Home namma chikmagalur ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ
namma chikmagalurchikamagalurLatest News

ಗಿರಿ ಭಾಗದ ತಾಣಗಳಿಗೆ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯ ಅವೈಜ್ಞಾನಿಕ

Share
Share

ಚಿಕ್ಕಮಗಳೂರು: ಗಿರಿ ಭಾಗದ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಿರುವ ಜಿಲ್ಲಾಡಳಿತದ ಕ್ರಮ ಅವೈಜ್ಞಾನಿಕವಾಗಿದ್ದು, ಅದನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ರೆಸಾರ್ಟ್, ಹೋಂಸ್ಟೇ, ಲಾಡ್ಜ್, ಹೋಟೇಲ್ ಮಾಲೀಕರು ಹಾಗೂ ಟ್ಯಾಕ್ಸಿ, ಜೀಪ್ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಟೂರ್‍ಸ್ ಅಂಡ್ ಟ್ರಾವೇಲ್ಸ್ ಮಾಲೀಕರು ಗಿರಿಶ್ರೇಣಿಯ ನಾಗರೀಕರು ಒತ್ತಾಯಿಸಿದ್ದಾರೆ.

ಇಂದು ಸಂಘಟನೆಗಳ ಪ್ರತಿನಿಧಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೈಸರ್ಗಿಕ ಸೌಂದರ್ಯ ಸವಿಯಲು ಚಿಕ್ಕಮಗಳೂರಿಗೆ ನಾನಾ ಭಾಗಗಳಿಂದ ಪ್ರವಾಸಿಗರು ಬರುತ್ತಿದ್ದು, ಎಲ್ಲಾ ರೀತಿಯ ಜನರು ಇದನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಗಿರಿ ಪ್ರದೇಶಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳಿಗೆ ನಿಯಂತ್ರಣಗೊಳಿಸುವುದರಿಂದ ಎಲ್ಲರಿಗೂ ಅನಾನುಕೂಲವಾಗಿದೆ ಎಂದು ತಿಳಿಸಿದರು.

ಪ್ರತಿ ದಿನ ೬೦೦ ವಾಹನಗಳಂತೆ ಎರಡು ಪಾಳಿಯಲ್ಲಿ ೧೨೦೦ ವಾಹನಗಳಿಗೆ ಮಾತ್ರ ಗಿರಿ ಭಾಗಕ್ಕೆ ಪ್ರವೇಶ ಎಂದು ಜಿಲ್ಲಾಡಳಿತ ತಿಳಿಸಿದೆ. ಅದೂ ಸಹ ಯಾವ ರೀತಿಯ ವಾಹನಕ್ಕೆ ಎಷ್ಟು ಅವಕಾಶ ಎನ್ನುವುದನ್ನು ತಿಳಿಸಿಲ್ಲ. ಈ ವಾಹನಗಳನ್ನೇ ನಂಬಿಕೊಂಡಿರುವುದರಿಂದ ಕುಟುಂಬಗಳು ಆತಂಕಕ್ಕೀಡಾಗಿವೆ ಎಂದು ಹೇಳಿದರು.

ಅನೇಕ ಕಾಫಿ ತೋಟಗಳು ಈ ಭಾಗದಲ್ಲಿವೆ, ಸಾವಿರಾರು ಮನೆಗಳಿಗೆ ಈ ನಡುವೆ ಆನ್‌ಲೈನ್ ಅನುಮತಿ ಎಂದರೆ ನೆಂಟರು, ಬಂಧುಗಳು ಬಂದಾಗ, ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯಬೇಕೆಂದರೆ ತಕ್ಷಣಕ್ಕೆ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಂಡು ಓಡಾಡಲು ಆಗುವುದಿಲ್ಲ. ಒಂದು ಬಾರಿ ಆನ್‌ಲೈನ್ ಬುಕ್ಕಿಂಗ್ ಜಾರಿಗೆ ತಂದರೆ ಅದನ್ನು ನಿರ್ವಹಿಸುವ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಲು ಆರಂಭಿಸಿ ಜನರಿಗೆ ತೊಂದರೆ ಆದರೆ ನಾವು ಡಿಸಿ, ಎಸ್ಪಿ, ಪ್ರವಾಸೋದ್ಯಮದವರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಊಟಿ ಮಾದರಿಯಲ್ಲಿ ಇಲ್ಲೂ ವಾಹನಗಳಿಗೆ ಅವಕಾಶ ಮಾಡಿಕೊಡಬೇಕು. ಹೊರಗಿನಿಂದ ಬರುವವರಿಗೆ ಮಾತ್ರ ಜಿಲ್ಲಾಡಳಿತದ ನಿಯಮಗಳು ಅನ್ವಯಿಸಬೇಕು. ಉಳಿದಂತೆ ಸ್ಥಳೀಯ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳು ಇರಬಾರದು ಎಂದು ಆಗ್ರಹಿಸಿದರು.
ನಮ್ಮ ಮೂಲಭೂತ ಹಕ್ಕು, ಸಂಸ್ಕೃತಿ, ಸಂಪ್ರದಾಯಗಳನ್ನು ಕಿತ್ತುಕೊಳ್ಳುವಂತಹ ನಿರ್ಬಂಧಗಳನ್ನು ಹಾಕಬಾರದು. ಹಿಂದಿನಿಂದಲೂ ನಾವು ಇಲ್ಲಿ ಪರಿಸರವನ್ನು ಕಾಪಾಡಿಕೊಂಡು ಬಂದಿದ್ದೇವೆ. ಇಲ್ಲಿನ ವಾಹನ ಚಾಲಕರು ನುರಿತವರಾಗಿರುತ್ತಾರೆ. ಯಾವುದೇ ರೀತಿಯಲ್ಲಿ ಯಾರಿಗೂ ತೊಂದರೆ ಆಗುತ್ತಿಲ್ಲ ಎಂದು ಹೇಳಿದರು.

ಜಿಲ್ಲಾಡಳಿತ ಆನ್‌ಲೈನ್ ನೋಂದಾವಣೆಯನ್ನು ನಮ್ಮೆಲ್ಲರ ಸಮಕ್ಷಮದಲ್ಲಿ ಸಾಧಕ ಬಾಧಕಗಳನ್ನು ಚರ್ಚೆಮಾಡದೆ ಏಕಪಕ್ಷೀಯವಾಗಿ ಜಾರಿಗೆ ತಂದಿದೆ. ಇದು ಸಮಂಜಸವಲ್ಲ. ಈ ನಿರ್ಧಾರವನ್ನು ಕೈಬಿಟ್ಟು ಬೇರೆ ಮಾರ್ಗೋಪಾಯವನ್ನು ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹೋಂಸ್ಟೇ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಎನ್.ಆರ್.ತೇಜಸ್ವಿ, ಹೋಟೆಲ್ ಮಾಲೀಕ ಶಿವಕುಮಾರ್, ಟಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ದಿನೇಶ್, ಮತ್ತಿತರರು ಇದ್ದರು

Mandatory online registration for tourists to hill stations is unscientific

Share

Leave a comment

Leave a Reply

Your email address will not be published. Required fields are marked *

Don't Miss

ತಾಯ್ನಾಡಿನ ಋಣ ತೀರಿಸಲು ಸೈನಿಕ ವೃತ್ತಿ ಶ್ರೇಷ್ಟ

ಚಿಕ್ಕಮಗಳೂರು:  ಭೂಮಿಯಲ್ಲಿ ಜನಿಸಿದ ಮನುಜ ಕೊನೆಗೊಂದು ದಿನ ದೇಹವನ್ನು ತ್ಯಜಿಸಲೇಬೇಕು. ಈ ಮಧ್ಯೆದಲ್ಲಿ ತಾಯ್ನಾಡಿನ ಋಣ ತೀರಿಸಲು ಹಾಗೂ ಭಾರತವನ್ನು ಗಟ್ಟಿಗೊಳಿಸಲು ಸೈ ನಿಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದೆ ಎಂದು ಜಿಲ್ಲಾ...

ಧಾರಾಕಾರ ಮಳೆಗೆ ಶೃಂಗೇರಿಯಲ್ಲಿ ತುಂಗಾನದಿಯಲ್ಲಿ ಪ್ರವಾಹ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಶನಿವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಶೃಂಗೇರಿಯಲ್ಲಿ 70 ಮಿ.ಮೀ, ಕಿಗ್ಗಾದಲ್ಲಿ 152.4 ಮಿ.ಮೀ, ಕೆರೆಕಟ್ಟೆಯಲ್ಲಿ 211 ಮಿ.ಮೀ ಮಳೆಯಾಗಿದ್ದು, ಒಟ್ಟು 2,825 ಮಿ.ಮೀ...

Related Articles

ಮೇಲ್ವರ್ಗದರು ಮಾಡಿದ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

ಚಿಕ್ಕಮಗಳೂರು: ಹಾಂದಿ ಗ್ರಾಮದಲ್ಲಿ ಊರಿನವರು ವಾಸಿಸಲು ನಿವೇಶನಕ್ಕೆ ಉಚಿತವಾಗಿ ಜಾಗ ನೀಡಿದ ಕುಟುಂಬ ಸಮಸ್ಯೆ ಎದುರಿಸುವಂತಾಗಿದ್ದು,...

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು...

ಬೀದಿ ನಾಯಿಗಳಿಗೆ ನಿಯಂತ್ರಣಕ್ಕೆ ಅಗತ್ಯ ಕ್ರಮ

ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ...

ವ್ಯಸನ ಮುಕ್ತ ದಿನಾಚರಣೆ – ವಿಚಾರ ಸಂಕಿರಣ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ-ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ...