Home namma chikmagalur ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ
namma chikmagalurchikamagalurHomeLatest News

ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ

Share
????????????????????????????????????
Share

ಚಿಕ್ಕಮಗಳೂರು: ಜಾತ್ಯಾತೀತ ಸಿದ್ಧಾಂತ ಪ್ರತಿಪಾದಿಸುವ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ನಯನ ಮೋಟಮ್ಮ ಅವರು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ಕೋಮುವಾದಿಗಳೊಂದಿಗೆ ವೇದಿಕೆ ಹಂಚಿಕೊಂಡು ಕಾಂಗ್ರೇಸ್ ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿರುವುದು ಖಂಡನೀಯ ಎಂದು ಕೆ.ಪಿ.ಸಿ.ಸಿ. ವಕ್ತಾರ ಎಚ್.ಎಚ್. ದೇವರಾಜ್ ತಿಳಿಸಿದ್ದಾರೆ.

ಅವರು ಮಾಧ್ಯಮ ಹೇಳಿಕೆ ನೀಡಿ ಈ ವಿಷಯ ತಿಳಿಸಿದ್ದು ಇತ್ತೀಚೆಗೆ ಮೂಡಿಗೆರೆಂi ಅಡ್ಯಂತಾಯ ಬಯಲು ರಂಗ ಮಂದಿರದಲ್ಲಿ ಹಿಂದೂ ಮಹಾಗಣಪತಿ ಉತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೋಮು ವಾದಿಗಳಾಗಿ ಅನ್ಯ ಧರ್ಮಗಳ ವಿರುದ ದ್ವೇಷ ಕಾರುವ ಹಾಗೂ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಪ್ರಮೋದ್‌ಮುತಾಲಿಕ್ ಮತ್ತು ಸಂಘ ಪರಿವಾರದ ಮುಖಂಡರುಗಳೊಂದಿಗೆ ಸಾರ್ವಜನಿಕವಾಗಿ ವೇದಿಕೆ ಹಂಚಿ ಕೊಂಡಿರುವುದು ಕಾಂಗ್ರೇಸ್ ಸಿದ್ದಾಂತಕ್ಕೆ ವಿರುದ್ಧವಾದ ಆಕ್ಷಮ್ಯ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೇಸ್ ಪಕ್ಷ ಹಿಂದಿನಿಂದಲೂ ಡಾ. ಬಿ.ಆರ್.ಅಂಬೇಡ್ಕರ್ ಅವರು ಹಾಕಿ ಕೊಟ್ಟಿರುವ ಜಾತ್ಯಾತೀಯ ಸಮಾಜವಾದಿ ತತ್ವದಡಿಯಲ್ಲೇ ನಡೆದು ಕೊಂಡು ಬರುತ್ತಿದೆ ಇಂತಹ ಪಕ್ಷದಲ್ಲಿ ಆಯ್ಕೆಯಾಗಿರುವ ನಯನಾ ಮೋಟಮ್ಮ ಅವರು ಈ ರೀತಿ ಕೋಮುವಾದಿಗಳೊಂದಿಗೆ ಸಾರ್ವಜನಿಕವಾಗಿ ವೇದಿಕೆ ಹಂಚಿಕೊಳ್ಳುವುದು ಖಂಡನೀಯ ನಡವಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಅತ್ಯಂತ ಬಡತನದ ದಲಿತ ಕುಟುಂಬದ ಹಿನ್ನಲೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಬಂದ ನಯನಾ ಮೋಟಮ್ಮ ಅವರ ತಾಯಿ ಶ್ರೀಮತಿ ಮೋಟಮ್ಮನವರು ಶಾಸಕರಾಗಿ, ಸಚಿವರಾಗಿ ಮೇಲ್ಮನೆ ವಿರೋಧ ಪಕ್ಷದ ನಾಯಕರಾಗಿ ಅತ್ಯಂತ ಉನ್ನತ ಮಟ್ಟದ ಕಾಂಗ್ರೇಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದು, ದೇಶ ಕಂಡ ಮಹಾನ್ ನಾಯಕಿ ಅನೇಕ ಇಂದಿರಾಗಾಂಧಿಯವರಿಗೆ ಅತ್ಯಪ್ತರಾಗಿ ಕಾಂಗ್ರೇಸ್ ಪಕ್ಷದಲ್ಲಿ ಉತ್ತಮ ಹೆಸರು ಪಡೆದಿದ್ದು ಅವರ ಮಗಳಾದ ನಯನಾರವರ ಇಂತಹ ನಡವಳಿಕೆ ಯಿಂದ ಕಾಂಗ್ರೇಸ್ ಪಕ್ಷದ ಗೌರವಕ್ಕೆ ಧಕ್ಕೆ ಬರುವಂತಾಗಿದ್ದು ನಯನಾರವರ ಈ ನಡವಳಿಕೆಯ ಬಗ್ಗೆ ಗಂಭೀರವಾಗಿ ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಪಕ್ಷದ ವರಿಷ್ಠರ ಗಮನಕ್ಕೆ ತರುವುದಾಗಿ ದೇವರಾಜ್ ಅವರು ತಿಳಿಸಿದ್ದಾರೆ.

ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕರುಗಳಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮುಂತಾದ ಅನೇಕ ಮುಖಂಡರುಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಹಿರಿಯ ಮುಖಂಡರುಗಳು ಆರ್.ಎಸ್.ಎಸ್. ಮತ್ತು ಕೋಮುವಾದಿ ಶಕ್ತಿಗಳ ವಿರುದ್ಧ ಸಮರ ಸಾರಿದ್ದಾರೆ ಈ ಮಧ್ಯೆ ನಯನಾ ಮೋಟಮ್ಮನವರು ಕೋಮುವಾದಿಗಳ ಜೊತೆ ಕೈ ಜೋಡಿಸುತ್ತಿರುವುದು ದುರಾದೃಷ್ಟಕರವೆಂದು ವಿಷಾಧ ವ್ಯಕ್ತ ಪಡಿಸಿದ್ದಾರೆ.

ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಅನೇಕ ಪ್ರಗತಿಪರ ಸಂಘಟನೆಗಳು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ್ದವು ಯಾರೂ ಕೂಡ ನಯನಾ ಮೋಟಮ್ಮನವರ ಮುಖ ನೋಡಿ ಮತ ಹಾಕಿಲ್ಲ ಕಾಂಗ್ರೇಸ್ ಪಕ್ಷದ ಜಾತ್ಯಾತೀತ ಸಿದ್ದಾಂತಕ್ಕೆ ಮತ ಹಾಕಿದ್ದಾರೆ ಈಗ ನಯನಾ ಮೋಟಮ್ಮನವರು ಕೋಮುವಾದಿಗಳೊಂದಿಗೆ ಕೈ ಜೋಡಿಸುತ್ತಿರುವುದು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ ಪ್ರಗತಿ ಪರ ಸಂಘಟನೆಗಳು ಮತ್ತು ಮತದಾರರಿಗೆ ಮಾಡಿದ ದ್ರೋಹವಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕವಾಗಿ ಕೋಮುವಾದಿಗಳೊಂದಿಗೆ ವೇದಿಕೆ ಹಂಚಿಕೊಂಡಿ ದ್ದಲ್ಲದೆ ಪಕ್ಷಾಂತರದ ಮಾತುಗಳನ್ನಾಡಿರುವುದು ನಯನಾ ಮೋಟಮ್ಮ ರವರನ್ನು ಬೆಂಬಲಿಸಿದವರು ಪಶ್ಚಾತಾಪ ಪಡುವಂತಾಗಿದೆ ಈ ಬಗ್ಗೆ ನಯನಾ ಮೋಟಮ್ಮನವರು ಬಹಿರಂಗ ಕ್ಷಮೆ ಕೇಳಬೇಕು ಇಲ್ಲದಿದ್ದಲ್ಲಿ ನಗರದ ಗಾಂಧಿ ಪ್ರತಿಮೆ ಎದುರು ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಪ್ರಾಯಶ್ಚಿತ್ತ ಧರಣಿ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Embarrassment for the Congress party

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ...

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕಟಾರಿಯ ಸೂಚನೆ ನೀಡಿದ್ದಾರೆ.ಆದರೂ ಕಟಾರಿಯ ಸೂಚನೆಗೆ ನಾನು...

Related Articles

ಮೇಲ್ವರ್ಗದರು ಮಾಡಿದ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು: ಹಾಂದಿ ಗ್ರಾಮದಲ್ಲಿ ಊರಿನವರು ವಾಸಿಸಲು ನಿವೇಶನಕ್ಕೆ ಉಚಿತವಾಗಿ ಜಾಗ ನೀಡಿದ ಕುಟುಂಬ ಸಮಸ್ಯೆ ಎದುರಿಸುವಂತಾಗಿದ್ದು,...

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು...

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು,...

ಬೀದಿ ನಾಯಿಗಳಿಗೆ ನಿಯಂತ್ರಣಕ್ಕೆ ಅಗತ್ಯ ಕ್ರಮ

ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ...