Home namma chikmagalur ಆನ್‌ಲೈನ್ ಮೂಲಕ ೧೦ ಲಕ್ಷ ರೂ. ಲಪಟಾಯಿಸಿದ ಖದೀಮರು
namma chikmagalurchikamagalurCrime NewsHomeLatest News

ಆನ್‌ಲೈನ್ ಮೂಲಕ ೧೦ ಲಕ್ಷ ರೂ. ಲಪಟಾಯಿಸಿದ ಖದೀಮರು

Share
Share

ಚಿಕ್ಕಮಗಳೂರು: ವ್ಯಕ್ತಿಯೊಬ್ಬರು ಅನುಮಾನಾಸ್ಪದ ಲಿಂಕ್ ಆಪ್‌ಫೈಲನ್ನು ಕ್ಲಿಕ್ ಮಾಡಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಂಡ ಪರಿಣಾಮವಾಗಿ ಸೈಬರ್ ಖದೀಮರು ರಿಮೋಟ್ ಆಕ್ಸ್‌ಸ್ ಪಡೆದು ಅವರ ಬ್ಯಾಂಕ್ ಖಾತೆಗಳಿಂದ ೧೦,೬೫,೮೯೯ ರೂ ಹಣವನ್ನು ಲಪಟಾಯಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ಮಹಿಳೆಯೋರ್ವರು ೨ ಬ್ಯಾಂಕ್ ಖಾತೆಗಳ ಬ್ಯಾಲೆನ್ಸ್‌ನ್ನು ಚೆಕ್ ಮಾಡಿದಾಗ ಎರಡೂ ಖಾತೆಗಳಲ್ಲಿಯೂ ಗಮನಕ್ಕೆ ಬಾರದ ರೀತಿಯಲ್ಲಿ ಹಣ ಕಡಿತಗೊಂಡಿರುವುದು ಕಂಡುಬಂದಿರುತ್ತದೆ.

ಈ ವಿಷಯವಾಗಿ ಸಂಬಂಧಪಟ್ಟ ಬ್ಯಾಂಕ್‌ನಲ್ಲಿ ವಿಚಾರಿಸಿದ್ದು ಪೇಟಿಯಂ ಆಪ್ ಮುಖಾಂತರ ಯಾವುದೋ ಮೊಬೈಲ್ ಗೇಮಿಂಗ್ ಆಪ್‌ಗಳಿಗೆ ಹಣ ಕಟಾವು ಆಗಿರುವ ಬಗ್ಗೆ ಬ್ಯಾಂಕ್ ನವರು ಮಾಹಿತಿ ನೀಡಿರುತ್ತಾರೆ.

ಆದರೆ ಪೇಟಿಯಂ ಆಪ್‌ಯಾಗಲಿ ಅಥವಾ ಯಾವುದೇ ಗೇಮ್ ಆಪ್‌ಆಗಲಿ ಮಹಿಳೆಯು ತನ್ನ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿರುವುದಿಲ್ಲ ಆದರೆ ಸೈಬರ್ ವಂಚಕರು ಮಹಿಳೆಯ ಮೊಬೈಲ್ ಗೆ ಆಪ್‌ಫೈಲನ್ನು ಕಳುಹಿಸಿ ಆಕ್ಸ್‌ಸ್ ಮೊಬೈಲ್‌ನ ಸಂಪೂರ್ಣ ಪಡೆದುಕೊಂಡು ಪೆಟಿಎಂ ಆಪ್‌ನ್ನು ಮಹಿಳೆಯ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿ ೨ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಜೂನ್ ೨೪ ರಿಂದ ಆಗಸ್ಟ್ ೧೦ರವರೆಗೆ ಒಟ್ಟು ೧೦,೬೫,೮೯೯ ರೂ.ಗಳನ್ನು ಸೈಬರ್ ವಂಚಕರು ಬೇರೆ ಬೇರೆ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಿ ಮಹಿಳೆಗೆ ವಂಚನೆ ಮಾಡಿರುತ್ತಾರೆ.

ಸದರಿ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ ೧೫ ರಂದು ನಗರದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.ಆದ್ದರಿಂದ ಮೊಬೈಲ್‌ಗಳಿಗೆ ಬರುವಂತಹ ಯಾವುದೇ ರೀತಿಯ ಅಪರಿಚಿತ, ಅನುಮಾನಾಸ್ಪದ ಆಪ್‌ಫೈಲ್‌ಗಳನ್ನು ಸೂಕ್ತ ಪರಿಶೀಲನೆಗೆ ಒಳಪಡಿಸದೇ ಇನ್‌ಸ್ಟಾಲ್ ಮಾಡಿಕೊಳ್ಳಬಾರದಾಗಿ ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ವತಿಯಿಂದ ವಿನಂತಿಸಲಾಗಿದೆ.ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗಿದ್ದಲ್ಲಿ ಕೂಡಲೇ ತಡಮಾಡದೇ ಅಗತ್ಯ ಮಾಹಿತಿಯೊಂದಿಗೆ ಟೋಲ್ ಫ್ರೀ ಸಂಖ್ಯೆ ೧೯೩೦ಕ್ಕೆ ಕರೆಮಾಡಿ ದೂರು ದಾಖಲಿಸುವಂತೆ ತಿಳಿಸಲಾಗಿದೆ.

Officials embezzled Rs 10 lakh online

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...