Home Latest News ಶಾಸಕಿ ನಯನ ಕಮಲಮ್ಮರ ಕೇಸರಿ ಶಾಲು, ಕೆರಳಿ ನಿಂತ ಪ್ರಗತಿಪರರು ಕೈ,ಕೈ ಮುಗಿಯುತ್ತಿರುವ ಕಾಂಗ್ರೆಸ್?
Latest NewschikamagalurHomenamma chikmagalur

ಶಾಸಕಿ ನಯನ ಕಮಲಮ್ಮರ ಕೇಸರಿ ಶಾಲು, ಕೆರಳಿ ನಿಂತ ಪ್ರಗತಿಪರರು ಕೈ,ಕೈ ಮುಗಿಯುತ್ತಿರುವ ಕಾಂಗ್ರೆಸ್?

Share
Share

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಶಾಸಕಿ ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮರ ಕೇಸರಿ ಶಾಲು ಪ್ರಗತಿಪರರನ್ನು ಕೆರಳಿಸುವುದರ ಜೊತೆಗೆ ಗಾಂಧಿ ಪ್ರತಿಮೆ ಮುಂದೆ ಪಶ್ಚಾತ್ತಾಪ ಪಟ್ಟುಕೊಳ್ಳಲು ನಾಳೆ ತಯಾರಾಗಿದ್ದಾರೆ.ಸದಾ ಕೋಮುವಾದವನ್ನೆ ಉಸಿರಾಡುವ ಹಲವಾರು ಜಿಲ್ಲೆಗಳಿಗೆ ಕಾಲಿಡದಂತೆ ನಿಷೇದ ಇರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿರುವುದು ಪ್ರಗತಿಪರ ಮನಸ್ಸುಗಳನ್ನು ಘಾಸಿಗೊಳಿಸಿದೆ.

ನಯನಗೆ ಇದು ಕ್ಷುಲ್ಲಕ ವಿಷಯ ಇರಬಹುದು ಆದರೆ ಪ್ರಗತಿಪರ ವಿಚಾರಧಾರೆ ಜ್ಯಾತ್ಯಾತೀತ ತತ್ವಕ್ಕೆ ಬೆಂಕಿ ಇಟ್ಟಂತೆ ಆಗಿದೆ.ಇದರ ಜೊತೆಗೆ ನಯನಮೋಟಮ್ಮ ಗೊತ್ತಿಲ್ಲದೆ ಆಗಿದೆ ಇಲ್ಲಿಗೆ ಬಿಟ್ಟು ಬಿಡಿ ಮುಂದೆ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದರೆ ಸಮಸ್ಯೆ ಜಟಿಲ ಆಗುತ್ತಿರಲಿಲ್ಲ.ಆದರೆ ನಾನು ಮಾಡುವುದೆ ಸರಿ ಎಂದು ತನ್ನ ಹಿಂಬಾಲಕರ ಮೂಲಕ ಪತ್ರಿಕೆಗಳಲ್ಲಿ ಹೇಳಿಕೆ ನೀಡಿರುವುದು ಬೆಂಕಿಗೆ ಪೆಟ್ರೋಲ್ ಸುರಿದಂತೆ ಆಗಿದೆ.

ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಉಗಿದ ಮೇಲಾದರು ಎಚ್ಚತ್ತು ಕೊಳ್ಳದ ನಯನರ ವರ್ತನೆ ನೋಡಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.ಇದರ ಜೊತೆಗೆ ಸಮಸ್ಯೆ ಬೆಳೆಸದಂತೆ ಮಾಡಲು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಂಶುಮಂತ್ ಶತಪ್ರಯತ್ನ ನಡೆಸಿದರೆ ಮುಂದೆ ಕಾಂಗ್ರೆಸ್ ಅಧ್ಯಕ್ಷ ಆಗಲೇ ಬೇಕು ಎಂದು ನಯನ ರನ್ನು ಓಲೈಸಲು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದಸ್ವಾಮಿ ನೀವು ಮಾಡಿರುವುದು ಸರಿ ಎಂದು ಫೇಸ್ ಬುಕ್ಕಲ್ಲಿ ಕಾಮೆಂಟ್ ಹಾಕಿ ಸಮಾಧಾನ ಮಾಡಿರುವುದು ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ.

ಕಾಂಗ್ರೆಸ್ ನ ಮುಖಂಡರು ಮತ ಪಡೆಯಲು ಪ್ರಗತಿಪರರ ಮನೆ ಬಾಗಿಲಿಗೆ ಹೋಗಿರುವುದು ಸುಳ್ಳಾ ಈಗ ಮೌನವಹಿಸಿರುವುದು ಶಾಸಕರನ್ನು ಮೆಚ್ಚಿಸಲಾ ಎಂಬ ಪ್ರಶ್ನೆ ಕೇಳ ಬೇಕಾಗಿದೆ. ಅಧಿಕಾರ ಮದ ಸಣ್ಣ ವಿಷಯಕ್ಕೆ ಮತ್ತಷ್ಟು ಬೆಂಕಿ ಉಗುಳುವ ಮಟ್ಟಕ್ಕೆ ಹೋಗುತ್ತಿರುವುದು ಮಾತ್ರ ಸತ್ಯ. ಈಗಾಗಲೇ ಬಿ,ಎಸ್,ಪಿಯವರು ಕೆಂಡ ಕಾರಿದ್ದಾರೆ ನಯನ ಮಾತ್ರ ನನಗೆ ಮತ ಹಾಕದವರ ಪಿತೂರಿ ಎಂದರೆ ನಿಜವಾಗಿ ಪಿತೂರಿ ನಡೆಸುವವರು ನಿಮ್ಮ ಮೆಚ್ಚಿಸುವವರು ಎಂದು ಅರಿತು ಕೊಳ್ಳುವುದು ಒಳ್ಳೆಯದು .

Is Congress running out of steam with progressives outraged over MLA Nayana Kamalamma’s saffron shawl?

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...