Home namma chikmagalur ಮಲ್ಲಂದೂರು ರಸ್ತೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ
namma chikmagalurchikamagalurHomeLatest News

ಮಲ್ಲಂದೂರು ರಸ್ತೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ

Share
Share

ಚಿಕ್ಕಮಗಳೂರು: ನಗರಸಭೆಯಿಂದ ೧೫ ದಿನಗಳ ಮುನ್ನವೇ ಫುಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಉಲ್ಲಂಘಿಸಿರುವ ವರ್ತಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಸೂಚನೆ ನೀಡಿದರು.

ಅವರು ಇಂದು ನಗರಸಭೆಯಿಂದ ಏರ್ಪಡಿಸಲಾಗಿದ್ದ ನಗರದ ಮಲ್ಲಂದೂರು ರಸ್ತೆಯಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ ನಗರಸಭೆಯಿಂದ ಪರವಾನಗಿ ಪಡೆಯದೆ ಅನಧಿಕೃತವಾಗಿ ತರಕಾರಿ ಸೇರಿದಂತೆ ಹೂವು, ಹಣ್ಣು ಇನ್ನಿತರೆ ಅಂಗಡಿಗಳನ್ನು ನಡೆಸುತ್ತಿರುವ ವರ್ತಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಡಬಾರದು ಎಂದು ಹೇಳಿದರು.

ಪರವಾನಗಿ ಪಡೆಯದೆ ಎಷ್ಟು ವರ್ಷಗಳಾಗಿವೆ ಅಲ್ಲಿಂದ ಇಲ್ಲಿಯವರೆಗೆ ವರ್ತಕರಿಗೆ ದಂಡ ಸಹಿತ ಶುಲ್ಕ ವಿಧಿಸಿ ಪರವಾನಗಿ ನೀಡಬೇಕು ಹಾಗೂ ಖಾಲಿ ನಿವೇಶನಗಳಲ್ಲಿ ಗಿಡಘಂಟಿಗಳು ಬೆಳೆದಿದ್ದರೆ ಸಂಬಂಧಪಟ್ಟ ಮಾಲಿಕರಿಗೆ ಸೂಚನೆ ನೀಡಿ ಸ್ವಚ್ಚತೆ ಮಾಡಿಕೊಳ್ಳಬೇಕೆಂದು ತಾಕೀತು ಮಾಡಿ ಎಂದು ಸಲಹೆ ನೀಡಿದರು.

ಕಸವನ್ನು ನಿಗದಿತ ಸ್ಥಳದಲ್ಲಿ ಹಾಕದೆ ಎಲ್ಲೆಂದರಲ್ಲಿ ಹಾಕಿ ನಗರದ ಸೌಂದಂiiಕ್ಕೆ ಧಕ್ಕೆ ತರಲಾಗುತ್ತಿದೆ. ಈ ಬಗ್ಗೆ ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ, ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.

ಲಾಡ್ಜ್‌ಗಳ ನಿರ್ಮಾಣಕ್ಕೆ ನಗರಸಭೆಯಿಂದ ಪರವಾನಗಿ ನೀಡುವಾಗ ನಿಬಂಧನೆಗಳನ್ನು ವಿಧಿಸಿದ್ದು, ಕಟ್ಟಡ ಪೂರ್ಣಗೊಂಡ ಬಳಿಕ ಪಾರ್ಕಿಂಗ್‌ಗೆ ಮೀಸಲಿಟ್ಟಿದ್ದ ಜಾಗದಲ್ಲಿ ಪೆಟ್ಟಿಗೆ ಅಂಗಡಿಗೆ ಅನುಮತಿ ನೀಡಿ ವ್ಯಾಪಾರ ಮಾಡುತ್ತಿದ್ದಾರೆಂದು ದೂರಿದರು.

ಸಧ್ಯದಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆರ್‌ಟಿಓ ಪೊಲೀಸರು ಮತ್ತು ಪರಿಸರ ಇಲಾಖೆಯ ಮುಖ್ಯಸ್ಥರನ್ನೊಳಗೊಂಡ ಸಭೆ ನಡೆಸಿ ಸೂಕ್ತ ಕ್ರಮ ವಹಿಸುತ್ತೇವೆ ಎಂದ ಅವರು, ಹಾಲಿ ಇರುವ ರಸ್ತೆಯನ್ನು ಸ್ವಚ್ಚವಾಗಿಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

ಪೌರಕಾರ್ಮಿಕರ ಹುದ್ದೆ ಭರ್ತಿಯಾಗದ ಹೊರತು ಸಮಸ್ಯೆ ಇತ್ಯರ್ಥವಾಗುವುದಿಲ್ಲ, ನಗರದಲ್ಲಿ ಅಂಗಡಿಗಳು ಹೆಚ್ಚಾದಂತೆ ಕಸ ವಿಲೇವಾರಿ ಕಷ್ಟವಾಗುತ್ತಿದೆ. ಹಾಲಿ ೨೦೩ ಪೌರ ಕಾರ್ಮಿಕರ ಹುದ್ದೆಗೆ ಕೇವಲ ೧೭೫ ಜನ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆಂದು ಹೇಳಿದರು.

ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ವೈದ್ಯರು, ದಾದಿಯರು, ಪೌರ ಕಾರ್ಮಿಕರು, ಶಿಕ್ಷಕರನ್ನು ಭರ್ತಿಮಾಡುವಂತೆ ಆದ್ಯತೆ ನೀಡಬೇಕೆಂದು ಆಗ್ರಹಿಸುವುದಾಗಿ ಭರವಸೆ ನೀಡಿದರು.

ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಸಾರ್ವಜನಿಕರ ಸಂಚಾರಕ್ಕೆ ರಸ್ತೆಬದಿ ಫುಟ್‌ಪಾತ್ ಮೇಲೆ ವಸ್ತುಗಳನ್ನಿಟ್ಟು ವ್ಯಾಪಾರ ಮಾಡುತ್ತಿರುವುದರಿಂದ ತೊಂದರೆಯಾಗುತ್ತಿದೆ ಎಂದು ಬಂದ ದೂರಿನ ಹಿನ್ನೆಲೆಯಲ್ಲಿ ಇಂದು ಫಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವ ಮೂಲಕ ವರ್ತಕರಿಗೆ ಕಡಕ್ ಸೂಚನೆ ನೀಡಲಾಗಿದೆ ಎಂದರು.

ಸದಸ್ಯ ಎ.ಸಿ. ಕುಮಾರ್‌ಗೌಡ ಮಾತನಾಡಿ, ನಗರವನ್ನು ಸುಂದರ ಮತ್ತು ಸ್ವಚ್ಚ ನಗರವನ್ನಾಗಿ ಮಾಡಬೇಕೆಂಬ ಉದ್ದೇಶದೊಂದಿಗೆ ನಗರಸಭೆಯಿಂದ ಕಳೆದ ಒಂದು ತಿಂಗಳಿನಿಂದ ಸಂತೆ ಮಾರ್ಕೆಟ್ ಸ್ವಚ್ಚತೆ ಹಾಗೂ ಎಂಜಿ ರಸ್ತೆ, ಮಲ್ಲಂದೂರು ರಸ್ತೆಯ ಫುಟ್‌ಪಾತ್ ಮೇಲೆ ವಸ್ತುಗಳನ್ನಿಡುತ್ತಿರುವುದರಿಂದ ತೆರವುಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಗೋಪಿ, ಲಕ್ಷ್ಮಣ್, ಪೌರಾಯುಕ್ತ ಬಿ.ಸಿ ಬಸವರಾಜು, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ಅಣ್ನಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Footpath clearance operation on Mallandur Road

Share

Leave a comment

Leave a Reply

Your email address will not be published. Required fields are marked *

Don't Miss

ತಾಯ್ನಾಡಿನ ಋಣ ತೀರಿಸಲು ಸೈನಿಕ ವೃತ್ತಿ ಶ್ರೇಷ್ಟ

ಚಿಕ್ಕಮಗಳೂರು:  ಭೂಮಿಯಲ್ಲಿ ಜನಿಸಿದ ಮನುಜ ಕೊನೆಗೊಂದು ದಿನ ದೇಹವನ್ನು ತ್ಯಜಿಸಲೇಬೇಕು. ಈ ಮಧ್ಯೆದಲ್ಲಿ ತಾಯ್ನಾಡಿನ ಋಣ ತೀರಿಸಲು ಹಾಗೂ ಭಾರತವನ್ನು ಗಟ್ಟಿಗೊಳಿಸಲು ಸೈ ನಿಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದೆ ಎಂದು ಜಿಲ್ಲಾ...

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ...

Related Articles

ಮೇಲ್ವರ್ಗದರು ಮಾಡಿದ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು: ಹಾಂದಿ ಗ್ರಾಮದಲ್ಲಿ ಊರಿನವರು ವಾಸಿಸಲು ನಿವೇಶನಕ್ಕೆ ಉಚಿತವಾಗಿ ಜಾಗ ನೀಡಿದ ಕುಟುಂಬ ಸಮಸ್ಯೆ ಎದುರಿಸುವಂತಾಗಿದ್ದು,...

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು...

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು,...

ಬೀದಿ ನಾಯಿಗಳಿಗೆ ನಿಯಂತ್ರಣಕ್ಕೆ ಅಗತ್ಯ ಕ್ರಮ

ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ...