Home namma chikmagalur ಭೂಮಿ-ನಿವೇಶನಕ್ಕಾಗಿ ಹೋರಾಟ ಸಮಿತಿ ರಚನೆ
namma chikmagalurchikamagalurHomeLatest News

ಭೂಮಿ-ನಿವೇಶನಕ್ಕಾಗಿ ಹೋರಾಟ ಸಮಿತಿ ರಚನೆ

Share
Share

ಚಿಕ್ಕಮಗಳೂರು: ಕಂದಾಯ ಭೂಮಿಯನ್ನು ಡೀಮ್ಡ್, ೪(೧) ಅಧಿಸೂಚನೆಯಡಿ ಸೇರಿಸಿರುವ ಕಾರಣ ಅನೇಕ ಸಣ್ಣಬೆಳೆಗಾರರು ಬೀದಿಗೆ ಬೀಳಲಿದ್ದು, ಇದರ ವಿರುದ್ಧ ಜಿಲ್ಲೆಯಾದ್ಯಂತ ಪ್ರಬಲ ಹೋರಾಟ ರೂಪಿಸಲಿದ್ದೇವೆ ಎಂದು ಭೂಮಿ, ನಿವೇಶನ ರಹಿತರ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಪಿ.ಕುಮಾಸ್ವಾಮಿ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸದ್ಯಕ್ಕೆ ಸಮಿತಿಯಲ್ಲಿ ೨೫ ಮಂದಿ ಇರುವ ಜಿಲ್ಲಾ ಮಟ್ಟದ ಹೋರಾಟ ಸಮಿತಿ ರಚಿಸಿದ್ದು ಮುಂದೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಮಿತಿ ಮಾಡಿ ಹೋರಾಟದ ರೂಪುರೇಷೆ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿದ್ದ ಕಂದಾಯ ಭೂಮಿಯನ್ನು ಡೀಮ್ಡ್ ಮತ್ತು ೪(೧) ಅಸೂಚನೆಯಡಿ ಗುರುತಿಸಿದ್ದು ಆ ಭೂಮಿಯಲ್ಲಿ ಅದಾಗಲೇ ಸಹಸ್ರಾರು ಮಂದಿ ಬಡವರು ಅಲ್ಪಸ್ವಲ್ಪ ಭೂಮಿ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಶಾಸಕನಾದಾಗಿನಿಂದ ಒತ್ತಡ ತರುತ್ತಿದ್ದು ಅದರ ಫಲವಾಗಿ ಎಫ್‌ಎಸ್‌ಒ ನೇಮಕವಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಆದರೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಪರಿಣಾಮ ಇಂದು ಸಹಸ್ರಾರು ಮಂದಿ ಬಡವರು ಬೀದಿಗೆ ಬೀಳಲಿದ್ದಾರೆ ಎಂದ ಅವರು, ಹೀಗಾಗಿ ಅವರ ಭೂಮಿಯನ್ನು ಉಳಿಸುವುದು ಹಾಗೂ ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸುವುದು ನಮ್ಮ ಹೋರಾಟ ಸಮಿತಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಇದರಲ್ಲಿ ಯಾವುದೇ ರಾಜಕೀಯ ಹಿತಾಸಕ್ತಿ ಇಲ್ಲ, ಹೋರಾಟ ಸಮಿತಿ ಉಪಾಧ್ಯಕ್ಷರಾಗಿ- ನವರಾಜ್, ಸತೀಶ್, ನಾಗೇಶ್, ದಿವಾಕರ, ಮಹೇಶ್, ಬಸವಯ್ಯ, ಪ್ರಧಾನ ಕಾರ್ಯದರ್ಶಿ-ಲಕ್ಷ್ಮಣ ಹುಣಸೇಮಕ್ಕಿ, ಕೃಷ್ಣಮೂರ್ತಿ, ಸಹ ಕಾರ್ಯದರ್ಶಿ ಮಹೇಶ್, ಕೃಷ್ಣಪ್ರಸಾದ್, ಸುಂದರ್, ಖಜಾಂಚಿಯಾಗಿ ದುರ್ಗೇಶ್ ನೇಮಕವಾಗಿದ್ದು, ಆವತಿ ಹೋಬಳಿ ಅಧ್ಯಕ್ಷರಾಗಿ ರವಿ, ಅಂಬಳೆ-ಹುಚ್ಚಯ್ಯ, ಆಲ್ದೂರು ಯೋಗೇಶ್, ವಸ್ತಾರೆ -ಪುಟ್ಟರಾಜು, ಮಂಜು ಮತ್ತಿತರರು ಆಯ್ಕೆಯಾಗಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹುಣಸೇಮಕ್ಕಿ ಲಕ್ಷ್ಮಣ, ಮಹೇಶ್, ಹುಚ್ಚಯ್ಯ ಉಪಸ್ಥಿತರಿದ್ದರು.

Formation of a struggle committee for land acquisition

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....