Home Latest News ಇಂದು ಅಭ್ಯರ್ಥಿಗಳಿಗೆ ವಿವಿಧ ಪಕ್ಷಗಳಿಂದ ‘ಬಿ’ ಫಾರಂ ವಿತರಣೆ
Latest NewschikamagalurHomenamma chikmagalur

ಇಂದು ಅಭ್ಯರ್ಥಿಗಳಿಗೆ ವಿವಿಧ ಪಕ್ಷಗಳಿಂದ ‘ಬಿ’ ಫಾರಂ ವಿತರಣೆ

Share
Share

ಅಜ್ಜಂಪುರ: 2018ರ ಬಳಿಕ ಅಸ್ತಿತ್ವಕ್ಕೆ ಬಂದ ಪಟ್ಟಣ ಪಂಚಾಯಿತಿಗೆ ಮೊದಲ ಬಾರಿ ನಡೆಯುತ್ತಿರುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

11 ವಾರ್ಡ್‌ಗಳಲ್ಲೂ ಚುನಾವಣೆ ಎದುರಿಸಲು ಮೂರೂ ಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ಏಕಾಂಗಿಯಾಗಿ ಹಾಗೂ ಬಿಜೆಪಿ– ಜೆಡಿಎಸ್ ಜೊತೆಗೂಡಿ ಚುನಾವಣೆಗೆ ಸಜ್ಜಾಗಿದೆ.

ಜಾತಿ, ವೈಯಕ್ತಿಕ ವರ್ಚಸ್ಸು, ಸಮಾಜ ಸೇವೆ, ಜನಸೇವೆ, ರಾಜಕೀಯ ಅನುಭವ, ಮತದಾರರ ಒಲವು, ಸಂಘ ಸಮಾಜದೊಳಗಿನ ಪಾಲ್ಗೊಳ್ಳುವಿಕೆಯನ್ನು ಅಳೆದು ತೂಗಿ ಪಕ್ಷಗಳು ಟಿಕೆಟ್ ಆಖೈರುಗೊಳಿಸುತ್ತಿವೆ. 1 ಮತ್ತು 11ನೇ ವಾರ್ಡ್ ಹೊರತುಪಡಿಸಿ, ಉಳಿದ ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಎರಡು ಪಕ್ಷಗಳೂ ಅಂತಿಮಗೊಳಿಸಿವೆ. ಸೋಮವಾರ ಪಕ್ಷಗಳು ‘ಬಿ’ ಫಾರಂ ವಿತರಿಸಲಿವೆ. ಆ ಬಳಿಕವೇ ಅಭ್ಯರ್ಥಿಗಳು ಅಧಿಕೃತವಾಗಿ ಪಕ್ಷದ ಚಿಹ್ನೆಯಡಿ ನಾಮಪತ್ರ ಸಲ್ಲಿಸಲಿದ್ದಾರೆ.

1 ಮತ್ತು 11ನೇ ವಾರ್ಡ್‌ಗೆ ಅಭ್ಯರ್ಥಿಗಳನ್ನು ಎರಡೂ ಪಕ್ಷಗಳು ಅಂತಿಮಗೊಳಿಸಿಲ್ಲ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿವೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರವೇ (ಆ.5) ಕಡೆಯ ದಿನ ಆಗಿದ್ದು, ಟಿಕೆಟ್ ಅಂತಿಮಗೊಳಿಸುವ ಒತ್ತಡ ಎರಡೂ ಪಕ್ಷಗಳಿಗಿದೆ.

ಟಿಕೆಟ್ ಖಾತ್ರಿಯಾಗಿರುವ ಆಕಾಂಕ್ಷಿಗಳು, ಸ್ಥಳೀಯ ಮುಖಂಡರೊಂ ದಿಗೆ ಜನರ ಮನೆಬಾಗಿಲಿಗೆ ಮತಯಾಚನೆಯಲ್ಲಿ ತೊಡಗಿದ್ದಾರೆ.

‘B’ form distributed to candidates by various parties today
Share

Leave a comment

Leave a Reply

Your email address will not be published. Required fields are marked *

Don't Miss

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಜೊತೆಗೆ ವೇದಿಕೆಯಲ್ಲಿ ಇರುವುದರ ಬಗ್ಗೆ...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ

ಚಿಕ್ಕಮಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ...

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...