Home Latest News ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ
Latest NewsCrime NewsHomenamma chikmagalurTarikere

ಕುರಕುಚ್ಚಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ-ಇಬ್ಬರ ಬಂಧನ

Share
Share

ಚಿಕ್ಕಮಗಳೂರು: ತಂಗಿಯನ್ನು ಕೊಲೆಗೈದಿದ್ದ ಭಾವನನ್ನು ಬಾಮೈದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಕುರಕುಚ್ಚಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಚರಣ್ (೨೩) ಕೊಲೆಯಾದ ದುರ್ದೈವಿ. ಆರೋಪಿಗಳಾದ ಚರಣ್ ಅವರ ಬಾಮೈದ ಸಂತೋಷ್ ಹಾಗೂ ಸಚಿನ್ ನಾಯಕ್ ಅವರನ್ನು ಲಕ್ಕವಳ್ಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಚರಣ್ ಅವರು ಸಂತೋಷ್ ಅವರ ತಂಗಿ ಮೇಘನಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ತನ್ನನ್ನು ಬಿಟ್ಟು ತವರಿಗೆ ಹೋದಳು ಎಂಬ ಕಾರಣಕ್ಕೆ ಚರಣ್ ೨೦೨೪ರ ಏಪ್ರಿಲ್ ೨೯ ರಂದು ಪತ್ನಿ ಮೇಘನಾ ಬಟ್ಟೆ ತೊಳೆಯಲು ಹೋದಾಗ ಅವರನ್ನು ಕೊಲೆ ಮಾಡಿ ಶವವನ್ನು ಕಾಲುವೆಗೆ ಬಿಸಾಕಿದ್ದ. ಪತ್ನಿ ಕೊಲೆಗೈದು ಜೈಲು ಸೇರಿದ್ದ ಚರಣ್, ಮೂರು ತಿಂಗಳ ಹಿಂದೆ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ.

ಚರಣ್ ಅವರು ವರ ಮಹಾಲಕ್ಷ್ಮಿ ಹಬ್ಬಕ್ಕೆ ಊರಿಗೆ ಬಂದು ವಾಪಸ್ ಬಾವಿಕೆರೆಯಿಂದ ಕರಕುಚ್ಚಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಂತೋಷ್ ಹಾಗೂ ಆತನ ಸ್ನೇಹಿತ ಸಚಿನ್ ನಾಯಕ್ ಅವರುಗಳು ಮಾರಕಾಸ್ತ್ರಗಳಿಂದ ಚರಣ್ ಮೇಲೆ ಹಲ್ಲೆ ನಡೆಸಿ ಆತನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಲು ತರೀಕೆರೆ ಡಿವೈಎಸ್ಪಿ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಲಾಗಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರು ತಿಳಿಸಿದ್ದಾರೆ.

Man murdered in Karakuchi village two arrested

 

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...