Home namma chikmagalur ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಗೋಡೆಬರಹ-ಬೀದಿ ನಾಟಕದ ಮೂಲಕ ಅರಿವು
namma chikmagalurchikamagalurHomeLatest News

ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಗೋಡೆಬರಹ-ಬೀದಿ ನಾಟಕದ ಮೂಲಕ ಅರಿವು

Share
Share

ಚಿಕ್ಕಮಗಳೂರು:ನಗರದ ನಾಗರೀಕರಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವುದು ಸ್ವಚ್ಚ ಭಾರತ್ ಮಿಷನ್ ಉದ್ದೇಶವಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ಆಜಾದ್ ಪಾರ್ಕಿನ ಬಳಿ ನಗರಸಭೆ, ಸ್ವಚ್ಚ ಭಾರತ್ ಮಿಷನ್‌ನ ೨.೦ ಯೋಜನೆಯಡಿಯಲ್ಲಿ ಸಾರ್ವಜನಿಕರಿಗೆ ಸ್ವಚ್ಚತೆ ಬಗ್ಗೆ ಗೋಡೆಬರಹ ಮತ್ತು ಬೀದಿ ನಾಟಕದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ಮತ್ತು ರಾಜ್ಯಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿದೆ ಎಂದು ಶ್ಲಾಘಿಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ನಗರಸಭೆಯಿಂದ ಕೈಗೊಂಡ ಫುಟ್‌ಪಾತ್ ಮೇಲಿನ ವಸ್ತುಗಳ ತೆರವು ಮತ್ತು ಸಂತೆಯಲ್ಲಿ ಸ್ವಚ್ಚತೆಯನ್ನು ಮೂಡಿಸಿದ ಪರಿಣಾಮ ವರ್ತಕರು ಸಹಕರಿಸಿದ್ದಾರೆ. ನಗರದ ಹೊರವಲಯದ ವಾರ್ಡ್‌ಗಳಲ್ಲಿ ಸ್ವಚ್ಚತೆಯಲ್ಲಿ ಹಿಂದಿ ಬಿದ್ದಿದ್ದು, ಈ ಬಗ್ಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಸ ಸಂಗ್ರಹಕ್ಕೆ ಗುರ್ತಿಸಲಾದ ಸ್ಥಳಗಳಲ್ಲಿ ಸಾರ್ವಜನಿಕರು ಕಸವನ್ನು ಹಾಕದೆ ಎಲ್ಲೆಂದರಲ್ಲಿ ಹಾಕಲಾಗುತ್ತಿದೆ. ಪ್ರತಿದಿನ ಗಂಟೆಗಾಡಿ ಕಸ ಸಂಗ್ರಹ ಮಾಡುತ್ತಿಲ್ಲ ಎಂಬ ದೂರು ನಾಗರೀಕರಿಂದ ಬರುತ್ತಿದ್ದು, ಈ ಬಗ್ಗೆ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಹರಿಸಬೇಕೆಂದು ಹೇಳಿದರು.

ಬೀದಿನಾಯಿಗಳ ಉಪಟಳ ಮತ್ತು ಬಿಡಾಡಿ ದನಗಳಿಂದ ಆಗುತ್ತಿರುವ ತೊಂದರೆಯ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.

ಸಧ್ಯದಲ್ಲೇ ಪರಿಸರ ಉಳಿಸಲು ನಗರದ ಪ್ರತೀ ವಾರ್ಡ್‌ನಲ್ಲಿ ಜಾಥಾ ನಡೆಸುವ ಮೂಲಕ ಅರಿವು ಮೂಡಿಸಲು ದಿನಾಂಕ ನಿಗದಿಮಾಡುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಕಳೆದ ನಾಲ್ಕು ವಾರಗಳಿಂದ ಸ್ವಚ್ಚತೆಗೆ ಆದ್ಯತೆ ನೀಡುವಂತೆ ವರ್ತಕರು ಮತ್ತು ನಾಗರೀಕರಲ್ಲಿ ನಗರಸಭೆಯಿಂದ ಅರಿವು ಮೂಡಿಸಲಾಗಿದ್ದು, ಇದರಿಂದ ಸುಂದರ ನಗರವನ್ನಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಗೋಡೆ ಬರಹ ಮತ್ತು ಬೀದಿ ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಚತೆ ಕುರಿತು ಅರಿವು ಮೂಡಿಸಲು ೨೦ ನಾಟಕ ತಂಡಗಳನ್ನು ಆಯ್ಕೆಮಾಡಲಾಗಿದೆ ಎಂದರು.

೨೬೦೦ ಅಡಿಗಳಷ್ಟು ಗೋಡೆಬರಹದ ಮೂಲಕ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಗರಸಭೆ ಸದಸ್ಯರು ಸ್ವಚ್ಚತೆಗೆ ಆದ್ಯತೆ ನೀಡಿ ಜಾಗೃತಿ ಮೂಡಿಸಲು ತಿರುಪತಿಗೆ ತೆರಳಲು ಸಧ್ಯದಲ್ಲೇ ದಿನಾಂಕ ನಿಗದಿಮಾಡಲಾಗುವುದೆಂದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ಸದಸ್ಯರಾದ ಎ.ಸಿ. ಕುಮಾರ್‌ಗೌಡ, ಪರಮೇಶ್ ರಾಜ್ ಅರಸ್, ರೂಪಾ ಕುಮಾರ್, ಗೋಪಿ, ಗುರುಮಲ್ಲಪ್ಪ, ಕೀರ್ತಿ ಮತ್ತಿತರರು ಉಪಸ್ಥಿತರಿದ್ದರು.

Awareness among the public about cleanliness through wall writing and street drama

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...