Home namma chikmagalur ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?
namma chikmagalurchikamagalurHomeLatest News

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

Share
Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿಕೊಂಡಿದೆ.

ನಯನ ಪ್ರಬಲ ಸಮರ್ಥನೆ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಶಾಸಕರ ಸಭೆಯಲ್ಲಿ ಹದಿನೈದು ನಿಮಿಷಗಳ ಕಾಲ ನಯನಗೆ ಬುದ್ದಿ ಹೇಳಿ ಅಸಮಾಧಾನ ಸೂಚಿಸಿ ಇನ್ನೂ ಮುಂದೆ ಇಂತಹ ಅನಾಹುತ ಸೃಷ್ಟಿಸಿಕೊಳ್ಳ ಬೇಡಿ ಎಂದು ಹೇಳಿರುವುದನ್ನು ಸಭೆಯಲ್ಲಿ ಇದ್ದ ಶಾಸಕರುಗಳು ಅಲ್ಲಿ ಇಲ್ಲಿ ಹೇಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಕಾಂಗ್ರೆಸ್ ವಕ್ತಾರ ಹೆಚ್.ಹೆಚ್.ದೇವರಾಜ್ ಒಂದು ಹೆಜ್ಜೆ ಮುಂದೆ ಹೋಗಿ ಇಂತವರ ಗೆಲುವಿಗೆ ಸಹಕರಿಸಿದ ಪ್ರಗತಿಪರರು, ದಲಿತ ಸಂಘಟನೆಗಳು ಮತ್ತು ರೈತ ಸಂಘದವರು ಗಾಂಧಿ ಪ್ರತಿಮೆಯ ಮುಂದೆ ಪಶ್ಚಾತ್ತಾಪ ಪಟ್ಟುಕೊಳ್ಳಲು ಮುಂದಾಗಿದ್ದಾರೆ.

ಗಣಪತಿ ಸಮಿತಿಯ ಸಭೆಯಲ್ಲಿ ರಾಜಕೀಯ ಮಾತು ಎಷ್ಟರಮಟ್ಟಿಗೆ ಸರಿ.ಮೂರು ವರ್ಷಗಳ ನಂತರ ಬಿಜೆಪಿ, ಬಿ.ಎಸ್.ಪಿ.ಮತ್ತು ಎಸ್.ಡಿ.ಪಿ.ಐ ಸೇರುವ ಮಾತು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂಬಾಲಕ ರಾದ ನಯನಮೋಟಮ್ಮ ಅಲಿಯಾಸ್ ನಯನಕಮಲಮ್ಮ ಆಗಲು ಈ ರೀತಿಯ ಹೇಳಿಕೆ ನೀಡಿರಬಹುದು ಎನ್ನುವವರು ಇದ್ದಾರೆ.ಏನೇ ಆಗಲಿ ವಕೀಲರಾಗಿದ್ದ ನಯನ ಕ್ಷೇತ್ರದಲ್ಲಿ ಪದೇ,ಪದೇ ಗೊಂದಲ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ನ ಹಲವು ಮುಖಂಡರಿಗೆ ಇರಿಸು ಮುರಿಸು ತಂದಿದೆ ಮುಂದೆ ಇದೆ ಹಬ್ಬ ಎನ್ನುತ್ತಿದ್ದಾರೆ.

Nayana Nanjindu

Share

Leave a comment

Leave a Reply

Your email address will not be published. Required fields are marked *

Don't Miss

ಪೋ‌ಕ್ಸೋ ನ್ಯಾಯಾಲಯದಿಂದ ನಾಲ್ವರಿಗೆ ಕಠಿಣ ಶಿಕ್ಷೆ

ಚಿಕ್ಕಮಗಳೂರು: ನಗರದ ಬಾಲಮಂದಿರದಲ್ಲಿ ವಾಸವಿದ್ದ ಈರ್ವರು ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ ಹಾಸನಕ್ಕೆ ಕರೆದೊಯ್ದು ಬಾಡಿಗೆ ಮನೆಯೊಂದ ರಲ್ಲಿ ಇರಿಸಿ ಹದಿನೈದು ಮಂದಿಯನ್ನು ಲೈಂಗಿಕ ದೌರ್ಜನ್ಯ ಎಸಗಲು ಅನುವು ಮಾಡಿಕೊಟ್ಟಿದ್ದ ನಾಲ್ವರಿಗೆ ಕಠಿಣ...

ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಪುಂಡಾನೆ

ಬಾಳೆಹೊನ್ನೂರು:  ನಾಲ್ಕು ದಿನಗಳ ಅಂತರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಅರಣ್ಯ ಇಲಾಖೆ ಆರಂಭಿಸಿದ್ದ ಕಾರ್ಯಾಚರಣೆಯಲ್ಲಿ ಮೊದಲ ದಿನವೇ ಪುಂಡಾನೆಯೊಂದು ಸೆರೆ ಸಿಕ್ಕಿದೆ. ಎನ್.ಆರ್.ಪುರ ತಾಲ್ಲೂಕಿನ ಎಲೆಕಲ್ಲು ಬಳಿ ಸುಮಾರು...

Related Articles

ಶಾಸಕಿ ನಯನ ಕಮಲಮ್ಮರ ಕೇಸರಿ ಶಾಲು, ಕೆರಳಿ ನಿಂತ ಪ್ರಗತಿಪರರು ಕೈ,ಕೈ ಮುಗಿಯುತ್ತಿರುವ ಕಾಂಗ್ರೆಸ್?

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಶಾಸಕಿ ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮರ ಕೇಸರಿ ಶಾಲು ಪ್ರಗತಿಪರರನ್ನು ಕೆರಳಿಸುವುದರ...

ಶಾಸಕರು ಗುರುವಿಗೆ ತಿರುಮಂತ್ರ ಹಾಕುವುದು ಬೇಡ

ಚಿಕ್ಕಮಗಳೂರು: ಇಂದು ಶಾಸಕರಾಗಿರುವವರು ೧೫ ವರ್ಷ ಸಿ.ಟಿ.ರವಿಗೆ ಜೈ ಎಂದಿದ್ದರು. ಭಾರತ್ ಮಾತಾ ಕಿ ಜೈ,...

ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆಹಿಡಿಯಲು ಕಾರ್ಯಾಚರಣೆ

ನರಸಿಂಹರಾಜಪುರ: ತಾಲ್ಲೂಕಿನ ನರಸಿಂಹರಾಜಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಒಂಟಿ ಸಲಗವನ್ನು ಸೆರೆಹಿಡಿಯಲು ಕಾರ್ಯಾಚರಣೆಗಿಳಿದ...

ರಸಗೊಬ್ಬರ ಸರಬರಾಜು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ

ಚಿಕ್ಕಮಗಳೂರು:  ರೈತರಿಗೆ ಅಗತ್ಯವಾಗಿ ಬೇಕಾಗಿರುವ ಯೂರಿಯಾ-ಡಿಎಪಿ ರಸಗೊಬ್ಬರವನ್ನು ಅತೀ ಶೀಘ್ರ ವಿತರಣೆ ಮಾಡುವಂತೆ ಆಗ್ರಹಿಸಿ ಇಂದು...