Home ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ
HomechikamagalurLatest Newsnamma chikmagalur

ನಯನ ಮೋಟಮ್ಮ ಕ್ಷೇತ್ರ ದರ್ಶನಕ್ಕೆ ಬಾರಮ್ಮ

Share
Share

ಮೂಡಿಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡಬಿಡದೆ ಮಳೆ ಬರುತ್ತಿದ್ದು ಅನಾಹುತದ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಮಲೆನಾಡನಲ್ಲಿ ಜನ ಹೆಚ್ಚಿನ ಸಂಕಷ್ಟದಲ್ಲಿ ಇದ್ದಾರೆ.ಕಳಸ ಸಮೀಪ ಭದ್ರಾ ನದಿಗೆ ಪಿಕ್ ಅಪ್ ಸಮೇತ ಶಮಂತ್(23) ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಈ ವಿಷಯ ತಿಳಿದ ತಕ್ಷಣ ಶಮಂತ್ ತಾಯಿ ರವಿಕಲಾ(48) ಕೆರೆಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.ಈ ಭಾಗದಲ್ಲಿ ಜನತೆ ಮಳೆಯ ಜೊತೆಗೆ ಸಾವುಗಳನ್ನು ನೋಡಿ ತಲ್ಲಣಿಸಿದ್ದಾರೆ.ಆದರೆ ಶಾಸಕಿ ನಯನ ನನಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ಬೆಂಗಳೂರಿನಲ್ಲಿ ಇದ್ದಾರೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅನಾಹುತಗಳು ಸಂಭವಿಸುವುದು ಆಕಸ್ಮಿಕವಾಗಿ ನಡೆಯುತ್ತವೆ.ಆದರೆ ತಕ್ಷಣ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಅಧಿಕಾರಿಗಳಿಗೆ ಹೇಳಿ ಕೆಲಸ ಮಾಡಿಸುವುದು ಬೇರೆ ಜನಪ್ರತಿನಿಧಿಯಾಗಿ ಬೆಂಗಳೂರು ಸೇರಿರುವ ನಯನ ಬಗ್ಗೆ ಜನ ಬಹು ಬೇಸರದಿಂದ ಮಾತನಾಡುತ್ತಿರುವುದರ ಜೊತೆಗೆ ಕಾಂಗ್ರೆಸ್ ಪಕ್ಷದವರೆ ಇಂತಹ ಶಾಸಕರನ್ನು ಗೆಲ್ಲಿಸಿ ಕೊಂಡೆವು ಎಂದು ಕೈ,ಕೈ ಹಿಸುಕಿ ಕೊಳ್ಳುತ್ತಿದ್ದಾರೆ ಜೊತೆಗೆ ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯೆಯ ಜೊತೆಗೆ ಬುದ್ದಿ ಬೇಕು ಆಗ ಜನರ ಜೊತೆಗೆ ಬರೆಯುವುದು ಮತ್ತು ಸ್ಪಂದಿಸುವ ಗುಣಗಳು ಬರುತ್ತವೆ.ಕಾನ್ವೆಂಟ್ ಶಿಕ್ಷಣ ಹೈಟೆಕ್ ಸಂಸ್ಕೃತಿ ಹೈ_ಪೈ ಬೆಂಗಳೂರು ಓಡಾಟ ನಡೆಸಿದರೆ ಇಲ್ಲಿ ಜನ ಹೈರಾಣಾಗಿದ್ದಾರೆ. ಈಗಾಗಲೇ ಯಾವುದೇ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸುವುದಿಲ್ಲ ಹೋಗಲಿ ಸಂಕಷ್ಟದ ಸಮಯದಲ್ಲೂ ದೂರದ ಬೆಂಗಳೂರು ತೋರಿಸುವ ಮೂಲಕ ಜನಸಾಮಾನ್ಯರ ಜೊತೆಗೆ ಸಂಪರ್ಕ ಇಲ್ಲ ಎಂಬಂತೆ ಪದೇ,ಪದೇ ವರ್ತಿಸಿದರೆ ಕಷ್ಟ ಯಾರ ಬಳಿ ಹೇಳಿಕೊಳ್ಳುವುದು ಎನ್ನುತ್ತಿದ್ದಾರೆ.

ಮೃತರಾದವರು ವಾಪಸ್ ಬರಲ್ಲಾ ದುಃಖಿತರನ್ನು ಸಮಾಧಾನಪಡಿಸುವ ಜೊತೆಗೆ ಕೈಲಾದ ನೆರವು ನೀಡುವ ಜವಾಬ್ದಾರಿ ಬೇಡವೇ ? ಅಧಿಕಾರ ಶಾಶ್ವತವಲ್ಲ ನಿಜ ಆದರೆ ಆಧಿಕಾರ ಇದ್ದಾಗ ನೆನಪು ಉಳಿಯುವಂತ ಕೆಲಸದ ಜೊತೆಗೆ ನಮ್ಮ ನಡಾವಳಿಗಳು ಜನರಿಗೆ ಹತ್ತಿರ ವಾಗಿರಬೇಕು.ಸದ್ಯ ಆಡಳಿತ ಪಕ್ಷದವರು ಎರೆಹುಳುವಿನಂತೆ ತೆವಳಿದರೆ ವಿರೋಧ ಪಕ್ಷಗಳು ಕೋಮಾದಲ್ಲಿ ಇರುವುದರಿಂದ ಆಡಳಿತ ಪಕ್ಷದವರಿಗೆ ಆತಂಕ ಇಲ್ಲ ನಯನ ಮೋಟಮ್ಮ ಬೆಂಗಳೂರಿನಿಂದಲೇ ಆಡಳಿತ ನಡೆಸಬಹುದು.

Nayana Motamma

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ‌ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ...

40 ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...

Related Articles

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು...

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩...

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ...

ದೇಶ ಸುಭದ್ರಗೊಳಿಸಲು ಯುವಕರು ಯೋಧರಾಗಿ

ಚಿಕ್ಕಮಗಳೂರು:  ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ವಯಸ್ಸಿನಲ್ಲಿ ವ್ಯಸ ನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು...