Home ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ
HomeajjampuraCrime NewsLatest Newsnamma chikmagalur

ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ-ಅಜ್ಜಂಪುರದಲ್ಲಿ ಯುವಕ ಬಂಧನ

Share
Share

ಚಿಕ್ಕಮಗಳೂರು: ಯಾರದ್ದೂ ಪೋಸ್ಟ್‌ಗೆ ಕಮೆಂಟ್ ಹಾಕಿ ಜೈಲು ಸೇರಿದ ಕರ್ನಾಟಕ ಮೊದಲ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಧರ್ಮಸ್ಥಳ ಪ್ರಕರಣದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್, ಬರಹ, ವಿಡಿಯೋಗಳು ಹರಿದಾಡುತ್ತಿದೆ. ಹೀಗೆ ಯಾರದ್ದೋ ಪೋಸ್ಟ್‌ಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ಪ್ರಮುಖವಾಗಿ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ ಉಮೇಶ್ ಗೌಡ ಅರೆಸ್ಟ್ ಆಗಿದ್ದಾನೆ.

ಕಮೆಂಟ್ ಕುರಿತು ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಬಿ.ಎನ್.ಎಸ್. ಕಾಯ್ದೆಯ 196 (1) ಹಾಗೂ 353 (2) ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಉಮೇಶ್ ಗೌಡನಿಗಾಗಿ ಹುಡುಕಾಡಿದ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

ಸಾಮಾನ್ಯವಾಗಿ ಅವಹೇಳನ ಪೋಸ್ಟ್, ಅಥವಾ ಅಕ್ಷೇಪಾರ್ಹ ಪೋಸ್ಟ್, ವಿಡಿಯೋ ಹಾಕಿ ಅರೆಸ್ಟ್ ಆದ ಘಟನೆಗಳಿವೆ. ಆದರೆ ಇಲ್ಲಿ ಅವಹೇಳನ ಕಮೆಂಟ್ ಮಾಡಿ ಅರೆಸ್ಟ್ ಆಗಿದ್ದಾನೆ. ಯಾರದ್ದೋ ಪೋಸ್ಟ್‌ಗೆ ಕಮೆಂಟ್ ಮಾಡಿ ಅರೆಸ್ಚ್ ಆದ ರಾಜ್ಯದ ಮೊದಲ ಪ್ರಕರಣವಾಗಿದೆ. ನಟಿ ರಮ್ಯಾ ವಿರುದ್ದ ಅಶ್ಲೀ ಕಮೆಂಟ್ ಪ್ರಕರಣ ಇತ್ತೀಚೆಗಷ್ಟೇ ಬಾರಿ ಸದ್ದು ಮಾಡಿತ್ತು. ಹೀಗಾಗಿ ಪೊಲೀಸರು ಕಮೆಂಟ್ ಕುರಿತು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕಮೆಂಟ್ ಮಾಡಿದ ಉಮೇಶ್ ಗೌಡನನ್ನು ಅಜ್ಜಂಪುರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಉಮೇಶ್ ನ್ಯಾಯಂಗ ಬಂಧನದಲ್ಲಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬರುವ ವಿಡಿಯೋ, ಫೋಟೋ, ಬರಹಗಳಗಳಿಗೆ ಕಮೆಂಟ್, ವಾಗ್ವಾದ, ಪರ ವಿರೋಧಗಳು ಹೆಚ್ಚಾಗುತ್ತಿದೆ. ಇದರ ನಡುವೆ ಹಲವರು ಉದ್ದೇಶಪೂರ್ವಕವಾಗಿ ಕೆಲ ಸಮದಾಯವನ್ನು ಟಾರ್ಗೆಟ್ ಮಾಡಿ ಕಮೆಂಟ್, ವಿಡಿಯೋಗಳನ್ನು ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪೊಲೀಸರು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹಲವರ ಲಿಸ್ಟ್ ರೆಡಿಯಾಗಿದೆ. ಪ್ರಮುಖವಾಗಿ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ, ಅಶ್ಲೀಲ ಕಮೆಂಟ್ ಮಾಡುತ್ತಿರುವವರ ಲಿಸ್ಟ್ ರೆಡಿಯಾಗಿದೆ. ಇದೀಗ ಒಬ್ಬರ ಹಿಂದೊಬ್ಬರಿಗೆ ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ಹೇಳುತ್ತಿದೆ.

Youth arrested in Ajjampura for insulting Jain girls

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....