Home namma chikmagalur ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ
namma chikmagalurchikamagalurHomeLatest News

ಸೀಗೋಡಿನಲ್ಲಿ 299 ಅನಧಿಕೃತ ರಸಗೊಬ್ಬರ ಚೀಲ ಪತ್ತೆ

Share
Share

ಚಿಕ್ಕಮಗಳೂರು:  ಕೊಪ್ಪ ತಾಲ್ಲೂಕಿನ ಸಿಗೋಡು ಗ್ರಾಮದಲ್ಲಿರುವ ಸುಭಾಷ್‌ನಗರ ಪ್ರದೇಶದಲ್ಲಿ ನಡೆಯುತ್ತಿದ್ದ ಅನಧಿಕೃತ ರಸಗೊಬ್ಬರ ದಾಸ್ತಾನು ಹಾಗೂ ಸಾಗಾಟ ಪ್ರಕರಣವನ್ನು ಪತ್ತೆಹಚ್ಚಿರುವ ಕೃಷಿ ಮತ್ತು ಪೊಲೀಸ್ ಇಲಾಖೆ ಸುಮಾರು ೫ ಲಕ್ಷ ರೂ. ಮೌಲ್ಯದ ೨೯೯ ಯೂರಿಯಾ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದೆ.

ನಿನ್ನೆ (ಆಗಸ್ಟ್೭) ಮಧ್ಯಾಹ್ನ ಜರುಗಿದ ಈ ಜಂಟಿ ಕಾರ್ಯಾಚರಣೆಯಲ್ಲಿ ರಸಗೊಬ್ಬರ ಮಾರಾಟ ಪರವಾನಗಿ ಅಥವಾ ಇ-ವೇ ಬಿಲ್‌ಗಳಿಲ್ಲದೇ, ಸುಭಾಷ್‌ನಗರದ ಮನೆಯೊಂದರ ಮುಂಭಾಗ ಲಾರಿ (ವಾಹನ ಸಂಖ್ಯೆ ಕೆ.ಎ.೦೩ ಎಎ ೩೯೨೪)ಯಲ್ಲಿ ೨೨೦ ಯೂರಿಯಾ ರಸಗೊಬ್ಬರ ಚೀಲಗಳನ್ನು ಲೋಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದೇ ಮನೆಯ ಗೋದಾಮಿನಲ್ಲಿ ಇನ್ನೂ ೭೯ ಯೂರಿಯಾ ಚೀಲಗಳನ್ನು ಕಾನೂನು ಬಾಹಿರವಾಗಿ ದಾಸ್ತಾನಿರಿಸಿರುವುದು ಪತ್ತೆಯಾಗಿದೆ.

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ (ಕಲಂ ೭ ಮತ್ತು ೮) ಹಾಗೂ ಅಗತ್ಯ ವಸ್ತುಗಳ ಕಾಯ್ದೆ ೧೯೫೫ರ ಉಲ್ಲಂಘನೆಯಾಗಿರುವ ಕಾರಣ ಒಟ್ಟು ೨೯೯ (ಅಂದಾಜು ರೂ. ೫ ಲಕ್ಷ ಮೌಲ್ಯ) ಯೂರಿಯಾ ಚೀಲಗಳನ್ನು ಕೃಷಿ ಇಲಾಖಾಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಜಪ್ತಿಯಾದ ರಸಗೊಬ್ಬರವನ್ನು ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋದಾಮಿನಲ್ಲಿ ಸುರಕ್ಷಿತವಾಗಿ ದಾಸ್ತಾನಿರಿಸಲಾಗಿದ್ದು, ಮಾದರಿಗಳನ್ನು ವಿಧಾಯಕ ಹಾಗೂ ಗುಣಮಟ್ಟ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

ಅಕ್ರಮ ಸಾಗಾಟಕ್ಕೆ ಬಳಸುತ್ತಿದ್ದ ಲಾರಿ ಮತ್ತು ಮಾಲೀಕ ವಿಲ್ಫ್ರೆಡ್ ಕ್ಲೋಡ್ ಲೋಬೊ ಎಂಬಾತನನ್ನು ಬಾಳೆಹೊನ್ನೂರು ಪೊಲೀಸ್ ಠಾಣಾಧಿಕಾರಿಗಳಿಗೆ ಒಪ್ಪಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಜಾರಿದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನಗೌಡ ಎಸ್.ಪಾಟೀಲ್ ನೀಡಿರುವ ದೂರಿನ ಮೇರೆಗೆ ಬಾಳೆಹೊನ್ನೂರು ಠಾಣೆಯ ಪಿಎಸ್‌ಐ ರವೀಶ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ರೈತರಿಗೆ ಸರ್ಕಾರದ ಮೂಲಕ ಸರಿಯಾದ ದರದಲ್ಲಿ ಗುಣಮಟ್ಟದ ರಸಗೊಬ್ಬರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಹಾಗೂ ಕೃಷಿ ಇಲಾಖೆಯ ಜಂಟಿ ಪರಿಶೀಲನೆ ಮುಂದುವರೆಯಲಿದೆ. ಯಾವುದೇ ಅಕ್ರಮ ದಾಸ್ತಾನು, ಸಾಗಾಟ ಅಥವಾ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.

299 bags of illegal fertilizer found in Seagod

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...