Home Crime News ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು
Crime NewsState News

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು

Share
Share

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

  • ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
  • 376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
  • ಐಪಿಸಿ ಸೆಕ್ಷನ್‌ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
  • ಐಪಿಸಿ ಸೆಕ್ಷನ್‌ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
  • ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
  • ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
  • ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
  • ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ.
  • ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್‌ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.

ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ.

ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು.

ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

Former MP Prajwal Revanna jailed for life

Share

Leave a comment

Leave a Reply

Your email address will not be published. Required fields are marked *

Don't Miss

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಕುಣಿಗಲ್‌ ಮೂಲದ ರೋಹಿಣಿ ಹಾಗೂ ಬೆಂಗಳೂರು ಮೂಲದ ನವೀನ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೂ ಮುನ್ನ...

ಚಿರತೆ ಮರಿಗಳೆಂದು ಆತಂಕ; ಪತ್ತೆಯಾಗಿದ್ದು ಕಾಡು ಬೆಕ್ಕಿನ ಮರಿಗಳು

ಕಳಸ: ಮರಸಣಿಗೆ ವ್ಯಾಪ್ತಿಯ ಗುಮ್ಮನ್ ಖಾನ್ ಬಳಿ ತೋಟದ ಪಕ್ಕದಲ್ಲಿ ಚಿರತೆ ಮರಿಗಳು ಪತ್ತೆಯಾಗಿವೆ ಎಂಬ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ...

Related Articles

ಬಿಎಫ್‌ಐಎಲ್‌ ಸಂಸ್ಥೆಯಲ್ಲಿ ₹5.50 ಲಕ್ಷ ದುರುಪಯೋಗ: ಇಬ್ಬರು ಸಿಬ್ಬಂದಿ ವಿರುದ್ಧ ಪ್ರಕರಣ

ನರಸಿಂಹರಾಜಪುರ: ಭಾರತ್ ಫೈನಾನ್ಸಿಯಲ್ ಇನ್‌ಕ್ಲೂಶನ್ ಲಿಮಿಟೆಡ್‌ (ಬಿಎಫ್‌ಐಎಲ್‌) ಸಂಸ್ಥೆಯ ಸೇಫ್‌ ಲಾಕರ್‌ನಲ್ಲಿದ್ದ ಚೆಕ್‌ಗಳನ್ನು ಮೇಲಾಧಿಕಾರಿಗಳ ಗಮನಕ್ಕೆ...

ಸೀತಾಪುರದಲ್ಲಿ ಅಕ್ರಮ ಇಸ್ಪೀಟ್ ಜೂಜಾಟದಲ್ಲಿ ನಾಲ್ವರ ಬಂಧನ

ಕಡೂರು: ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಪುರ ಗ್ರಾಮದ ಶಿವಗನಾಯ್ಕ ಅವರ ತೋಟದಲ್ಲಿ ಅಕ್ರಮವಾಗಿ...

ತರೀಕೆರೆಯಲ್ಲಿ ಅಪಾಚಿ ಬೈಕ್ ಕಳವು

ತರೀಕೆರೆ: ಪಟ್ಟಣದ ಎಂಎಸ್‌ಐಎಲ್ ಅಂಗಡಿ ಮುಂಭಾಗ ನಿಲ್ಲಿಸಿದ್ದ ಅಪಾಚಿ ಬೈಕ್ ಕಳುವಾಗಿರುವ ಕುರಿತು ತರೀಕೆರೆ ಪೊಲೀಸ್...

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್...