Home Latest News ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ
Latest NewschikamagalurHomenamma chikmagalur

ಡಕಾಯಿತಿ ಪ್ರಕರಣ ಆರೋಪಿಗಳ ಬಂಧನ-2.55 ಲಕ್ಷ ರೂ. ಮೌಲ್ಯದ ಸ್ವತ್ತು ವಶ

Share
Share

ಚಿಕ್ಕಮಗಳೂರು: ಡಕಾಯಿತಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಂದಾಜು ೨.೫೫ ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಕಪ್ ವಾಹನದಲ್ಲಿ ಜುಲೈ ೨೩ರಂದು ಚಾಲಕ ಮತ್ತು ಹೆಲ್ಪರ್ ದರ್ಶನ್ ರೊಂದಿಗೆ ತೀರ್ಥಹಳ್ಳಿಯಿಂದ ಬೆಳಗ್ಗಿನ ಜಾವ ಸುಮಾರು ೪ ಗಂಟೆಗೆ ಎನ್‌ಆರ್ ಪುರಕ್ಕೆ ಬಂದು ಕೋಳಿಗಳನ್ನು ಮಾರಾಟ ಮಾಡಿಕೊಂಡು ಮಾರಾಟದಿಂದ ಬಂದ ೨ ಲಕ್ಷ ಹಣವನ್ನು ತೆಗೆದುಕೊಂಡು ವಾಪಸ್ಸು ಶಿವಮೊಗ್ಗಕ್ಕೆ ಬೆಳಗಿನ ಜಾವ ೪.೪೫ ಗಂಟೆಯ ಸಮಯದಲ್ಲಿ ಶಿವಮೊಗ್ಗ ಮುಖ್ಯ ರಸ್ತೆ ಆರಂಭಳ್ಳಿ ಬಸ್ ನಿಲ್ದಾಣದ ಬಳಿ ಹೋಗುತ್ತಿರುವಾಗ ರಸ್ತೆಯ ಎರಡು ಬದಿಯಿಂದ ಎರಡು ಕಾರುಗಳನ್ನು ಅಡ್ಡವಾಗಿ ನಿಲ್ಲಿಸಿಕೊಂಡು ಸುಮಾರು ೮ ರಿಂದ ೧೦ ಜನ ವಾಹನವನ್ನು ಅಡ್ಡಗಟ್ಟಿ ಕಬ್ಬಿಣದ ರಾಡ್ ಮತ್ತು ಕೈನಿಂದ ಪಿಕಪ್ ವಾಹನದ ಚಾಲಕ ಮತ್ತು ಹೆಲ್ಪರ್ ಮೇಲೆ ಹಲ್ಲೆನಡೆಸಿ ಅವರ ಬಳಿ ಇದ್ದ ೩ ಮೊಬೈಲ್, ಬೆಳ್ಳಿ ಬ್ರಾಸ್ಲೆಟ್, ಬೆಳ್ಳಿ ಚೈನ್ ಮತ್ತು ವಾಹನದಲ್ಲಿದ್ದ ೨ ಲಕ್ಷ ನಗದನ್ನು ದೋಚಿಕೊಂಡು ಪರಾರಿಯಾಗಿರುತ್ತಾರೆ.

ಆರೋಪಿಗಳನ್ನು ಪತ್ತೆಹಚ್ಚಲು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಂ ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಕೊಪ್ಪವಲಯದ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರ ಮಾರ್ಗದರ್ಶನದಲ್ಲಿ ಎನ್.ಆರ್.ಪುರ ವೃತ್ತನಿರೀಕ್ಷಕ ಗುರುದತ್ ಕಾಮತ್, ಠಾಣಾಧಿಕಾರಿ ಬಿ.ಎಸ್.ನಿರಂಜನ್‌ಗೌಡ ಸಿಬ್ಬಂದಿಗಳಾದ ಪಿ.ಎ.ಬಿನು, ಅಮಿತ್ ಚೌಗುಲೆ, ದೇವರಾಜ, ಮಧು ಎಸ್.ಜಿ, ಯುಗಾಂಧರ್, ಶಿವರುದ್ರಪ್ಪ, ಕೌಶಿಕ್ ಹೆಚ್.ಸಿ. ಹಾಗೂ ಬಾಳೆಹೊನ್ನೂರು ಠಾಣೆಯ ಅಪರಾಧ ವಿಭಾಗದ ಶಂಕರ್ ಕೆ.ಜೆ ರನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿತ್ತು.

ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ನಯಾಜ್ ಅಂಜುಂ ಮತ್ತು ರಬ್ಬಾನಿ ಅವರ ತಾಂತ್ರಿಕ ಸಹಯೋಗದೊಂದಿಗೆ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ತನಿಖೆಯನ್ನು ನಡೆಸಿ ಪ್ರಕರಣದಲ್ಲಿನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಪ್ರಕರಣದಲ್ಲಿ ಆರೋಪಿಗಳಾದ ಭದ್ರಾವತಿ ತಾಲೂಕಿನ ಕೂಲಿಕೆಲಸದ ಸತ್ಯಾನಂದ, ಭದ್ರಾವತಿ ಅಪ್ಪಾಜಿ ಬಡಾವಣೆಯ ಮೆಕಾನಿಕ್ ಸಯ್ಯದ್ ಲತೀಫ್ ಸೇರಿದಂತೆ ಮೂವರನ್ನು ಬಂಧಿಸಿರುವ ಪೊಲೀಸರು
ಆರೋಪಿಗಳಿಂದ ಒಂದು ಬೆಳ್ಳಿಯ ಬ್ರಾಸ್‌ಲೈಟ್, ಒಂದು ಬೆಳ್ಳಿಯ ಸರ, ೨ ಮೊಬೈಲ್ ಒಂದು ಸೌಂಡ್ ಸಿಸ್ಟಂ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ೧ ಹೊಂಡಾಸಿಟಿ ಕಾರು ಮತ್ತು ಕೃತ್ಯಕ್ಕೆ ಬಳಸಿದ ಒಂದು ಲಾಂಗ್ ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ಒಟ್ಟು ೨.೫೫ ಲಕ್ಷ ರೂ.ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿ ಕದ್ದಮಾಲನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ಪತ್ತೆದಳ ತಂಡದಲ್ಲಿದ್ದ ಅಧಿಕಾರಿ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿಗಳು ಶ್ಲಾಘಿಸಿದ್ದಾರೆ.

Accused arrested in dacoity case- Property worth Rs. 2.55 lakh seized

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...