Home ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ
HomechikamagalurLatest Newsnamma chikmagalur

ರೈತರ ಅನುಕೂಲಕ್ಕಾಗಿ ಚಾನಲ್ ಕಾಮಗಾರಿ ಸ್ಥಗಿತಗೊಳಿಸಲು ಆಗ್ರಹ

Share
Share

ಚಿಕ್ಕಮಗಳೂರು: ಅಯ್ಯನಕೆರೆ ಕೋಡಿಬಿದ್ದು ಹರಿಯುವ ನೀರಿನಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿ ಎಂದು ಸರ್ಕಾರ ಅನುಮೋದನೆ ನೀಡಿದ್ದು, ಈ ಯೋಜನೆಯ ಬಗ್ಗೆ ಎರಡೂ ಭಾಗದ ರೈತರ ಗಮನಕ್ಕೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಿಲ್ಲ ಎಂದು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ. ಲೋಕೇಶ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಸಕರು, ಜನಪ್ರತಿನಿಧಿಗಳು ಹಾಗೂ ಎರಡೂ ಭಾಗದ ರೈತರನ್ನೊಳಗೊಂಡ ಸಭೆಯನ್ನು ಜಿಲ್ಲಾಧಿಕಾರಿಗಳು ಕರೆದು ಯಥಾಸ್ಥಿತಿ ಕಾಪಾಡಬೇಕು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಕ್ಷಣದಿಂದಲೇ ಚಾನಲ್ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿದರು.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಇಂಜಿನಿಯರ್‌ಗಳು ಅವೈಜ್ಞಾನಿಕವಾಗಿ ದಾಖಲೆಗಳನ್ನು ಸೃಷ್ಟಿಸಿ ಅಗ್ರಹಾರದ ಚೆಕ್‌ಡ್ಯಾಂ ನಿಂದ ನೀರೆತ್ತುವ ಕಾಮಗಾರಿ ಕಾರ್ಯರೂಪಗೊಳಿಸಿರುವುದನ್ನು ಖಂಡಿಸಿದರು.

ಸುಮಾರು ಕಡೂರು ಭಾಗದ ೫೧ ಹಳ್ಳಿಗಳ ರೈತರಿಗೆ ವೇದಾ ನದಿಯು ಜೀವನದಿಯಾಗಿದೆ. ಇಂದಿಗೂ ಕುಡಿಯಲು ಈ ನದಿ ನೀರನ್ನು ಬಳಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು, ಶಾಸಕರು ಕ್ರಮ ವಹಿಸುವಂತೆ ಮನವಿ ಮಾಡಿದರು.

ಅಯ್ಯನಕೆರೆಯಿಂದ ಕೋಡಿಬಿದ್ದ ನೀರು ಜೀವನಾಡಿಯಾದ ವೇದಾ ನದಿಗೆ ಬರುವುದೇ ಇಲ್ಲ. ಕೋಡಿಬಿದ್ದ ನೀರು ೩೫೪೦ ಕ್ಯೂಸೆಕ್ಸ್ ಹೊರ ಹರಿಯುತ್ತದೆ ಎಂದು ಡಿಪಿಆರ್‌ನಲ್ಲಿ ನಮೂದಿಸಿರುವುದು ಇದು ಶುದ್ಧ ಸುಳ್ಳು, ಅವೈಜ್ಞಾನಿಕವಾಗಿದೆ ಎಂದು ದೂರಿದರು.

ಮಾನ್ಸೂನ್ ಪ್ರಾರಂಭವಾದ ೪೫ ದಿನಗಳಲ್ಲಿ ದಿನಕ್ಕೆ ೨೨ ಗಂಟೆ ೨೦೦ ಅಶ್ವಶಕ್ತಿಯ ಪಂಪ್‌ನಿಂದ ನೀರೆತ್ತುವ ಕೆಲಸ ಪ್ರಾರಂಭವಾಗುತ್ತದೆ ಎಂದು ಮಾಜಿ ಜಿ.ಪಂ ಸದಸ್ಯ ಹೆಚ್.ಸಿ ಕಲ್ಮರುಡಪ್ಪ ಅವರು ಮಾಹಿತಿ ಇಲ್ಲದೆ ತಪ್ಪು ಹೇಳಿಕೆ ನೀಡಿದ್ದಾರೆ. ಅಯ್ಯನ ಕೆರೆಯಿಂದ ಹೊರ ಹರಿಯುವ ನೀರಿಗೂ ವೇದಾ ನದಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿಗಣೇಹಳ್ಳಿ ಗ್ರಾ.ಪಂ ಸದಸ್ಯ ಬಸವರಾಜ್ ಉಪಸ್ಥಿತರಿದ್ದರು.

Demand to stop channel work for the benefit of farmers

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...