Home namma chikmagalur ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?
namma chikmagalurchikamagalurHomeLatest News

ನಯನ ನಂಜಿನ ನುಡಿ – ಕಾಂಗ್ರೆಸ್ ನಲ್ಲಿ ಕಿಚ್ಚು ?

Share
Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ಮೋಟಮ್ಮಹಿಂದುವಿಚಾರಧಾರೆಯ ಪ್ರಮೋದ್ ಮುತಾಲಿಕ್ ವೇದಿಕೆ ಹಂಚಿಕೊಂಡು ನಂಜಿನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿಕೊಂಡಿದೆ.

ನಯನ ಪ್ರಬಲ ಸಮರ್ಥನೆ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಶಾಸಕರ ಸಭೆಯಲ್ಲಿ ಹದಿನೈದು ನಿಮಿಷಗಳ ಕಾಲ ನಯನಗೆ ಬುದ್ದಿ ಹೇಳಿ ಅಸಮಾಧಾನ ಸೂಚಿಸಿ ಇನ್ನೂ ಮುಂದೆ ಇಂತಹ ಅನಾಹುತ ಸೃಷ್ಟಿಸಿಕೊಳ್ಳ ಬೇಡಿ ಎಂದು ಹೇಳಿರುವುದನ್ನು ಸಭೆಯಲ್ಲಿ ಇದ್ದ ಶಾಸಕರುಗಳು ಅಲ್ಲಿ ಇಲ್ಲಿ ಹೇಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಕಾಂಗ್ರೆಸ್ ವಕ್ತಾರ ಹೆಚ್.ಹೆಚ್.ದೇವರಾಜ್ ಒಂದು ಹೆಜ್ಜೆ ಮುಂದೆ ಹೋಗಿ ಇಂತವರ ಗೆಲುವಿಗೆ ಸಹಕರಿಸಿದ ಪ್ರಗತಿಪರರು, ದಲಿತ ಸಂಘಟನೆಗಳು ಮತ್ತು ರೈತ ಸಂಘದವರು ಗಾಂಧಿ ಪ್ರತಿಮೆಯ ಮುಂದೆ ಪಶ್ಚಾತ್ತಾಪ ಪಟ್ಟುಕೊಳ್ಳಲು ಮುಂದಾಗಿದ್ದಾರೆ.

ಗಣಪತಿ ಸಮಿತಿಯ ಸಭೆಯಲ್ಲಿ ರಾಜಕೀಯ ಮಾತು ಎಷ್ಟರಮಟ್ಟಿಗೆ ಸರಿ.ಮೂರು ವರ್ಷಗಳ ನಂತರ ಬಿಜೆಪಿ, ಬಿ.ಎಸ್.ಪಿ.ಮತ್ತು ಎಸ್.ಡಿ.ಪಿ.ಐ ಸೇರುವ ಮಾತು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿಂಬಾಲಕ ರಾದ ನಯನಮೋಟಮ್ಮ ಅಲಿಯಾಸ್ ನಯನಕಮಲಮ್ಮ ಆಗಲು ಈ ರೀತಿಯ ಹೇಳಿಕೆ ನೀಡಿರಬಹುದು ಎನ್ನುವವರು ಇದ್ದಾರೆ.ಏನೇ ಆಗಲಿ ವಕೀಲರಾಗಿದ್ದ ನಯನ ಕ್ಷೇತ್ರದಲ್ಲಿ ಪದೇ,ಪದೇ ಗೊಂದಲ ಮಾಡಿಕೊಳ್ಳುತ್ತಿರುವುದು ಕಾಂಗ್ರೆಸ್ ನ ಹಲವು ಮುಖಂಡರಿಗೆ ಇರಿಸು ಮುರಿಸು ತಂದಿದೆ ಮುಂದೆ ಇದೆ ಹಬ್ಬ ಎನ್ನುತ್ತಿದ್ದಾರೆ.

Nayana Nanjindu

Share

Leave a comment

Leave a Reply

Your email address will not be published. Required fields are marked *

Don't Miss

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು ನೆರೆಯವರ ತೋಟದ ಮನೆಯ ಹಿಂಭಾಗ ಬೆಂಕಿ ಹಚ್ಚಿಕೊಂಡು ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ದುರಂತ ಘಟನೆ ವರದಿಯಾಗಿದೆ....

Related Articles

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...

ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವ ನೆಪದಲ್ಲಿ ₹1.59 ಲಕ್ಷ ವಂಚನೆ

ಚಿಕ್ಕಮಗಳೂರು: ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚಿಸುವುದಾಗಿ ನಂಬಿಸಿ ಬ್ಯಾಂಕ್ ಅಧಿಕಾರಿಯಂತೆ ನಟಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರ...