Home namma chikmagalur ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
namma chikmagalurchikamagalurHomeLatest News

ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲಿ ಸ್ಪೂರ್ತಿಯಿಂದ ಕ್ರೀಡಾ ಮನೋಭಾವದೊಂದಿಗೆ ಭಾಗವಹಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.

ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಪ್ರಕೃತಿ ಅಕಾಡೆಮಿ, ಹಿರಿಯ ಪ್ರಾಥಮಿಕ ಶಾಲೆ, ಗವನಹಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಸಬಾ-೨ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ೨೦೨೫-೨೬ ನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆ, ಸಾಂಸ್ಕೃತಿಕ, ಭಾವಗೀತೆ, ಭಕ್ತಿಗೀತೆ ಮುಂತಾದ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ದೈಹಿಕ, ಮನಸ್ಸು, ಹೃದಯ, ಮೆದುಳು ಚುರುಕಾಗುತ್ತದೆ. ಈ ನಿಟ್ಟಿನಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂದರು. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಸ್ಕಾರ ಕಲಿಸುವಂತಾದಾಗ ಮಾತ್ರ ದೇಶ, ನಾಡು-ನುಡಿ, ನೆಲ-ಜಲ ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ತಿಳುವಳಿಕೆ ಮೂಡಿಸುವುದು ಅಗತ್ಯ ಎಂದರು.

ಎಲ್ಲಾ ವರ್ಗದ ವಿದ್ಯಾರ್ಥಿಗಳಲ್ಲಿ ಮೊದಲು ದೇಶಪ್ರೇಮ ಬೆಳೆಸಬೇಕು. ದೇಶ ಮತ್ತು ಧರ್ಮ ಇದ್ದರೆ ನಾವು ಉಳಿಯುತ್ತೇವೆ. ಈ ಬಗ್ಗೆ ಪ್ರಾಥಮಿಕ ಹಂತದಲ್ಲೇ ವಿದ್ಯಾರ್ಥಿಗಳಿಗೆ ಕಲಿಸುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ ಎಂದು ಹೇಳಿದರು. ನ್ಯಾಯ ನಿರ್ಣಾಯಕರು ವಿಜೇತರಾದ ತಂಡಗಳಿಗೆ ಪ್ರಾಮಾಣಿಕವಾಗಿ ತೀರ್ಪು ನೀಡುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ, ನಗರಸಭೆ ಸದಸ್ಯ ಪರಮೇಶ್ ರಾಜ್ ಅರಸ್, ಪ್ರಕೃತಿ ಅಕಾಡೆಮಿಯ ಅಧ್ಯಕ್ಷರಾದ ಹೆಚ್.ಜಿ ನಾಗೇಶ್, ದಾನಿಗಳಾದ ನೀಲಕಂಠಾಚಾರಿ, ಜಿಲ್ಲಾದೈಹಿಕ ಪರಿವೀಕ್ಷಕರು ಪಾಲಾಕ್ಷಪ್ಪ, ಮಹೇಶ್ವರಪ್ಪ, ಕಿರಣ್ ಕುಮಾರ್, ಪರಮೇಶ್, ಚಂದ್ರಕಾಂತ್, ವಿಲ್ಮಾ, ದಿನೇಶ್, ಶಿವಪ್ಪ, ಮೋಹನಾಕ್ಷಿ, ಕೃಷ್ಣರಾಜ್ ಅರಸ್, ಜಾನಕಮ್ಮ, ಉಪಸ್ಥಿತರಿದ್ದರು. ಮೊದಲಿಗೆ ಶಿಕ್ಷಕಿ ರೇಣುಕ ಸ್ವಾಗತಿಸಿದರು.

Zonal level senior primary schools sports meet

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...