Home Latest News ಮೂಲಭೂತ ಸೌಲಭ್ಯ ಕಲ್ಪಿಸಲು ಜ್ಯೋತಿನಗರ ಬಡಾವಣೆ ನಿವಾಸಿಗಳ ಮನವಿ
Latest NewschikamagalurHomenamma chikmagalur

ಮೂಲಭೂತ ಸೌಲಭ್ಯ ಕಲ್ಪಿಸಲು ಜ್ಯೋತಿನಗರ ಬಡಾವಣೆ ನಿವಾಸಿಗಳ ಮನವಿ

Share
Share

ಚಿಕ್ಕಮಗಳೂರು: ನಗರದ ಜ್ಯೋತಿ ನಗರ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ತಿಳಿಸಿದರು.

ಭಾನುವಾರ ನಗರದ ಜ್ಯೋತಿ ನಗರ ಬಡಾವಣೆಗೆ ಭೇಟಿ ನೀಡಿ ಇಲ್ಲಿನ ರಸ್ತೆ, ಚರಂಡಿ, ಉದ್ಯಾನವನ, ಖಾಲಿ ನಿವೇಶನಗಳ ಅವ್ಯವಸ್ಥೆಯನ್ನು ಪರಿಶೀಲಿಸಿ ನಂತರ ಬಡಾವಣೆಯಲ್ಲಿನ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿ ದರು.

ಜ್ಯೋತಿ ನಗರ ಬಡಾವಣೆಯ ರಸ್ತೆಗಳು ಹೊಂಡಗುಂಡಿಗಳಿಂದ ಕೂಡಿದೆ. ಚರಂಡಿ ಹಾಗೂ ಉದ್ಯಾನವನಗಳು ಅವ್ಯವಸ್ಥೆ ಯಿಂದ ಕೂಡಿದ್ದು, ಖುದ್ದು ಪರಿಶೀಲಿಸಿದ್ದೇನೆ. ರಸ್ತೆ, ಚರಂಡಿ ಹಾಗೂ ಉದ್ಯಾನವನಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಬಡಾ ವಣೆ ನಿವಾಸಿಗಳಿಗೆ ಭರವಸೆ ನೀಡಿದರು.

ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಬಡಾವಣೆಯ ರಸ್ತೆ ಹಾಗೂ ಚರಂಡಿಯನ್ನು ನಗರಸಭೆಯಿಂದ ಅಭಿವೃದ್ಧಿಪಡಿಸಲಾಗುವುದು. ರಸ್ತೆ ತಿರುವಿನಲ್ಲಿ ವಿದ್ಯುತ್ ಕಂಬವಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಗಮನಕ್ಕೆ ತಂದಿದ್ದು ವಿದ್ಯುತ್ ಕಂಬ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಡಾವಣೆಯಲ್ಲಿ ಉದ್ಯಾನವನಗಳ ಜಾಗ ಒತ್ತುವರಿಯಾಗಿದೆ ಎಂಬದು ತಿಳಿದು ಬಂದಿದ್ದು, ಉದ್ಯಾನವನಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಹಾಗೂ ವಿಶಾಲ್ ಮಾರ್ಟ್ ಪಕ್ಕದಲ್ಲಿನ ರಸ್ತೆ ಒತ್ತುವರಿಯಾಗಿದೆ. ಕಿರಿದಾದ ರಸ್ತೆಯಿಂದ ವಾಹನ ದಟ್ಟಣೆ ಉಂಟಾಗುತ್ತಿದ್ದು, ಪ್ರತಿನಿತ್ಯ ಅಪಘಾತಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ರಸ್ತೆ ಒತ್ತುವರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಬಡಾವಣೆಯ ನಿವಾಸಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಬಡಾವಣೆಯ ಸಾರಥಿ ಕಾಫಿ ಕ್ಯೂರಿಂಗ್ ಎದುರಿನ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು ಸಂಚಾರಿಸುವುದು ಕಷ್ಟವಾಗಿದೆ. ಲಕ್ಷ್ಮೀಶ (ಪಾಪಣ್ಣ) ಎಂಬುವರ ಮನೆಯ ಮುಂಭಾಗದಲ್ಲಿ ಗಣಪತಿ ದೇವಸ್ಥಾನ ತಿರುಗುವ ರಸ್ತೆಯಲ್ಲಿ ವಿದ್ಯುತ್ ಕಂಬವಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಡಾವಣೆಯಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗವನ್ನು ಗುರುತಿಸಿ ಒತ್ತುವರಿಯಾಗದಂತೆ ಸಂರಕ್ಷಿಸುವ ಜತೆಗೆ ಬಡಾವಣೆಯ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಗುರು ಮಲ್ಲಪ್ಪ, ಸತೀಶ್ ಸೇರಿದಂತೆ ಬಡಾವಣೆಯ ನಿವಾಸಿಗಳು ಇದ್ದರು.

Jyothi Nagar residents appeal for basic facilities

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ವಿದ್ಯಾರ್ಥಿಗಳು ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳ ಬೇಕೆಂದು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ...

ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ರೈತ ಹುತಾತ್ಮ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಪಕ್ಷ ಸಂಘಟನೆಗಳಿಂದ ನಗರದಲ್ಲಿ ಇಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಆಜಾದ್ ಪಾರ್ಕಿನಲ್ಲಿ ಹಸಿರು ಬಾವುಟದೊಂದಿಗೆ ಸಮಾವೇಶಗೊಂಡ ನೂರಾರು ರೈತರು, ವಿವಿಧ...

Related Articles

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ

ಆಲ್ದೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ರಾಜ್ಯ...

ಯುವಜನರಿಗೆ ಅಬ್ದುಲ್ ಕಲಾಂ ಸ್ಪೂರ್ತಿದಾಯಕ ವ್ಯಕ್ತಿ

ಚಿಕ್ಕಮಗಳೂರು:  ಬಾಹ್ಯಕಾಶದ ವಿಜ್ಞಾನಿ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಅವರ ೧೦ನೇ ವರ್ಷದ ಪುಣ್ಮಸ್ಮರಣೆ ಅಂಗವಾಗಿ ನಗರದ...

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು....

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ...