Home namma chikmagalur ಶಾಸಕರು ಗುರುವಿಗೆ ತಿರುಮಂತ್ರ ಹಾಕುವುದು ಬೇಡ
namma chikmagalurchikamagalurHomeLatest News

ಶಾಸಕರು ಗುರುವಿಗೆ ತಿರುಮಂತ್ರ ಹಾಕುವುದು ಬೇಡ

Share
Share

ಚಿಕ್ಕಮಗಳೂರು: ಇಂದು ಶಾಸಕರಾಗಿರುವವರು ೧೫ ವರ್ಷ ಸಿ.ಟಿ.ರವಿಗೆ ಜೈ ಎಂದಿದ್ದರು. ಭಾರತ್ ಮಾತಾ ಕಿ ಜೈ, ಬಿಜೆಪಿ ಜೈ, ಸಿ.ಟಿ.ರವಿ ಜೈ ಎನ್ನುತ್ತಿದ್ದರು. ಇಂಥವರು ನನಗೆ ಪಾಠ ಹೇಳುವುದು ಬೇಡ ಎಂದು ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಹಿಂದಿನ ಫೋಟೋಗಳನ್ನು ತೆಗೆದು ನೋಡಿ. ಶೇ. ೫೦ರಷ್ಟು ಫೋಟೋಗಳಲ್ಲಿ ಇಂದಿನ ಶಾಸಕರ ಫೋಟೊಗಳು ಇವೆ. ಟೀಕೆ ಮಾಡುವಾಗ ನಾವು ಯಾರನ್ನು ಟೀಕೆ ಮಾಡುತ್ತೇವೆ ಎಂಬ ಎಚ್ಚರಿಕೆಯೂ ಇರಬೇಕು ಎಂದರು.

ಗುರುವಿಗೆ ತಿರುಮಂತ್ರ ಹಾಕಲು ಬಂದರೆ ಗುರು ಇನ್ನೂ ಮೂರ್ನಾಲ್ಕು ವಿದ್ಯೆ ಇಟ್ಟುಕೊಂಡಿರುತ್ತಾನೆ. ಕಾಲ ಬಂದಾಗ ಆ ವಿದ್ಯೆಗಳನ್ನು ಉಪಯೋಗ ಮಾಡಿಕೊಳ್ಳುತ್ತಾನೆ. ಗುರುವಿಗೆ ತಿರುಮಂತ್ರ ಹಾಕುವುದು ಬೇಡ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೆಸರನ್ನು ಹೇಳದೆ ಸಿ.ಟಿ.ರವಿ ಎಚ್ಚರಿಕೆ ನೀಡಿದರು.

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟಿರುವ ಪ್ರಕರಣಕ್ಕೆ ಸಂಬAಧಪಟ್ಟAತೆ ನಮ್ಮ ಆಕ್ಷೇಪ ಇರುವುದು ಧರ್ಮಸ್ಥಳದ ವಿರುದ್ಧ ಚ್ಯುತಿ ತರುವ ಷಡ್ಯಂತ್ರದ ವಿರುದ್ಧ. ತನಿಖೆ ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ನಡೆಯಲಿ. ನಾವು ಯಾರು ಅಡ್ಡಗಾಲು ಹಾಕುವುದಿಲ್ಲ ಎಂದು ತಿಳಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿಗೆ ಮಸಿ ಬಳಿಯುವ ಷಡ್ಯಂತ್ರವನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಜನರೇ ಸಿಡಿದೇಳುತ್ತಾರೆ. ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆ ಆಗಲಿ. ತನಿಖಾ ಹಂತದಲ್ಲಿ ನಾನು ಏನು ಮಾತನಾಡುವುದಿಲ್ಲ.

ಆದರೆ ಷಡ್ಯಂತ್ರ ಮಾಡುತ್ತಿರುವವರು ಬಾಲ ಬಿಚ್ಚಿದರೆ ಸಮಾಜವೇ ಉತ್ತರ ಕೊಡುತ್ತದೆ. ಸಜ್ಜನರು ಸುಮ್ಮನಿದ್ದಾರೆ ಎಂದು ದುರ್ಜನರು ಮೆರೆಯಬಹುದು ಎಂದುಕೊAಡರೆ ಅದು ಒಳ್ಳೆಯದಲ್ಲ ಎಂದರು.

ಟಿಪ್ಪು ಸುಲ್ತಾನ್ ಹಿಂದೂ, ಕ್ರಿಶ್ವಿಯನ್ ಹಾಗೂ ಕನ್ನಡದ ಕೊಲೆಗೆ ಅಡಿಗಲ್ಲು ಹಾಕಿದ್ದ. ಕನ್ನಂಬಾಡಿ ಕಟ್ಟೆ ನಿರ್ಮಾಣಕ್ಕಲ್ಲ  ಆಕ್ರೋಶ ವ್ಯಕ್ತಪಡಿಸಿದರು.

ಕೆಆರ್‌ಎಸ್‌ಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದ ಎನ್ನುವ ಸಚಿವ ಎಚ್.ಸಿ.ಮಹದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇತಿಹಾಸ ಅರಿಯದವರಿಂದ ಅಪಾಯವಿರುವುದಿಲ್ಲ. ತಿರುಚುವವರಿಂದ ಅಪಾಯ ಹೆಚ್ಚು. ಕೆಲವರು ಓಟು ಸಿಗುತ್ತದೆ ಎಂದರೆ ಟಿಪ್ಪುವೇ ನಮ್ಮಪ್ಪ ಎನ್ನುತ್ತಾರೆ ಎಂದು ಕಿಡಿಕಾರಿದರು.

ಟಿಪ್ಪು ಸತ್ತಿದ್ದರಿಂದ ಕನ್ನಡ ಉಳಿಯಿತು. ಇದು ಕನ್ನಡಿಗರ ಪುಣ್ಯ. ಬ್ರಿಟೀಷರ ವಿರುದ್ಧ ಟಿಪ್ಪು ಸುಲ್ತಾನ್ ಹೋರಾಟ ಮಾಡಿದ್ದ ಎಂದರೆ ಒಪ್ಪುತ್ತೇವೆ. ಸ್ವತಂತ್ರö್ಯ ಹೋರಾಟಗಾರ ಎಂದರೆ ಅದು ಒಪ್ಪಲು ಸಾಧ್ಯವಿಲ್ಲದ ಮಾತು. ಟಿಪ್ಪು ಅಡಳಿತದಲ್ಲಿ ಆಡಳಿತ ಭಾಷೆಯಾಗಿದ್ದ ಕನ್ನಡವನ್ನು ತೆಗೆದುಹಾಕಿ ಪರ್ಷಿಯನ್ ಭಾಷೆಯನ್ನು ಹೇರಿದ್ದ. ಆತ ಅಧಿಕಾರದಲ್ಲಿ ಮುಂದುವರಿದಿದ್ದರೆ ಕನ್ನಡಕ್ಕಾಗಿ ಕೈ ಎತ್ತಿದವರ ಕೈ ಮತ್ತು ಕೊರಳನ್ನು ಕತ್ತರಿಸುವ ಕೆಲಸ ನಡೆಯುತ್ತಿತ್ತು ಎಂದು ಹೇಳಿದರು.

MLAs should not chant Thirumantra for Guru

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...