Home namma chikmagalur ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು
namma chikmagalurCrime NewsHomeKadurLatest News

ರಸ್ತೆ ಅಪಘಾತದಲ್ಲಿ ದಾವಣಗೆರೆಯ ಉದ್ಯಮಿ ಸಾವು

Share
Share

ಕಡೂರು: ತಾಲ್ಲೂಕಿನ ಕನಕರಾಯನಗುಡ್ಡದ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ದಾವಣಗೆರೆಯ ಉದ್ಯಮಿ ಪ್ರತಾಪ್‌ ರಾವ್ (52) ಮೃತಪಟ್ಟವರು. ದಾವಣಗೆರೆ ಎಸ್‌.ಎಸ್ ಲೇಔಟ್‌ನ ನಿವಾಸಿ ಪ್ರತಾಪ್‌ರಾವ್ ಅವರು ಬುಧವಾರ ಬೆಳಿಗ್ಗೆ ಪತ್ನಿ ಮತ್ತು ಮಗುವಿನೊಡನೆ ಕಡೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಮೂಲಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಹಾಸನದಿಂದ ಬೀರೂರು ಕಡೆ ತೆರಳುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಹಾಗೂ ಟ್ಯಾಂಕರ್ ಎರಡೂ ಪಲ್ಟಿಯಾಗಿದ್ದು, ಟ್ಯಾಂಕರ್‌ನಲ್ಲಿದ್ದ ಡೀಸೆಲ್ ಸೋರಿಕೆಯಾಗಿದೆ. ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಠಾಣೆಯ ಎಎಫ್‌ಎಫ್‌ಎಫ್ ವಾಹನ ಮತ್ತು ಹೆದ್ದಾರಿ ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದವು. ಫೋಮ್ ಸಿಂಪಡಿಸಿ, ಬೆಂಕಿ ತಗುಲದಂತೆ ಎಚ್ಚರಿಕೆ ವಹಿಸಿ, ಕ್ರೇನ್ ಮೂಲಕ ಟ್ಯಾಂಕರ್‌ ಅನ್ನು ಎತ್ತಿ ನಿಲ್ಲಿಸಲಾಯಿತು.

ಕಾರಿನಲ್ಲಿದ್ದ ಸೋಫಿ ಮತ್ತು ಪುತ್ರ, ಟ್ಯಾಂಕರ್ ಚಾಲಕ ವಿಜಯಕುಮಾರ್‌ ಅವರನ್ನು ಕಡೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ, ಟ್ಯಾಂಕರ್ ಚಾಲಕನನ್ನು ಅರಸೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ನಿಯಂತ್ರಣ ಮತ್ತು ಪರಿಹಾರ ಕಾರ್ಯಗಳಲ್ಲಿ ಕಡೂರು ಠಾಣೆಯ ಪಿಎಸ್‌ಐಗಳಾದ ಸಜಿತ್‌ಕುಮಾರ್ ಜಿ.ಆರ್., ಧನಂಜಯ್ ಮತ್ತು ಲೀಲಾವತಿ ಆರ್. ಹಾಗೂ ಅಗ್ನಿಶಾಮಕ ಸಿಬ್ಬಂದಿ ಶ್ರಮಿಸಿದರು. ಪ್ರತಾಪ್‌ರಾವ್ ಅವರ ಪತ್ನಿ ಸೋಫಿ ಅವರು ನೀಡಿದ ದೂರಿನನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Davangere businessman dies in road accident

Share

Leave a comment

Leave a Reply

Your email address will not be published. Required fields are marked *

Don't Miss

ಹಿರೇಬೈಲು ಗ್ರಾಮದಲ್ಲಿ ನಕಲಿ ವೈದ್ಯನ ವಿರುದ್ಧ ಕ್ರಮ

ಕಳಸ: ಹಿರೇಬೈಲು ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ನಕಲಿ ವೈದ್ಯನ ವಿರುದ್ಧ ಕ್ರಮ ಕೈಗೊಂಡಿದ್ದು, ಕ್ಲಿನಿಕ್ ಅನ್ನು ಬಂದ್ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯವರು ತಿಳಿಸಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಆರೋಗ್ಯ ಇಲಾಖೆ...

ವಿದ್ಯುತ್‌ಶಾಕ್‌ನಿಂದ ಲೈನ್‌ಮ್ಯಾನ್ ಸಾವು

ಬಾಳೆಹೊನ್ನೂರು: ಆಲ್ದೂರು ವಲಯದ ಸಂಗಮೇಶ್ವರ ಪೇಟೆಯ ಸೆಕ್ಷನ್ ಪವರ್‌ಮ್ಯಾನ್ ಪ್ರವೀಣ ಪಾತ್ರೋಟ(25) ವಿದ್ಯುತ್ ಆಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿ ಗ್ರಾಮದ ಪ್ರವೀಣ ಅವರು, ಶುಕ್ರವಾರ ಬೆಳಿಗ್ಗೆ ಹುಣಸೇಕೊಪ್ಪ ಬಳಿ...

Related Articles

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು)...

ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಕುದುರೆಮುಖ, ಮುಳ್ಳಯ್ಯನ...

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್...