Home namma chikmagalur ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ
namma chikmagalurchikamagalurCrime NewsHomeLatest News

ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ಸಾಲಬಾಧೆಯಿಂದ ಮನನೊಂದು ಕಳೆನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನರಸಿಂಹರಾಜಪುರ ತಾಲೂಕು ಆಲ್ದಾರ್ ಗ್ರಾಮದಲ್ಲಿ ನಡೆದಿದೆ. ಮಾಕು (೬೮) ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದವರು.

ಮಾಕು ಅವರು ೩.೨೦ ಗುಂಟೆ ಜಮೀನು ಹೊಂದಿದ್ದು, ಗ್ರಾಮೀಣ ಕೂಟದಲ್ಲಿ ೧ಲಕ್ಷ ರೂ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ೫೦ಸಾವಿರ, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೦ಸಾವಿರ, ಜತೆಗೆ ೧.೫೦ಲಕ್ಷ ಕೈಸಾಲ ಸೇರಿದಂತೆ ೩.೮೦ಲಕ್ಷ ರೂ. ಸಾಲ ಮಾಡಿ ಜಮೀನಿನಲ್ಲಿ ಶುಂಠಿ ಬೆಳೆಯನ್ನು ಬೆಳೆದಿದ್ದರು.

ಶುಂಠಿ ಬೆಳೆಗೆ ಚುಕ್ಕೆರೋಗ ಬಾಧೆ ಆವರಿಸಿದ್ದು ಶುಂಠಿ ಬೆಳೆ ಸಂಪೂರ್ಣ ನಾಶವಾಗಿದ್ದು, ಸಾಲ ತೀರಿಸುವುದು ಹೇಗೆಂದು ಯೋಚಿಸಿ ಖಿನ್ನತೆಗೆ ಒಳಗಾಗಿದ್ದರು. ಆ.೧೩ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳೆನಾಶಕ ಸೇವಿಸಿ ಅಸ್ವಸ್ಥರಾಗಿದ್ದರು.

ಮಾಕು ಅವರ ಪತ್ನಿ ಅವರು ಪತಿ ವಿಷ ಸೇವಿಸಿರುವುದು ತಿಳಿದು ಮಗನಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಅವರನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A farmer commits suicide due to debt.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....