Home Latest News ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ
Latest NewschikamagalurHomenamma chikmagalur

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

Share
Share

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕಾರಣ ನೀಡಿ ಪಡಿತರವನ್ನು ಅಂಗಡಿ ಮಾಲೀಕರಿಗೆ ೧೫ನೇ ತಾರೀಖಿನಿಂದ ಎತ್ತುವಳಿ ನೀಡಲಾಗುತ್ತಿದೆ. ಇದರಿಂದ ಪಡಿತರದಾರರಿಗೆ ವಿತರಣೆ ಮಾಡುವುದು ತಡವಾಗುತ್ತಿದೆ ಎಂದು ತಿಳಿಸಿದರು.

ನಿತ್ಯ ಅಂಗಡಿ ಮುಂದೆ ಸರತಿ ಸಾಲು ಬೆಳೆಯುತ್ತದೆ. ಹೀಗಾಗಿ ಹಿಂದಿನ ಪದ್ದತಿಯಂತೆ ತಿಂಗಳ ೫ನೇ ತಾರೀಖಿನೊಳಗೆ ಪಡಿತರವನ್ನು ಎತ್ತುವಳಿ ಮಾಡಿಸಿದರೆ ವಿತರಣೆ ಮಾಡಲು ಅನುಕೂಲ ಆಗಲಿದೆ ಎಂದರು.

ಅಂಗಡಿ ಮಾಲೀಕರಿಗೆ ಬರಬೇಕಾದ ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣವನ್ನು ಆಯಾ ತಿಂಗಳಲ್ಲೇ ಪಾವತಿ ಮಾಡಬೇಕು. ಸುಮಾರು ೭ ವರ್ಷದಿಂದ ಇಕೆವೈಸಿ ಮಾಡಿರುವ ಹಣವೂ ಕೂಡ ಬಂದಿಲ್ಲ. ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ ೨೪ ಗಂಟೆಗಳ ನಂತರ ಅಪ್‌ಡೇಟ್ ಆಗುತ್ತಿದೆ. ಕೂಡಲೇ ಈ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಬಿಲ್ ಹಾಕಿದ ಕೂಡಲೇ ಪಡಿತರ ವಿತರಣೆಗೆ ಅವಕಾಶ ಮಾಡಿಕೊಡಬೇಕು ಎಂದರು.

ರಾಜ್ಯ ಸರಕಾರ ಮುಂದೆ ೫ ಕಿಲೋ ಅಕ್ಕಿ ಬದಲಿಗೆ ಆಹಾರ ಪದಾರ್ಥಗಳ ಕಿಟ್ ನೀಡಲು ಮುಂದಾಗಿದೆ. ಕಿಟ್ ನೀಡಲಿ. ಆದರೆ, ಅಕ್ಕಿ ನೀಡುವುದನ್ನು ನಿಲ್ಲಿಸಬಾರದು. ಕಿಟ್ಟನ್ನು ನಾವು ಖರೀದಿಸಿ ಪಡಿತರದಾರರಿಂದ ಹಣ ಪಡೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಅಕ್ಕಿ ಪೂರೈಕೆ ನಿಲ್ಲಿಸಬಾರದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ, ಬಸವರಾಜ್, ದೇವರಾಜ್, ಸಿದ್ದೇಗೌಡ, ಎಂ.ಎಸ್ ಮಂಟೆಸ್ವಾಮಿ ಉಪಸ್ಥಿತರಿದ್ದರು

State Ration Association demands adequate ration distribution

Share

Leave a comment

Leave a Reply

Your email address will not be published. Required fields are marked *

Don't Miss

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ ಪಟ್ಟಣದ ಗುಣವಂತೆ ಗ್ರಾಮದಲ್ಲಿರುವ ಕಸ ಹಾಗೂ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ ವಿಮೆಗೆ ನೋಂದಣಿ ಹೆಚ್ಚು ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು....

Related Articles

ESA ಕರಡು ಅಧಿಸೂಚನೆ: ಭೌತಿಕ ಸರ್ವೆ ಬಳಿಕವೇ ಅಂತಿಮ ಅಧಿಸೂಚನೆಗೆ ಒತ್ತಾಯ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಕುರಿತ 7ನೇ ಕರಡು ಅಧಿಸೂಚನೆಯಲ್ಲಿ ಚಿಕ್ಕಮಗಳೂರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿ.ಪಿ.ಐ. ಪ್ರತಿಭಟನೆ

ಚಿಕ್ಕಮಗಳೂರು: ನಿವೇಶನ ರಹಿತ ಬಡ ಕೂಲಿ ಕಾರ್ಮಿಕರಿಗೆ ನಿವೇಶನ ಒದಗಿಸುವುದು, ಎಸ್‌ಐಆರ್‌ ಪರಿಷ್ಕರಣೆಯಲ್ಲಿನ ಲೋಪ ಸರಿಪಡಿಸುವುದು...

ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ

ಕಡೂರು : ಚಲಿಸುತ್ತಿದ್ದ ಎಲೆಕ್ಟಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ...

ಅಪಪ್ರಚಾರಕ್ಕೆ ನೊಂದ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ಸಮೀಪ ಯುವಕ-ಯುವತಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತರನ್ನು...