Home namma chikmagalur ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆಹಿಡಿಯಲು ಕಾರ್ಯಾಚರಣೆ
namma chikmagalurchikamagalurHomeLatest News

ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆಹಿಡಿಯಲು ಕಾರ್ಯಾಚರಣೆ

Share
Share

ನರಸಿಂಹರಾಜಪುರ: ತಾಲ್ಲೂಕಿನ ನರಸಿಂಹರಾಜಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಒಂಟಿ ಸಲಗವನ್ನು ಸೆರೆಹಿಡಿಯಲು ಕಾರ್ಯಾಚರಣೆಗಿಳಿದ ಕೆಲವೇ ಗಂಟೆಗಳಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ತಾಲ್ಲೂಕಿನ ನರಸಿಂಹರಾಜಪುರ ಅರಣ್ಯ ವಲಯ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಳೆದ ಆರು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ ಹಿಡಿಯಲು ಆಗಸ್ಟ್ 2ರಂದು ಅನುಮತಿ ದೊರೆತ್ತಿತ್ತು. ಆನೆ ಸೆರೆಹಿಡಿಯಲು ಶಿವಮೊಗ್ಗ ತಾಲ್ಲೂಕು ಸಕ್ರೆಬೈಲು ಆನೆ ಶಿಬಿರದಲ್ಲಿದ್ದ 4 ಹಾಗೂ ಕುಶಾಲಪುರದ ದುಬಾರೆ ಆನೆ ಶಿಬಿರದ 3 ಆನೆಗಳನ್ನು ಕಡಹಿನಬೈಲು ಗ್ರಾಮ ಪಂಚಾಯಿತಿಯ ಗಾಂಧಿ ಗ್ರಾಮಕ್ಕೆ ಭಾನುವಾರ ತರಿಸಲಾಗಿತ್ತು.

ಸೋಮವಾರ ಬೆಳಿಗ್ಗೆ 5ರ ವೇಳೆಗೆ ಆನೆ ಬೀಡುಬಿಟ್ಟಿರುವ ಸ್ಥಳವನ್ನು ಕಂಡು ಹಿಡಿಯಲು ಶಿವಮೊಗ್ಗದ ಅರವಳಿಕೆ ತಜ್ಞ ಡಾ. ಮುರುಳಿ ಮನೋಹರ, ಕೊಡಗಿನ ಉಪವಲಯ ಅರಣ್ಯಾಧಿಕಾರಿ, ಶಾರ್ಫ್ ಶೋಟರ್ ರಂಜನ್ ನೇತೃತ್ವದ ತಂಡ ತೆರಳಿತ್ತು.

ಬೆಳಿಗ್ಗೆ 10ರ ವೇಳೆಗೆ ಆನೆ ಇರುವ ಸ್ಥಳ ತಂಡ ಪತ್ತೆ ಮಾಡಿತು. ಹಳೇ ಹಾರೆಕೊಪ್ಪ ಭಾಗದ ಅರಣ್ಯ ಪ್ರದೇಶದಲ್ಲಿ ಆನೆ ಇರುವ ಸ್ಥಳದಲ್ಲಿ ಒಂದು ಕಡೆ ದೊಡ್ಡ ಕೆರೆಯಿತ್ತು. ಇನ್ನೊಂದು ಮಲ್ಲಂದೂರು ಗುಡ್ಡ ಇತ್ತು. ಆನೆ ಅರಣ್ಯ ಬಿಟ್ಟು ಎಲ್ಲಿ ಹೋಗದಂತೆ ಯೋಜನೆ ರೂಪಿಸಲಾಯಿತು. ಮಧ್ಯಾಹ್ನ 1 ಗಂಟೆ 5 ನಿಮಿಷ ಸಮಯದಲ್ಲಿ ಆನೆಗೆ ಅರವಳಿಕೆಯನ್ನು ಬಂದೂಕಿನ ಮೂಲಕ ನೀಡಲಾಯಿತು. ನಂತರ ಮಧ್ಯಾಹ್ನ 2ರ ವೇಳೆಗೆ 7 ಸಾಕಾನೆಗಳನ್ನು ಆನೆ ಇರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಪ್ರಜ್ಞೆ ತಪ್ಪಿದ್ದ ಒಂಟಿಸಲಗಕ್ಕೆ ಸರಪಳಿ ಬೀಗಿದು 4.30ರ ವೇಳೆಗೆ ಅರಣ್ಯದಿಂದ ಗ್ರಾಮದ ವ್ಯಾಪ್ತಿಗೆ ತರಲಾಯಿತು.

ಕಳೆದ 6 ತಿಂಗಳಿನಿಂದ ಒಂಟಿ ಸಲಗ ರೈತರು ಬೆಳೆದ ಬೆಳೆ ಹಾನಿ ಮಾಡುತ್ತಿತ್ತು. ಇದೇ ವ್ಯಾಪ್ತಿಯಲ್ಲಿ ಒಂಟಿ ಸಲಗ ಬೀಡುಬಿಟ್ಟಿರುವುದರಿಂದ ಸೀತೂರು ಗ್ರಾಮದ ಕೆರೆಗದ್ದೆ ಉಮೇಶ್ ಮತ್ತು ಮಡಬೂರು ಗ್ರಾಮದ ಎಕ್ಕಡ ಬೈಲಿನ ವರ್ಗೀಸ್ ಎಂಬುವರನ್ನು ಕೊಂದಿರಬಹುದು ಎಂಬ ಶಂಕೆಯಿದೆ. ಅಂದಾಜು 20 ವರ್ಷದ ಗಂಡಾನೆಯಾಗಿದೆ ಎಂದು ಕೊಪ್ಪ ಡಿಎಫ್‌ಒ ಶಿವಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಕೊಪ್ಪ ಎಸಿಎಫ್ ವಿಜಯಶಂಕರ್, ನರಸಿಂಹರಾಜಪುರ ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿ ಆದರ್ಶ, ಕಳಸ ವಲಯ ಅರಣ್ಯಾಧಿಕಾರಿ ನಿಶ್ಚಿತ್, ಭದ್ರಾ ಅಭಯಾರಣ್ಯದ ವಲಯ ಅರಣ್ಯಾಧಿಕಾರಿ ಗೌರವ್, ಸಕ್ರಬೈಲು ಮತ್ತು ದುಬಾರೆ ಆನೆ ಶಿಬಿರದ ಮಾವುತರೂ ಸೇರಿ 150 ಸಿಬ್ಬಂದಿ ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು. ಸಾವಿರಾರೂ ಸಂಖ್ಯೆ ಯಲ್ಲಿ ಗ್ರಾಮಸ್ಥರು ಸೆರೆಹಿಡಿದ ಒಂಟಿ ಸಲಗವನ್ನು ವೀಕ್ಷಿಸಲು ಜಮಾಯಿಸಿದ್ದರು.

Operation to capture a lone wolf who was causing trouble

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...