Home namma chikmagalur ಜನಜಾನುವಾರುಗಳಿಗೆ ದಯಾಮರಣ ಕೇಳಲು ರಾಜಭವನಕ್ಕೆ ಪಾದಯಾತ್ರೆ
namma chikmagalurchikamagalurHomeLatest News

ಜನಜಾನುವಾರುಗಳಿಗೆ ದಯಾಮರಣ ಕೇಳಲು ರಾಜಭವನಕ್ಕೆ ಪಾದಯಾತ್ರೆ

Share
Share

ಚಿಕ್ಕಮಗಳೂರು: ಗೋಮಾಳ ಜಾಗವನ್ನು ಖಾಸಗಿಯವರು ತಮ್ಮ ಹೆಸರಿಗೆ ಮಾಡಿಕೊಳ್ಳಲು ಪ್ರಯತ್ನ ಪಡುತ್ತಿದ್ದು ಇದನ್ನು ವಿರೋಧಿಸಿ ಜನಜಾನುವಾರುಗಳಿಗೆ ದಯಾಮರಣ ನೀಡುವಂತೆ ಚಿಕ್ಕಮಗಳೂರಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಎನ್.ಜಿ.ಉದ್ದೆಗೌಡ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 13ರಂದು ಬೆಳಗ್ಗೆ 8 ಗಂಟೆಗೆ ಚಿಕ್ಕಮಗಳೂರು ಜಿಲ್ಲೆಯ ನೆರಡಿ ಗ್ರಾಮದಿಂದ 30 ರೈತರು ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಲಿದ್ದೇವೆ. ಚಿಕ್ಕಮಗಳೂರು, ಬೇಲೂರು, ಹಗರೆ, ಹಾಸನ, ಚನ್ನರಾಯಪಟ್ಟಣ, ಎಡೆಯೂರು, ನೆಲಮಂಗಲ ಮಾರ್ಗವಾಗಿ ವಿಧಾನಸೌಧದ ವರೆಗೆ ಪಾದಯಾತ್ರೆ ನಡೆಸಲಿದ್ದೇವೆ ಎಂದು ಮಾಹಿತಿ ನೀಡಿದರು.

ನೆರಡಿ ಗ್ರಾಮದ ಸರ್ವೆ ನಂಬರ್ 35ರಲ್ಲಿ 25 ಎಕರೆ 15 ಗುಂಟೆ ಮತ್ತು 2 ಎಕರೆ 20 ಗುಂಟೆ ಜಾಗವು ಗೋಮಾಳವಾಗಿದೆ. ಹಿಂದಿನಿಂದಲೂ ಇಲ್ಲಿ ಜಾನುವಾರುಗಳು ಮೇಯ್ದುಕೊಂಡು ಬರುತ್ತಿದ್ದವು. ಆದರೆ ಇದೀಗ ಆ ಜಾಗವನ್ನು ಪಿತೂರಿ ಮಾಡಿ ತಮ್ಮ ಹೆಸರಿಗೆ ಮಾಡಿಕೊಳ್ಳಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಜಾನುವಾರುಗಳಿಗೆ ಮೇಯಲು ಜಾಗವಿಲ್ಲದೆ ಸಾಯುವ ಪರಿಸ್ಥಿತಿ ಎದುರಾಗಿದೆ. ಇಲ್ಲಿನ ರೈತರು ಜಾನುವಾರುಗಳನ್ನೇ ನಂಬಿಕೊಂಡಿರುವುದರಿಂದ ಜಾನುವಾರುಗಳಿಲ್ಲದೆ ಬದುಕಲು ಸಾಧ್ಯವಿಲ್ಲ. ಹೀಗಾಗಿ ಜಾನುವಾರುಗಳೊಂದಿಗೆ ರೈತರಿಗೂ ದಯಾ ಮರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಸಲ್ಲಿಸಲಾಗುವುದು ಎಂದರು.

ಸಚಿವರು ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸುವಂತಿಲ್ಲ ಎನ್ನುತ್ತಾರೆ. ಆದರೆ ಇರುವ ಗೋಮಾಳ ಜಾಗ ಉಳ್ಳವರ ಪಾಲಾಗುತ್ತಿದೆ. ಕೂಡಲೇ ಗುಂಡುತೋಪು, ಕೆರೆಕಟ್ಟೆ, ಡ್ಯಾಮ್ ಹಾಗೂ ಗೋಮಾಳ ಜಾಗಗಳು ಒತ್ತುವರಿಯಾಗಿರುವುದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಸುತಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ಪ್ರಮುಖರಾದ ಕೆಂಪಮ್ಮ, ರಾಜೇಗೌಡ, ಸಂದೇಶ್, ನಿರಂಜನ ಮೂರ್ತಿ ಮತ್ತಿತರರಿದ್ದರು.

People march to Raj Bhavan to demand euthanasia for animals

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...