Home Latest News ಇಂದು ಅಭ್ಯರ್ಥಿಗಳಿಗೆ ವಿವಿಧ ಪಕ್ಷಗಳಿಂದ ‘ಬಿ’ ಫಾರಂ ವಿತರಣೆ
Latest NewschikamagalurHomenamma chikmagalur

ಇಂದು ಅಭ್ಯರ್ಥಿಗಳಿಗೆ ವಿವಿಧ ಪಕ್ಷಗಳಿಂದ ‘ಬಿ’ ಫಾರಂ ವಿತರಣೆ

Share
Share

ಅಜ್ಜಂಪುರ: 2018ರ ಬಳಿಕ ಅಸ್ತಿತ್ವಕ್ಕೆ ಬಂದ ಪಟ್ಟಣ ಪಂಚಾಯಿತಿಗೆ ಮೊದಲ ಬಾರಿ ನಡೆಯುತ್ತಿರುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

11 ವಾರ್ಡ್‌ಗಳಲ್ಲೂ ಚುನಾವಣೆ ಎದುರಿಸಲು ಮೂರೂ ಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ಏಕಾಂಗಿಯಾಗಿ ಹಾಗೂ ಬಿಜೆಪಿ– ಜೆಡಿಎಸ್ ಜೊತೆಗೂಡಿ ಚುನಾವಣೆಗೆ ಸಜ್ಜಾಗಿದೆ.

ಜಾತಿ, ವೈಯಕ್ತಿಕ ವರ್ಚಸ್ಸು, ಸಮಾಜ ಸೇವೆ, ಜನಸೇವೆ, ರಾಜಕೀಯ ಅನುಭವ, ಮತದಾರರ ಒಲವು, ಸಂಘ ಸಮಾಜದೊಳಗಿನ ಪಾಲ್ಗೊಳ್ಳುವಿಕೆಯನ್ನು ಅಳೆದು ತೂಗಿ ಪಕ್ಷಗಳು ಟಿಕೆಟ್ ಆಖೈರುಗೊಳಿಸುತ್ತಿವೆ. 1 ಮತ್ತು 11ನೇ ವಾರ್ಡ್ ಹೊರತುಪಡಿಸಿ, ಉಳಿದ ವಾರ್ಡ್‌ಗಳಿಗೆ ಅಭ್ಯರ್ಥಿಗಳನ್ನು ಎರಡು ಪಕ್ಷಗಳೂ ಅಂತಿಮಗೊಳಿಸಿವೆ. ಸೋಮವಾರ ಪಕ್ಷಗಳು ‘ಬಿ’ ಫಾರಂ ವಿತರಿಸಲಿವೆ. ಆ ಬಳಿಕವೇ ಅಭ್ಯರ್ಥಿಗಳು ಅಧಿಕೃತವಾಗಿ ಪಕ್ಷದ ಚಿಹ್ನೆಯಡಿ ನಾಮಪತ್ರ ಸಲ್ಲಿಸಲಿದ್ದಾರೆ.

1 ಮತ್ತು 11ನೇ ವಾರ್ಡ್‌ಗೆ ಅಭ್ಯರ್ಥಿಗಳನ್ನು ಎರಡೂ ಪಕ್ಷಗಳು ಅಂತಿಮಗೊಳಿಸಿಲ್ಲ. ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿವೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರವೇ (ಆ.5) ಕಡೆಯ ದಿನ ಆಗಿದ್ದು, ಟಿಕೆಟ್ ಅಂತಿಮಗೊಳಿಸುವ ಒತ್ತಡ ಎರಡೂ ಪಕ್ಷಗಳಿಗಿದೆ.

ಟಿಕೆಟ್ ಖಾತ್ರಿಯಾಗಿರುವ ಆಕಾಂಕ್ಷಿಗಳು, ಸ್ಥಳೀಯ ಮುಖಂಡರೊಂ ದಿಗೆ ಜನರ ಮನೆಬಾಗಿಲಿಗೆ ಮತಯಾಚನೆಯಲ್ಲಿ ತೊಡಗಿದ್ದಾರೆ.

‘B’ form distributed to candidates by various parties today
Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...