Home Latest News ೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ
Latest NewschikamagalurHomenamma chikmagalur

೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ

Share
Share

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ನವೀಕರಣಗೊಳಿಸಲಾಗುವುದೆಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ನಗರದ ಅಂಬೇಡ್ಕರ್ ಭವನ ನವೀಕರಣ ಸಂಬಂಧ ಅಧಿಕಾರಿಗಳು ಹಾಗೂ ಶೋಷಿತ ವರ್ಗದ ಸಂಘಟನೆಗಳ ಪ್ರಮುಖರೊಂದಿಗೆ ಭೇಟಿಮಾಡಿ ನಂತರ ಮಾತನಾಡಿ ರಾಜ್ಯಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪನವರ ನೇತೃತ್ವದಲ್ಲಿ ನಗರದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ಭವನ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ೨ ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಶೋಷಿತ ವರ್ಗದ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ಚರ್ಚಿಸಲಾಗಿದ್ದು, ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂಬೇಡ್ಕರ್ ಭವನ ನಿರ್ವಹಣೆ ಮತ್ತು ಅನುದಾನವನ್ನು ಸದ್ಭಳಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಲಾಗುವುದೆಂದು ಹೇಳಿದರು.

ಸುಸಜ್ಜಿತ ಶೌಚಾಲಯ, ಸ್ವಚ್ಛತೆ, ಅಡುಗೆ ಮನೆ, ಸಿಸಿ ಟಿವಿ ಮುಂತಾದವುಗಳನ್ನು ಅಳವಡಿಸಲಾಗುವುದು. ನಗರದ ಹೊರಭಾಗದಲ್ಲಿ ೫-೧೦ ಎಕರೆ ಜಾಗವನ್ನು ಜಿಲ್ಲಾಡಳಿತ ಗುರ್ತಿಸಿದ್ದು, ಸಧ್ಯದಲ್ಲೇ ಜಿಲ್ಲಾಮಟ್ಟದ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಥವಾ ಬುದ್ಧ ವಿಹಾರ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ವಕೀಲ ಅನಿಲ್‌ಕುಮಾರ್ ಮಾತನಾಡಿ, ಈ ಅಂಬೇಡ್ಕರ್ ಭವನವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಿ ಬಡವರ ಅನುಕೂಲಕ್ಕೆ ಸದ್ಭಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ನಗರದ ಅಂಬೇಡ್ಕರ್ ಭವನ ತುಂಬಾ ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ಅನೇಕ ವರ್ಷಗಳ ಹೋರಾಟ ಇಂದು ಫಲಿಸಿದೆ. ಶಾಸಕ ಹೆಚ್.ಡಿ. ತಮ್ಮಯ್ಯನವರ ಪರಿಶ್ರಮದ ಫಲವಾಗಿ ರಾಜ್ಯಸರ್ಕಾರದಿಂದ ೨ ಕೋಟಿ ರೂ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಇಂದು ನಡೆದ ಸಭೆಯಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದ್ದು, ಶೋಷಿತ ಸಮುದಾಯಕ್ಕೆ ಈ ಭವನ ಮುಂದೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಭವನ ನವೀಕರಣಗೊಳ್ಳುತ್ತಿರುವುದು ಶೋಷಿತರು, ಬಡವರು, ಅಂಬೇಡ್ಕರ್ ಅನುಯಾಯಿಗಳು ಹಾಗೂ ಎಲ್ಲಾ ವರ್ಗದ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ ಅವರು, ಶಾಸಕರ ಮುಂದಿನ ಜೀವನ ಉಜ್ವಲವಾಗಿ ಬೆಳೆಯಲಿ, ರಾಜಕೀಯವಾಗಿ ಪ್ರಜ್ವಲಿಸಲಿ ಎಂದು ಶುಭಹಾರೈಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಆದರೆ, ಗಾಳಿಯ ಅಬ್ಬರ ಜೋರಾಗಿದೆ. ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿರುವುದರಿಂದ ಮನೆಯಿಂದ ಹೊರ...

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

Related Articles

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು...

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ...

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...