಶಪಡಿಸಿವೆ. ವಾಟ್ಸ್‌ಆ್ಯಪ್‌ ಗ್ರೂಪ್ ನಲ್ಲಿ ಟಾಸ್ಕ್ ಫೋರ್ಸ್ ಸಿಬ್ಬಂದಿ ಸಂದೇಶ ರವಾನಿಸುತ್ತಿದ್ದರೂ ನಿರ್ದಿಷ್ಟವಾಗಿ ಯಾವ ಸ್ಥಳದಲ್ಲಿ ಕಾಡಾನೆ ಗುಂಪು ಇರುತ್ತವೆಂದು ತಿಳಿಯದೆ ಜನ ಕಂಗಾಲಾಗಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಜನ ಭಯಪಡುತ್ತಿದ್ದಾರೆ. ಸಂಜೆ 5 ರ ನಂತರ ಗೋಣಿಬಿಡು ಹೋಬಳಿಯ ಬಹುತೇಕ ಗ್ರಾಮಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಗ್ರಾಮಸ್ಥರು ಹಾಗೂ  ಗೋಣಿಬೀಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಎಸ್.ದಿನೇಶ್ ಒತ್ತಾಯಿಸಿದರು.

More than 40 wild elephants attacked in three groups

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...