Home namma chikmagalur ಕಾಡಾನೆ ದಾಳಿ ಖಂಡಿಸಿ ಬಾಳೆಹೊನ್ನೂರು-ಖಾಂಡ್ಯ ಸಂಪೂರ್ಣ ಬಂದ್‌
namma chikmagalurchikamagalurHomeLatest News

ಕಾಡಾನೆ ದಾಳಿ ಖಂಡಿಸಿ ಬಾಳೆಹೊನ್ನೂರು-ಖಾಂಡ್ಯ ಸಂಪೂರ್ಣ ಬಂದ್‌

Share
Share

ಬಾಳೆಹೊನ್ನೂರು: ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಪುಂಡಾನೆ ಸೆರೆಹಿಡಿಯುವಂತೆ ಒತ್ತಾಯಿಸಿ ವರ್ತಕರು ಸ್ವಯಂ ಪ್ರೇರಿತವಾಗಿ ಬಾಳೆಹೊನ್ನೂರು-ಖಾಂಡ್ಯವನ್ನು ಸಂಪೂರ್ಣ ಬಂದ್‌ಮಾಡಲಾಗಿದೆ.

ನಾಲ್ಕು ದಿನದ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರಿಂದ ಸ್ವಯಂಪ್ರೇರಿತವಾಗಿ ಬಾಳೆಹೊನ್ನೂರು ಬಂದ್‌ಗೆ ಸ್ಥಳೀಯರು ಕರೆನೀಡಿದ್ದು, ಬಂದ್ ಯಶಸ್ವಿಯಾಗಿದೆ.ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.

ಬಾಳೆಹೊನ್ನೂರಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಸಾವಪ್ಪಿದ್ದು, ಸರ್ವ ಪಕ್ಷಗಳ ನೇತೃತ್ವದಲ್ಲಿ ಖಾಂಡ್ಯದಲ್ಲಿ ರಾಜ್ಯಹೆದ್ದಾರಿ ರಸ್ತೆ ತಡೆನಡೆಸಿ ಪ್ರತಿಭಟನೆ ನಡೆಸಿದ್ದು, ಕಿ.ಮೀ.ಗಟ್ಟಲೆ ವಾಹನ ಸಂಚಾರ ಸ್ಥಗಿತಗೊಂಡಿತು.ಪ್ರತಿಭಟನಾಕಾರರು ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

ಬಾಳೆಹೊನ್ನೂರು ಅರಣ್ಯ ವಲಯ ಕಚೇರಿ ಮುಂದೆ ಸ್ಥಳೀಯರ ಪ್ರತಿಭಟನೆ ನಡೆಸಿದ್ದು, ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಸಂಸದ ಕೋಟಶ್ರೀನಿವಾಸಪೂಜಾರಿ ಅವರುಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟುಹಿಡಿದರು.

ಮೃತದೇಹವನ್ನು ಅರಣ್ಯ ಇಲಾಖೆ ಮುಂದಿಟ್ಟು ಪ್ರತಿಭಟನೆ ನಡೆಸಲು ಸಾರ್ವಜನಿಕರು ತೀರ್ಮಾನಿಸಿದರು. ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್, ಜೆಡಿಎಸ್ ರಾಜ್ಯ ಉಪಾದ್ಯಕ್ಷ ಸುಧಾಕರ್ ಸೇರಿ ಹಲವರು ಉಪಸ್ಥಿತರಿದ್ದು, ಸರ್ವ ಪಕ್ಷ ಮತ್ತು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.

ಜಿಲ್ಲೆಯ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರಲ್ಲಿ ರೈತರ ಉಗ್ರ ಹೋರಾಟ ಹಿನ್ನೆಲೆಯಲ್ಲಿ ರೈತರು ಬೀದಿಗಿಳಿಯುತ್ತಿದ್ದಂತೆ ಆನೆ ಸೆರೆಗೆ ಮುಂದಾದ ಸರ್ಕಾರ ರೈತರ ಪ್ರತಿಭಟನೆ ಮುಗಿಯುವ ಮೊದಲೇ ಕುಮ್ಕಿ ಆನೆಗಳ ಆಗಮನವಾಗಿದೆ.

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಬಿಡಾರದಿಂದ ನಾಲ್ಕು ಆನೆಗಳ ಬಂದಿದ್ದು, ತಕ್ಷಣ ಆನೆ ಸೆರೆಗೆ ಮುಂದಾಗು ವುದಾಗಿ ಹೇಳಿಕೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೋಮವಾರ ಮಧ್ಯಾಹ್ನದಿಂದಲೇ ಆನೆ ಕಾರ್ಯಾಚರಣೆ ಆರಂಭಗೊಂಡಿದೆ.

ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿರುವುದು ಇದೇ ಮೊದಲು ಅನ್ನಿಸುತ್ತಿದೆ.ಬಾಳೆಹೊನ್ನೂರಿನಲ್ಲಿ ಇಂದು ಮಧ್ಯಾಹ್ನ ಪುಂಡಾನೆ ಸೆರೆಹಿಡಿಯಲು ಸಾಕು ಆನೆಗಳಿಂದ ಕಾರ್ಯಾಚರಣೆ ಆರಂಭಗೊಂಡಿದ್ದು, ಕೊಡಗು, ಮೈಸೂರು, ಶಿವಮೊಗ್ಗದಿಂದ ವೈದ್ಯರ ತಂಡ ಆಗಮಿಸಿದೆ. ಆನೆ ಸೆರೆಗೆ ಅರಣ್ಯ ಇಲಾಖೆ, ಇಟಿಎಫ್ ಸಿಬ್ಬಂದಿ ಸನ್ಮದ್ಧವಾಗಿದ್ದಾರೆ.

Complete shutdown in Balehonnur-Khandya to condemn wild elephant attack

Share

Leave a comment

Leave a Reply

Your email address will not be published. Required fields are marked *

Don't Miss

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ವಿಕ್ರಮ ಅಮಟೆ ತಿಳಿಸಿದರು. ನಗರದ ಸ್ಪೆನ್ಸರ್ ರಸ್ತೆಯಲ್ಲಿ ಮ‌ನೆ ಮನೆಗೆ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ,...

Related Articles

ಹಲ್ಲೆ ನಡೆಸಿರುವ ಕುದುರೆಮುಖ ಪೇದೆ-ಠಾಣಾಧಿಕಾರಿಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ವಿನಾಕಾರಣ ಜಾತಿ ನಿಂದಲೇ ನಡೆಸಿ ಹಲ್ಲೆ ನಡೆಸಿರುವ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್...

ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಸಿರವಾಸೆ ಗ್ರಾಮದ ಸುಗಡವಾನಿ ಮತ್ತಿತರೆ ಊರುಗಳಲ್ಲಿನ ಜನವಸತಿ ಪ್ರದೇಶ, ಕೃಷಿ ಭೂಮಿಯ ವಿವಿಧ...

ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’...

ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ

ಚಿಕ್ಕಮಗಳೂರು: ಜಾತ್ಯಾತೀತ ಸಿದ್ಧಾಂತ ಪ್ರತಿಪಾದಿಸುವ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ನಯನ ಮೋಟಮ್ಮ ಅವರು ಪಕ್ಷದ...