Home ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ
HomeajjampuraCrime NewsLatest Newsnamma chikmagalur

ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ

Share
Share

ಚಿಕ್ಕಮಗಳೂರು: ಯಾರದ್ದೂ ಪೋಸ್ಟ್‌ಗೆ ಕಮೆಂಟ್ ಹಾಕಿ ಜೈಲು ಸೇರಿದ ಕರ್ನಾಟಕ ಮೊದಲ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಧರ್ಮಸ್ಥಳ ಪ್ರಕರಣದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್, ಬರಹ, ವಿಡಿಯೋಗಳು ಹರಿದಾಡುತ್ತಿದೆ. ಹೀಗೆ ಯಾರದ್ದೋ ಪೋಸ್ಟ್‌ಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ಪ್ರಮುಖವಾಗಿ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ ಉಮೇಶ್ ಗೌಡ ಅರೆಸ್ಟ್ ಆಗಿದ್ದಾನೆ.

ಕಮೆಂಟ್ ಕುರಿತು ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಬಿ.ಎನ್.ಎಸ್. ಕಾಯ್ದೆಯ 196 (1) ಹಾಗೂ 353 (2) ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಉಮೇಶ್ ಗೌಡನಿಗಾಗಿ ಹುಡುಕಾಡಿದ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಅವಹೇಳನ ಪೋಸ್ಟ್, ಅಥವಾ ಅಕ್ಷೇಪಾರ್ಹ ಪೋಸ್ಟ್, ವಿಡಿಯೋ ಹಾಕಿ ಅರೆಸ್ಟ್ ಆದ ಘಟನೆಗಳಿವೆ. ಆದರೆ ಇಲ್ಲಿ ಅವಹೇಳನ ಕಮೆಂಟ್ ಮಾಡಿ ಅರೆಸ್ಟ್ ಆಗಿದ್ದಾನೆ. ಯಾರದ್ದೋ ಪೋಸ್ಟ್‌ಗೆ ಕಮೆಂಟ್ ಮಾಡಿ ಅರೆಸ್ಚ್ ಆದ ರಾಜ್ಯದ ಮೊದಲ ಪ್ರಕರಣವಾಗಿದೆ. ನಟಿ ರಮ್ಯಾ ವಿರುದ್ದ ಅಶ್ಲೀ ಕಮೆಂಟ್ ಪ್ರಕರಣ ಇತ್ತೀಚೆಗಷ್ಟೇ ಬಾರಿ ಸದ್ದು ಮಾಡಿತ್ತು. ಹೀಗಾಗಿ ಪೊಲೀಸರು ಕಮೆಂಟ್ ಕುರಿತು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಮೆಂಟ್ ಮಾಡಿದ ಉಮೇಶ್ ಗೌಡನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಉಮೇಶ್ ನ್ಯಾಯಂಗ ಬಂಧನದಲ್ಲಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬರುವ ವಿಡಿಯೋ, ಫೋಟೋ, ಬರಹಗಳಗಳಿಗೆ ಕಮೆಂಟ್, ವಾಗ್ವಾದ, ಪರ ವಿರೋಧಗಳು ಹೆಚ್ಚಾಗುತ್ತಿದೆ. ಇದರ ನಡುವೆ ಹಲವರು ಉದ್ದೇಶಪೂರ್ವಕವಾಗಿ ಕೆಲ ಸಮದಾಯವನ್ನು ಟಾರ್ಗೆಟ್ ಮಾಡಿ ಕಮೆಂಟ್, ವಿಡಿಯೋಗಳನ್ನು ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹಲವರ ಲಿಸ್ಟ್ ರೆಡಿಯಾಗಿದೆ. ಪ್ರಮುಖವಾಗಿ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ, ಅಶ್ಲೀಲ ಕಮೆಂಟ್ ಮಾಡುತ್ತಿರುವವರ ಲಿಸ್ಟ್ ರೆಡಿಯಾಗಿದೆ. ಇದೀಗ ಒಬ್ಬರ ಹಿಂದೊಬ್ಬರಿಗೆ ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ಹೇಳುತ್ತಿದೆ.

Youth arrested in Ajjampura for insulting Jain girls

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...