Home Latest News ನೀರಿಗಾಗಿ ರೈತರು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿ
Latest NewschikamagalurCrime NewsHomeKadurnamma chikmagalur

ನೀರಿಗಾಗಿ ರೈತರು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿ

Share
Share

ಕಡೂರು: ಜಿಲ್ಲೆಯ ಪ್ರಮುಖ ಕೆರೆಯಾದ ಅಯ್ಯನಕೆರೆ ತುಂಬಿ ಹರಿಯುವ ನೀರನ್ನು ಕೆರೆಗಳಿಗೆ ಹರಿಸುವುದರಿಂದ ಅಂತರ್ ಜಲ ಹೆಚ್ಚಿಸಿ ಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ರೈತರು ಹೇಳುತ್ತಾರೆ.

ಭದ್ರ ಉಪ ಕಣಿವೆ ಯೋಜನೆಯ ನೀರನ್ನು ಸಹ ಅಯ್ಯನಕೆರೆಗೆ ಹರಿಸುವುದರಿಂದ ಸದಾಕಾಲವೂ ನೀರು ಹರಿಯುತ್ತದೆ ಎಂದು ಅಂದಾಜಿಸಿದ್ದು ಇದರಿಂದಾಗಿ ಬೆಲ್ಟಿಕೆರೆ ಕೆರೆ ಮತ್ತು ನಾಗೇನಹಳ್ಳಿ ಕೆರೆಗೆ ಹರಿಸಿದರೆ ನಾಗೇನಹಳ್ಳಿ,ಹುಲಿಕೆರೆ,ಪಿಳ್ಳೆನಹಳ್ಳಿ,ಕಂಚಗಾರನ ಹಳ್ಳಿ, ತಾಂಡ್ಯ ಮತ್ತು ಆಗ್ರಹಾರ ಭಾಗದಲ್ಲಿ ಅಂತರ್ ಜಲ ಹೆಚ್ಚಳವಾಗುತ್ತದೆ .ಇದರಿಂದಾಗಿ ಯಾವ ತೊಂದರೆ ಆಗುವುದಿಲ್ಲ ಯಾರು ಕೂಡ ಆತಂಕ ಪಡವುದು ಬೇಡ ಎಂದು ರೈತರು ಹೇಳುತ್ತಾರೆ.

ವೇದ ನದಿ ಅಕ್ಕ ಪಕ್ಕ ಇರುವ ರೈತರು ಕಡೂರು, ಪಂಚನಹಳ್ಳಿಯ ಭಾಗದ ರೈತರು ಹರಿಯುವ ನೀರನ್ನು ತಡೆಯಬಾರದು ವೇದನದಿ ತುಂಬಿ ಹರಿಯುವುದು ಬಲು ಕಷ್ಟ ಇಲ್ಲಿನ ಜನ ಮತ್ತು ಜಾನುವಾರುಗಳಿಗೆ ತೊಂದರೆ ಯಲ್ಲಿ ಇದ್ದು ಕುಡಿಯುವ ನೀರಿಗೂ ಕಷ್ಟ ಎಂದು ಆತಂಕ ಗೊಂಡು ಸಭೆ ಸೇರಿ ಪಂಚನಹಳ್ಳಿಯಿಂದ ಆಗ್ರಹಾರದವರೆಗೆ ಪಾದ ಯಾತ್ರೆ ಮಾಡಲು ನಿರ್ಧಾರ ಮಾಡಿದ್ದು ಯಾವುದೇ ಹೊಸ ಯೋಜನೆಗಳಿಗೆ ಅವಕಾಶ ಕೊಡಬಾರದು ಎನ್ನುತ್ತಿದ್ದಾರೆ.

ಒಟ್ಟಾರೆ ರೈತರಿಗೆ ನೀರಿನ ಚಿಂತೆ ಎರಡು ಕಡೆಯವರ ವಾದ ಅವರವರ ಅನುಕೂಲಕ್ಕೆ ಆದರೆ ಭದ್ರ ಉಪಕಣಿವೆ ಯೋಜನೆಯ ನೀರು ಬರುವುದರಿಂದ ಆತಂಕ ಪಡದೆ ಗೊಂದಲಕ್ಕೆ ಒಳಗಾಗದೆ ಸಾಧಕ_ ಬಾಧಕಗಳ ಬಗ್ಗೆ ಚರ್ಚೆ ನಡೆಸುವುದು ಒಳ್ಳೆಯದು.

ಉಭಯ ಭಾಗದ ರೈತರು ಸಮಸ್ಯೆಗೆ ಅವಕಾಶ ಕೊಡದೆ ಬೀದಿಗಿಳಿಯುವ ಮುನ್ನ ಚಿಕ್ಕಮಗಳೂರು ಶಾಸಕರಾದ ಹೆಚ್.ಡಿ.ತಮ್ಮಯ್ಯ ಮತ್ತು ಕಡೂರು ಶಾಸಕರಾದ ಆನಂದ್ ಜವಬ್ದಾರಿ ತೆಗೆದು ಕೊಂಡು ರೈತರ ಸಭೆ ಮತ್ತು ಸಂಬಂಧ ಪಟ್ಟ ನೀರಾವರಿ ಇಲಾಖೆಯವರ ಸಭೆ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಒಳ್ಳೆಯದು.

Let farmers debate the pros and cons of water

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...