Home Latest News ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ
Latest NewschikamagalurHomenamma chikmagalur

ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ

Share
Share

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’ ಎಂಬ ವಿಶೇಷ ಸಾಮಾಜಿಕ ನಾಟಕ ಪ್ರದರ್ಶನ ಆ.೩ ರಂದು ಭಾನುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಸಂಜೆ ೬ ಗಂಟೆಗೆ ಏರ್ಪಡಿಸಲಾಗಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಶಾಕಿರಣ ಅಂಧಮಕ್ಕಳ ಪಾಠಶಾಲೆಯ ಅಧ್ಯಕ್ಷರಾದ ಡಾ. ಜೆ.ಪಿ. ಕೃಷ್ಣೇಗೌಡ ಅವರು ಬಸವತತ್ವ ಪೀಠ, ಕಲಾ ಸೇವಾ ಸಂಘ, ಆಶಾಕಿರಣ ಚಾರಿಟಬಲ್ ಟ್ರಸ್ಟ್, ಆದಿಚುಂಚನಗಿರಿ ವಿಶ್ವ ವಿದ್ಯಾನಿಲಯ, ಆಶ್ರಯ ಫೌಂಡೇಶನ್, ಕಲ್ಕಟ್ಟೆ ಪುಸ್ತಕದ ಮನೆ, ಜಿ.ಸಿ ಅಂತರಾಷ್ಟ್ರೀಯ ಸಂಸ್ಥೆ, ಪೂರ್ವಿ ಸುಗಮ ಸಂಗೀತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಈ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.

ಈ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಬಸವಮಂದಿರದ ಡಾ. ಬಸವ ಮರುಳುಸಿದ್ದ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಕಲಾ ಸೇವಾ ಸಂಘದ ಅಧ್ಯಕ್ಷ ಕೆ. ಮೋಹನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಡಾ. ಮಂಜುಳ ಉಲ್ಲಳ್ಳಿ, ಡಾ. ಸಿ.ಕೆ. ಸುಬ್ರಾಯ, ಡಾ. ರಮೇಶ್, ಕಾಂತೇಶ್ ಕದರ ಮಂಡಲಗಿ, ಲಯನ್ ಕುಮಾರ್, ಡಾ. ವರ್ಷ ಅಭಿಷೇಕ್, ನಾಗರಾಜ್‌ರಾವ್ ಕಲ್ಕಟ್ಟೆ, ಪ್ರದೀಪ್ ಸಿ.ಬಿ. ಎಂ.ಎಸ್ ಸುಧೀರ್ ಭಾಗವಹಿಸಲಿದ್ದಾರೆಂದು ಹೇಳಿದರು.

ಈ ನಾಟಕವು ಗಾಂಧಿವಾದಿ ಲಕ್ಷ್ಮಣ್ ತುಕಾರಾಂ ಗೋಲೆ ಅವರ ಜೀವನಾಧಾರಿತ ಕಥೆಯನ್ನೊಳಗೊಂಡಿದ್ದು, ವಿಶೇಷವಾಗಿ ಸ್ವತಹಾ ಗೋಲೆಯವರೇ ಉಪಸ್ಥಿತರಿದ್ದು ನಾಟಕವನ್ನು ವೀಕ್ಷಿಸಲಿದ್ದಾರೆಂದರು. ಅದೇ ದಿನ ಮಧ್ಯಾಹ್ನ ೧೨ ಗಂಟೆಗೆ ಇಲ್ಲಿನ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಇದೇ ನಾಟಕವನ್ನು ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಯುವತಿಯೋರ್ವಳನ್ನು ರೌಡಿಯಿಂದ ರಕ್ಷಿಸಲು ಹೋದ ಸಂದರ್ಭದಲ್ಲಿ ಆತನ ಕಿವಿಯನ್ನು ಕತ್ತರಿಸಿದ ಘಟನೆಯಿಂದ ಜೈಲು ಸೇರಿ ಮುಂದೆ ಪಾತಕ ಲೋಕದ ವಿವಿಧ ಮಜಲುಗಳನ್ನು ಪರಿಚಯ ಮಾಡಿಕೊಂಡು ರೇಜರ್ ಲಕನ್ ಎಂದೇ ಕುಖ್ಯಾತಿ ಪಡೆದು ೭ ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದ ಇವರು ಅಲ್ಲಿ ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿ ಮನಃಪರಿವರ್ತನೆಗೊಂಡು ಸನ್ನಡತೆಯ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳಿಗೆ ಬಿಡುಗಡೆಯಾದ ಲಕ್ಷ್ಮಣ್ ತುಕಾರಾಂ ಗೋಲೆ, ಸಮಾಜಸೇವೆ, ಯೋಗ, ಧ್ಯಾನ, ಕೈದಿಗಳ ಮನಃಪರಿವರ್ತನೆಯಲ್ಲಿ ತೊಡಗಿದ್ದಾರೆಂದು ತಿಳಿಸಿದರು.

೨೦೧೫ ರ ಜಿಂದಗಿ ಲೈಫ್ ರಾಷ್ಟ್ರೀಯ ಪ್ರಶಸ್ತಿಗೂ ಭಾಜನರಾದ ಇವರು, ನಾಟಕ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಲಾ ಸೇವಾ ಸಂಘದ ಅಧ್ಯಕ್ಷ ಕೆ. ಮೋಹನ್, ಲಯನ್ಸ್ ಅಧ್ಯಕ್ಷ ಕುಮಾರ್ ಸಿ.ಎನ್, ಪ್ರಧಾನ ಕಾರ್ಯದರ್ಶಿ ಗೋಪಿಕೃಷ್ಣ, ಲಯನ್ ಜಿ.ರಮೇಶ್, ಎಂ.ಎಸ್. ಸುಧೀರ್ ಉಪಸ್ಥಿತರಿದ್ದರು.

Lakshman Tukaram Gole play performance on August 3rd

Share

Leave a comment

Leave a Reply

Your email address will not be published. Required fields are marked *

Don't Miss

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ...

ವಸೂಲಿವೀರ ಅದಕ್ಷ ಡಿ.ಡಿ.ಪಿ.ಐ ಪುಟ್ಟರಾಜುಗೆ ಕಡ್ಡಾಯ ರಜೆ

ಚಿಕ್ಕಮಗಳೂರು; ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಅಧಿಕಾರಿ ಪುಟ್ಟರಾಜು ಕಡ್ಡಾಯ ರಜೆ ಮೇಲೆ ತೆರಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕಟಾರಿಯ ಸೂಚನೆ ನೀಡಿದ್ದಾರೆ.ಆದರೂ ಕಟಾರಿಯ ಸೂಚನೆಗೆ ನಾನು...

Related Articles

ಮೇಲ್ವರ್ಗದರು ಮಾಡಿದ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು: ಹಾಂದಿ ಗ್ರಾಮದಲ್ಲಿ ಊರಿನವರು ವಾಸಿಸಲು ನಿವೇಶನಕ್ಕೆ ಉಚಿತವಾಗಿ ಜಾಗ ನೀಡಿದ ಕುಟುಂಬ ಸಮಸ್ಯೆ ಎದುರಿಸುವಂತಾಗಿದ್ದು,...

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು...

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು,...

ಬೀದಿ ನಾಯಿಗಳಿಗೆ ನಿಯಂತ್ರಣಕ್ಕೆ ಅಗತ್ಯ ಕ್ರಮ

ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ...