Home namma chikmagalur ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ
namma chikmagalurchikamagalurHomeLatest News

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

Share
Share

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ.

ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ ಮಳೆ ಸುರಿದಿದೆ.

ಭಾರಿ ಮಳೆಯಿಂದಾಗಿ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರ್‌ನಲ್ಲಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಶೃಂಗೇರಿಯ ಭಾರತೀತೀರ್ಥ ರಸ್ತೆ ಹಾಗೂ ಕುರುಬಕೇರಿ ರಸ್ತೆ 2 ಕಡೆ ನೀರಿನಿಂದ ತುಂಬಿದ್ದು, ಮಧ್ಯೆ ದ್ವೀಪದಂತಾಗಿದೆ.

ತಾಲ್ಲೂಕಿನ ನರಸಿಂಹ ಪರ್ವತದ ಎರಡು ಕೊಳಗಳು, ಬರ್ಕಣ, ಸಿರಿಮನೆ, ಸೂತನಬ್ಬಿ ಮುಂತಾದ ಜಲಪಾತಗಳು ತುಂಬಿ ಉಕ್ಕಿ ಹರಿಯುತ್ತಿದ್ದು, ಭತ್ತದ ಗದ್ದೆಗಳು ಜಲಾವೃತವಾಗಿದೆ.

ತುಂಗಾನದಿ ಉಕ್ಕಿ ಹರಿದು ಶಾರದಾ ಪೀಠದ ಗುರುಗಳಾದ ಭಾರತೀತೀರ್ಥ ಸ್ವಾಮಿಜೀಯವರ ಸ್ನಾನ ಘಟ್ಟ, ಸಂದ್ಯಾವಂದನೆ ಮಂಟಪ ಮುಳುಗಿದೆ. ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ಗಾಂಧಿ ಮೈದಾನ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ ಹಳ್ಳ ಸೇತುವೆ ಮೇಲೆ, ಕೆರೆಕಟ್ಟೆಯ ಗುಲುಗುಂಜಿ ಮನೆ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

ತಾಲ್ಲೂಕಿನ 49 ಗ್ರಾಮಗಳಲ್ಲಿ ಶಿರ್ಲು, ಹಾದಿ, ಕೆರೆ, ಸುಂಕದಮಕ್ಕಿ, ನಿಲಂದೂರು, ಕುಂಬ್ರಗೋಡು, ಕೂಗೋಡು ಪಟ್ಟಣದಿಂದ 25ರಿಂದ 30 ಕಿ.ಮೀ. ದೂರವಿದ್ದು, ಅನಾರೋಗ್ಯ, ಅಪಘಾತ ಸಂಭವಿಸಿದರೆ ಆಸ್ಪತ್ರೆಗೆ ಬರಲು ಜನರು ಹರಸಾಹಸ ಪಡಬೇಕಿದೆ.

ಮಳೆಯಿಂದಾಗಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಕಡಿತಗೊಂಡಿದ್ದ ವಿದ್ಯುತ್‌ ಶನಿವಾರದವರೆಗೂ ಬಂದಿಲ್ಲ. ಇದರಿಂದ ಪಟ್ಟಣ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಬಾರದೆ ಜನರು ಸಂಕಷ್ಟ ಎದುರಿಸುವಂತಾಯಿತು.

ಮಳೆಯಿಂದಾಗಿ ತೋಟಗಾರಿಕೆ ಬೆಳೆಗಳಿಗೆ ಬೋರ್ಡೋ, ಗೊಬ್ಬರ ನೀಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಅಡಿಕೆ, ಕಾಳು ಮೆಣಸಿಗೆ ಕೊಳೆರೋಗ, ಕಾಫಿಗೆ ಸೊರಗು ರೋಗ ಬಂದಿದ್ದು ರೈತರು ಆತಂಕಕ್ಕೆ ಒಳಗಾಗಿದ್ದಾರೆ.

ತಾಲ್ಲೂಕಿನ ಗುಬ್ಬುಗೋಡಿನಲ್ಲಿ 3 ಕಂಬ, ಕೈಮನೆಯಲ್ಲಿ 2 ಕಂಬ, ಕಾನುಗೋಡಿನಲ್ಲಿ 1 ಕಂಬ, ಹಿಂಡ್ರವಳ್ಳಿಯಲ್ಲಿ 2 ಕಂಬ, ತನಿಕೋಡಿನಲ್ಲಿ 3 ಕಂಬ, ಹಾಲಂದೂರಿನಲ್ಲಿ 2 ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಪ್ರವಾಹದಿಂದ ಯಾರು ದಿಕ್ಕೆಡಬಾರದೆಂದು ತಹಶೀಲ್ದಾರ್ ಅನುಪ್ ಸಂಜೋಗ್, ಇ.ಒ ಸುಧೀಪ್, ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಅಭಿಷೇಕ್, ಅಗ್ನಿ ಶಾಮಕ ಸಿಬ್ಬಂದಿ ತೀವ್ರ ಎಚ್ಚರ ವಹಿಸಿದ್ದಾರೆ.

ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಶನಿವಾರವೂ ಧಾರಾಕಾರವಾಗಿ ಸುರಿಯಿತು. ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಚಿಕ್ಕಮಗಳೂರು ನಗರ ಸೇರಿ ಮಲೆನಾಡಿನ ಎಲ್ಲೆಡೆ ಮಳೆ ಆರ್ಭಟಿಸಿತು.

ಮಲೆನಾಡಿನ ತಾಲ್ಲೂಕುಗಳಲ್ಲಿ ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಮುಳ್ಳಯ್ಯನಗಿರಿ ಸುತ್ತಮುತ್ತ ಎಡಬಿಡದೆ ಸುರಿದ ಮಳೆ ಮತ್ತು ಬಿರುಗಾಳಿಯ ನಡುವೆ ಪ್ರವಾಸಿಗರು ಪರದಾಡಿದರು.

Heavy rains cause flooding in Tunga River in Sringeri

 

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮ ಮನೆ ಮಂಜೂರು: ಬಿಲ್ ಕಲೆಕ್ಟರ್-ಪಿಡಿಒಗೆ ಒಂದು ವರ್ಷ ಸಜೆ

ಚಿಕ್ಕಮಗಳೂರು: ಅಕ್ರಮವಾಗಿ ತನ್ನ ತಾಯಿಯ ಹೆಸರಿಗೆ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ತಲಾ ಒಂದು ವರ್ಷ ಸಜೆ ಹಾಗೂ ೧೫ ಸಾವಿರ ರೂ....

ರೈತ ಸಂಘಟನೆ ದಾರಿ ಬಿಟ್ಟಿತು ? ಎಲ್ಲಿಗೆ ಪಯಣ ಯಾವುದೋ ದಾರಿ !

ಮಾಸದಿರಲಿ ಬದಲಾಯಿಸದಿರಲಿ ರೈತರ ಹೆಗಲ ಮೇಲೇರಿರುವ ಶಾಲಿನ ಹಸಿರು ಬಣ್ಣ. ದೇಶಕ್ಕೆ ಅನ್ನ ಕೊಡುವ ರೈತ ಇಂದಿಗೂ ಖಾಲಿ ಹೊಟ್ಟೆಯ ಬರಿಗೈ ಬಂಟ. ಇದು 45ನೇ ರೈತ ಹುತಾತ್ಮ ದಿನಾಚರಣೆ ಸಂದರ್ಭ....

Related Articles

ಕರ್ತಿಕೆರೆ ಪಂಚಾಯತಿ ಅಕ್ರಮ ವಿರುದ್ಧ ಲೋಕಾಯುಕ್ತಕ್ಕೆ ದೂರು

ಚಿಕ್ಕಮಗಳೂರು:  ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ಅವ್ಯವಹಾರಗಳು ನಡೆದಿರುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...

ರಸಗೊಬ್ಬರ ದಾಸ್ತಾನು ಮಾಡದ ರೈತ ವಿರೋಧಿ ಸರ್ಕಾರ

ಚಿಕ್ಕಮಗಳೂರು: ರಾಜ್ಯಸರ್ಕಾರ ರೈತರ ಬೇಡಿಕೆಗನುಗುಣವಾಗಿ ರಸಗೊಬ್ಬರ ದಾಸ್ತಾನು ಮಾಡುವಲ್ಲಿ ವಿಫಲವಾಗಿದ್ದು, ಕೇಂದ್ರ ಸರ್ಕಾರದ ಮೇಲೆ ಗೂಬೆ...

ಬಾಳೆಹೊನ್ನೂರಿನ ಪುಂಡಾನೆಗಳ ಸೆರೆಗೆ ಸಚಿವರ ಆದೇಶ

ಚಿಕ್ಕಮಗಳೂರು:  ಹೊಸ ಪ್ರದೇಶದಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ನೆರೆ ಜಿಲ್ಲೆಯ ಆನೆ ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯ ನೆರವು...

ಭದ್ರಾ ನದಿಯಲ್ಲಿ ಪತ್ತೆ ಚಾಲಕ ಶಮಂತಾ ಮೃತದೇಹ ಪತ್ತೆ

ಕಳಸ: ಜೀಪ್ ಸಮೇತ ಚಾಲಕ ಭದ್ರಾ ನದಿಗೆ ಬಿದ್ದ ಪ್ರಕರಣದಲ್ಲಿ ಕೊಳಮಾಗೆಯಿಂದ ೧ ಕಿ.ಮೀ ದೂರದ...