Home ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಅನಾಹುತ
HomeajjampuraCrime NewsLatest Newsnamma chikmagalur

ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಅನಾಹುತ

Share
Share

ಚಿಕ್ಕಮಗಳೂರು: ಶಿಥಿಲಾವಸ್ಥೆಯಲ್ಲಿದ್ದ ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಕಾರ್ಮಿಕರ ಎಡವಟ್ಟಿನಿಂದ ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದ್ದು, ಟ್ಯಾಂಕ್ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅನೇಕ ವಿದ್ಯುತ್ ಕಂಬಗಳು ಧರೆಗುರುಳಿವೆ. ಕಾರು ಹಾಗೂ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲಿ ಪಾರಾಗಿದ್ದು, ಸ್ಥಳದಲ್ಲಿ ನೆರೆದಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಿಲ್ಲೆಯ ಅಜ್ಜಂಪುರ ಪಟ್ಟಣದ ಬುಕ್ಕಾಂಬೂದಿ ರಸ್ತೆಯಲ್ಲಿನ ಶಿಥಿಲವ್ಯಸ್ಥೆಯಲ್ಲಿದ್ದ ೮೦ವರ್ಷಗಳ ಹಿಂದಿನ ನೀರಿನ ಟ್ಯಾಂಕ್ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಜಿಲ್ಲಾಧಿಕಾರಿಗಳು ಟ್ಯಾಂಕ್ ತೆರವುಗೊಳಿಸುವಂತೆ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶುಕ್ರವಾರ ಟ್ಯಾಂಕ್ ತೆರವುಗೊಳಿಸಲು ಪಟ್ಟಣ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದು, ತೆರವು ಕಾರ್ಯದಲ್ಲಿ ಭಾಗಿಯಾಗಿದ್ದ ಕಾರ್ಮಿಕರು ಯಾವುದೇ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳದೆ. ಟ್ಯಾಂಕ್ ತೆರವು ಕಾರ್ಯಾ ಚರಣೆಗೆ ಮುಂದಾಗಿದ್ದರಿಂದ ಬೃಹತ್ ಟ್ಯಾಂಕ್ ಏಕಾಏಕಿ ಬಿದ್ದಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಸಮೀಪದಲ್ಲಿಯೆ ನೀರಿನ ಟ್ಯಾಂಕ್ ಬಿದ್ದಿದ್ದು, ಕಾರಿನಲ್ಲಿದ್ದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯಲ್ಲಿದ್ದ ವ್ಯಕ್ತಿಯೊಬ್ಬರು ಟ್ಯಾಂಕ್ ಬೀಳುತ್ತಿದ್ದಂತೆ ಓಡಿ ಅನಾಹುತ ದಿಂದ ತಪ್ಪಿಸಿಕೊಂಡಿದ್ದಾರೆ. ಟ್ಯಾಂಕ್ ಬಿದ್ದ ರಭಸಕ್ಕೆ ಕಾರಿನ ಗಾಂಜಿಗೆ ಹಾನಿಯಾಗಿದೆ. ಜತೆಗೆ ವಿದ್ಯುತ್ ಕಂಬ ಗಳಿಗೆ ಹಾನಿಯಾಗಿದೆ. ಮುಂಜಾಗೃತ ಕ್ರಮಗಳನ್ನು ಅನುಸರಿಸದೆ ಟ್ಯಾಂಕ್ ತೆರವಿಗೆ ಮುಂದಾದ ಪಟ್ಟಣ ಪಂಚಾ ಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಇಲ್ಲಿನ ಜನರು ಆಕ್ರೋಶ ಹೊರ ಹಾಕಿದ್ದಾರೆ.

Disaster while cleaning water tank

 

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....