Home Latest News ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ
Latest NewschikamagalurHome

ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದು ಅಗತ್ಯ

Share
Share

ಚಿಕ್ಕಮಗಳೂರು: ದೇಶದ ಜನತೆಗೆ ಅನ್ನ ನೀಡುವ ಅನ್ನದಾತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವುದು ಅಗತ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ತೋಟಗಾರಿಕೆ ಇಲಾಖೆ ವತಿಯಿಂದ ಇಂದು ನಗರದ ಕಾಫಿ ಮಂಡಳಿಯಲ್ಲಿ ರೈತರಿಗೆ ತೆಂಗು, ಶುಂಠಿ ಹಾಗೂ ತಾಳೆ ಬೆಳೆಯ ಬೇಸಾಯ ಕ್ರಮ ಹಾಗೂ ರೋಗ ಮತ್ತು ಕೀಟ ನಿಯಂತ್ರಣದ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ರೈತರು ಮಿಶ್ರ ಬೆಳೆಯನ್ನು ಬೆಳೆಯುತ್ತಿದ್ದರು. ಅದೇ ರೀತಿ ಈಗಲೂ ಸಹ ಮಿಶ್ರ ಬೆಳೆಗಳನ್ನು ಅವಲಂಬಿಸುವಂತಾದರೆ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯ. ಜೊತೆಗೆ ಸಂದರ್ಭಕ್ಕೆ ಅನುಗುಣವಾಗಿ ಬೆಳೆಗಳನ್ನು ಅವಲಂಬಿಸುವ ಕ್ರಮವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತೋಟಗಾರಿಕೆ ಹಾಗೂ ಕೃಷಿ ಬೆಳೆಯನ್ನು ಅವಲಂಬಿಸುವುದರ ಜೊತೆಗೆ ಕೃಷಿ ಆಧಾರಿತ ಉದ್ಯಮವನ್ನು ನಡೆಸಲು ಕೇಂದ್ರ ಸರ್ಕಾರದಿಂದ ಸಾಕಷ್ಟು ಸಹಾಯಧನವನ್ನು ಒದಗಿಸಲಾಗುತ್ತದೆ. ಆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ತೋಟಗಾರಿಕೆ ಬೆಳೆಗಳಾದ ಅಡಿಕೆ, ಟೀ, ತೆಂಗು, ಮೆಣಸು ಇದರ ಜೊತೆಗೆ ಹೊಸ ಹೊಸ ತೋಟಗಾರಿಕೆ ಬೆಳೆಗಳ ಬಗ್ಗೆ ಇಲಾಖೆ ವತಿಯಿಂದ ಮಾಹಿತಿ ನೀಡುವ ಪ್ರಯತ್ನ ಮಾಡಬೇಕು. ತೋಟಗಾರಿಕೆ ಬೆಳೆಯ ಜೊತೆಗೆ ಉಪಬೆಳೆಗಳನ್ನು ಬೆಳೆದರೆ ಆರ್ಥಿಕವಾಗಿ ಸಹಾಯವಾಗುತ್ತದೆ ಎಂದರು

ತೋಟಗಾರಿಕೆ ಹಾಗೂ ಕೃಷಿ ಬೆಳೆಗಳಿಗೆ ತಗಲುವ ರೋಗಗಳಿಗೆ ಕಾಲಕಾಲಕ್ಕೆ ಕೈಗೊಳ್ಳಬೇಕಾದ ಔಷಧಿ ಸಿಂಪಡಣೆ ಹಾಗೂ ರಸಗೊಬ್ಬರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಇಂಥ ವಿಚಾರ ಸಂಕಿರಣಗಳನ್ನು ಕೇವಲ ಜಿಲ್ಲಾ ಮಟ್ಟಕ್ಕೆ ಸೀಮಿತಗೊಳಿಸದೇ ಗ್ರಾಮ ಪಂಚಾಯಿತಿ, ಹೋಬಳಿ ಮಟ್ಟದಲ್ಲಿ ನಡೆಸಿದರೆ ಅಲ್ಲಿನ ರೈತರಿಗೂ ಅನುಕೂಲವಾಗಲಿದೆ ಎಂದರು.

ತೋಟಗಾರಿಕೆ ಉಪನಿರ್ದೇಶಕಿ ಪೂರ್ಣಿಮಾ ಪ್ರಾಸ್ತ್ತಾವಿಕ ನುಡಿಗಳನ್ನಾಡಿ, ಜಿಲ್ಲೆಯಲ್ಲಿ ೨,೧೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಅದರಲ್ಲಿ ಮುಖ್ಯವಾದ ಬೆಳೆ ಅಡಿಕೆ ಮತ್ತು ತೆಂಗು ಈ ಬೆಳೆಗಳಿಗೆ ರೈತರು ಹೆಚ್ಚು ಅವಲಂಬಿತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಡಿಕೆ ಬೆಳೆ ಹಲವಾರು ರೋಗಗಳಿಗೆ ತುತ್ತಾಗುತ್ತಿದೆ. ಈ ಹಿಂದೆ ಅಡಿಕೆ ಬೆಳೆಯಲ್ಲಿ ಕಡಿಮೆ ಹಾನಿ ಉಂಟು ಮಾಡುತ್ತಿದ್ದ ರೋಗಗಳು ಇತ್ತೀಚಿನ ವ?ಗಳಲ್ಲಿ ವಾತಾವರಣದಲ್ಲಿ ಉಂಟಾಗುತ್ತಿರುವ ಏರುಪೇರಿನಿಂದಾಗಿ ರೋಗಗಳು ಹೆಚ್ಚಿ ಅಧಿಕ ಹಾನಿಯನ್ನುಂಟು ಮಾಡುತ್ತಿವೆ.

ಅವುಗಳಲ್ಲಿ ಎಲೆ ಚುಕ್ಕೆ ರೋಗವು ಪ್ರಮುಖವಾಗಿದ್ದು, ಮಲೆನಾಡಿನೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದು ಈ ಭಾಗದ ಬೆಳೆಗಾರರಲ್ಲಿ ಹೆಚ್ಚು ಆತಂಕಕ್ಕೆ ಕಾರಣವಾಗುತ್ತಿದೆ. ಈ ರೋಗದಿಂದಾಗಿ ಅಡಿಕೆ ಇಳುವರಿ ಕುಂಠಿತವಾಗುತ್ತಿದ್ದು, ನಿರ್ದಿ? ಅವಧಿಯಲ್ಲಿ ಸರಿಯಾದ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಕಾರ್ಯಾಗಾರದ ಮುಖಾಂತರ ರೈತರಿಗೆ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ದಿಶಾ ಸಮಿತಿಯ ಸದಸ್ಯ ಕಲ್ಮರುಡಪ್ಪ, ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿಗಳಾದ ಡಾ.ಸುರೇಶ್, ಡಾ.ಸುಚಿತ್ರ ಕುಮಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ನೇತ್ರಾವತಿ, ರೈತ ಸಂಘದ ಮುಖಂಡ ಬಸವರಾಜು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.

It is necessary to make farmers financially strong.

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...