Home Latest News ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ
Latest NewschikamagalurHome

ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ

Share
Share

ಚಿಕ್ಕಮಗಳೂರು: ದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ತೋಟಗಾರಿಕೆ ಇಲಾಖೆ ವತಿಯಿಂದ ಇಂದು ನಗರದ ಕಾಫಿ ಮಂಡಳಿಯಲ್ಲಿ ರೈತರಿಗೆ ತೆಂಗು, ಶುಂಠಿ ಹಾಗೂ ತಾಳೆ ಬೆಳೆಯ ಬೇಸಾಯ ಕ್ರಮ ಹಾಗೂ ರೋಗ ಮತ್ತು ಕೀಟ ನಿಯಂತ್ರಣದ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ರೈತರು ಮಿಶ್ರ ಬೆಳೆಯನ್ನು ಬೆಳೆಯುತ್ತಿದ್ದರು. ಅದೇ ರೀತಿ ಈಗಲೂ ಸಹ ಮಿಶ್ರ ಬೆಳೆಗಳನ್ನು ಅವಲಂಬಿಸುವಂತಾದರೆ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಬೆಳೆಗಳನ್ನು ಅವಲಂಬಿಸುವ ಕ್ರಮವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತೋಟಗಾರಿಕೆ ಹಾಗೂ ಕೃಷಿ ಬೆಳೆಯನ್ನು ಅವಲಂಬಿಸುವುದರ ಜೊತೆಗೆ ಕೃಷಿ ಆಧಾರಿತ ಉದ್ಯಮವನ್ನು ನಡೆಸಲು ಕೇಂದ್ರ ಸರ್ಕಾರದಿಂದ ಸಾಕಷ್ಟು ಸಹಾಯಧನವನ್ನು ಒದಗಿಸಲಾಗುತ್ತದೆ. ಆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ತೋಟಗಾರಿಕೆ ಬೆಳೆಗಳಾದ ಅಡಿಕೆ, ಟೀ, ತೆಂಗು, ಮೆಣಸು ಇದರ ಜೊತೆಗೆ ಹೊಸ ಹೊಸ ತೋಟಗಾರಿಕೆ ಬೆಳೆಗಳ ಬಗ್ಗೆ ಇಲಾಖೆ ವತಿಯಿಂದ ಮಾಹಿತಿ ನೀಡುವ ಪ್ರಯತ್ನ ಮಾಡಬೇಕು. ತೋಟಗಾರಿಕೆ ಬೆಳೆಯ ಜೊತೆಗೆ ಉಪಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಹಾಯವಾಗುತ್ತದೆ ಎಂದರು

ತೋಟಗಾರಿಕೆ ಹಾಗೂ ಕೃಷಿ ಬೆಳೆಗಳಿಗೆ ತಗಲುವ ರೋಗಗಳಿಗೆ ಕಾಲಕಾಲಕ್ಕೆ ಕೈಗೊಳ್ಳಬೇಕಾದ ಔಷಧಿ ಸಿಂಪಡಣೆ ಹಾಗೂ ರಸಗೊಬ್ಬರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಇಂಥ ವಿಚಾರ ಸಂಕಿರಣಗಳನ್ನು ಕೇವಲ ಜಿಲ್ಲಾ ಮಟ್ಟಕ್ಕೆ ಸೀಮಿತಗೊಳಿಸದೇ ಗ್ರಾಮ ಪಂಚಾಯಿತಿ, ಹೋಬಳಿ ಮಟ್ಟದಲ್ಲಿ ನಡೆಸಿದರೆ ಅಲ್ಲಿನ ರೈತರಿಗೂ ಅನುಕೂಲವಾಗಲಿದೆ ಎಂದರು.

ತೋಟಗಾರಿಕೆ ಉಪನಿರ್ದೇಶಕಿ ಪೂರ್ಣಿಮಾ ಪ್ರಾಸ್ತ್ತಾವಿಕ ನುಡಿಗಳನ್ನಾಡಿ, ಜಿಲ್ಲೆಯಲ್ಲಿ ೨,೧೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದರಲ್ಲಿ ಮುಖ್ಯವಾದ ಬೆಳೆ ಅಡಿಕೆ ಮತ್ತು ತೆಂಗು ಈ ಬೆಳೆಗಳಿಗೆ ರೈತರು ಹೆಚ್ಚು ಅವಲಂಬಿತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆ ಹಲವಾರು ರೋಗಗಳಿಗೆ ತುತ್ತಾಗುತ್ತಿದೆ. ಈ ಹಿಂದೆ ಅಡಿಕೆ ಬೆಳೆಯಲ್ಲಿ ಕಡಿಮೆ ಹಾನಿ ಉಂಟು ಮಾಡುತ್ತಿದ್ದ ರೋಗಗಳು ಇತ್ತೀಚಿನ ವ?ಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಏರುಪೇರಿನಿಂದಾಗಿ ರೋಗಗಳು ಹೆಚ್ಚಿ ಅಧಿಕ ಹಾನಿಯನ್ನುಂಟು ಮಾಡುತ್ತಿವೆ.

ಅವುಗಳಲ್ಲಿ ಎಲೆ ಚುಕ್ಕೆ ರೋಗವು ಪ್ರಮುಖವಾಗಿದ್ದು, ಮಲೆನಾಡಿನೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದು ಈ ಭಾಗದ ಬೆಳೆಗಾರರಲ್ಲಿ ಹೆಚ್ಚು ಆತಂಕಕ್ಕೆ ಕಾರಣವಾಗುತ್ತಿದೆ. ಈ ರೋಗದಿಂದಾಗಿ ಅಡಿಕೆ ಇಳುವರಿ ಕುಂಠಿತವಾಗುತ್ತಿದ್ದು, ನಿರ್ದಿ? ಅವಧಿಯಲ್ಲಿ ಸರಿಯಾದ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕಾರ್ಯಾಗಾರದ ಮುಖಾಂತರ ರೈತರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ದಿಶಾ ಸಮಿತಿಯ ಸದಸ್ಯ ಕಲ್ಮರುಡಪ್ಪ, ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳಾದ ಡಾ.ಸುರೇಶ್, ಡಾ.ಸುಚಿತ್ರ ಕುಮಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ನೇತ್ರಾವತಿ, ರೈತ ಸಂಘದ ಮುಖಂಡ ಬಸವರಾಜು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

It is necessary to make farmers financially strong.

Share

Leave a comment

Leave a Reply

Your email address will not be published. Required fields are marked *

Don't Miss

ಮೈಮೆಲೆ ಬಿಸಿನೀರು ಬಿದ್ದು ಹೆಣ್ಣುಮಗುವಿಗೆ ಗಾಯ

ಚಿಕ್ಕಮಗಳೂರು: ಜಿಲ್ಲಾಮಕ್ಕಳ ಘಟಕದ ದತ್ತು ಸಂಸ್ಥೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಂದು ವರ್ಷ ಮೂರು ತಿಂಗಳ ಹೆಣ್ಣುಮಗುವಿಗೆ ಸುಟ್ಟಗಾಯವಾಗಿದ್ದು ಇದರಿಂದ ಹೆಣ್ಣುಮಗು ನರಳುವಂತಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಗಾಂಧಿನಗರದಲ್ಲಿರುವ ದತ್ತು...

ಹಿರೇಬೈಲು ಗ್ರಾಮದಲ್ಲಿ ನಕಲಿ ವೈದ್ಯನ ವಿರುದ್ಧ ಕ್ರಮ

ಕಳಸ: ಹಿರೇಬೈಲು ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಕ್ರಮ ಕೈಗೊಂಡಿದ್ದು, ಕ್ಲಿನಿಕ್ ಅನ್ನು ಬಂದ್ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಆರೋಗ್ಯ ಇಲಾಖೆ...

Related Articles

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ...

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...