Home namma chikmagalur ಭಾರಿಮಳೆಗೆ ಶೃಂಗೇರಿಯ ತುಂಗಾನದಿಯಲ್ಲಿ ಪ್ರವಾಹ
namma chikmagalurchikamagalurHomeLatest News

ಭಾರಿಮಳೆಗೆ ಶೃಂಗೇರಿಯ ತುಂಗಾನದಿಯಲ್ಲಿ ಪ್ರವಾಹ

Share
Share

ಶೃಂಗೇರಿ: ತಾಲ್ಲೂಕಿನಲ್ಲಿ  ಸುರಿದ ಭಾರಿ ಮಳೆಗೆ ಭಾನುವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ.

ಪ್ರವಾಹ ಉಂಟಾಗಿದ್ದರಿಂದ ಶೃಂಗೇರಿಯ ಶಾರದಾ ಪೀಠದ ದರ್ಶನ ಪಡೆಯಲು ಭಾನುವಾರ ಬಂದಿದ್ದ ಪ್ರವಾಸಿಗರಿಗೆ ಮಳೆಯಿಂದ ತೊಂದರೆಯಾಯಿತು. ಶಾರದಾ ಪೀಠದ  ಭಾರತೀತೀರ್ಥ ಸ್ವಾಮೀಜಿಯವರ ಸ್ನಾನಘಟ್ಟ ಹಾಗೂ ಸಂಧ್ಯಾವಂದನೆ ಮಂಟಪ ಮುಳುಗಿದೆ. ನದಿಯ ಪ್ರವಾಹದಲ್ಲಿ ಕಾಳಿಂಗ ಸರ್ಪದಂತಹ ಜೀವ ಜಂತುಗಳು, ಮರದ ದಿಮ್ಮಿಗಳು ತೇಲಿ ಹೋದವು.

ತಾಲ್ಲೂಕಿನ ಜಲಪಾತಗಳಾದ ನರಸಿಂಹ ಪರ್ವತದ ಎರಡು ಕೊಳಗಳು, ಬರ್ಕಣ, ಸಿರಿಮನೆ, ಸೂತನಬ್ಬಿ ಮುಂತಾದ ಜಲಪಾತಗಳು ಉಕ್ಕಿ ಹರಿಯುತ್ತಿದೆ.

ಮಳೆಯಿಂದ ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ಗಾಂಧಿ ಮೈದಾನ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ ಹಳ್ಳ ಸೇತುವೆ ಮೇಲೆ, ಕೆರೆಕಟ್ಟೆಯ ಗುಲುಗುಂಜಿ ಮನೆ ರಸ್ತೆ ನೀರಿನಿಂದ ತುಂಬಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.

ತಾಲ್ಲೂಕಿನ 49 ಗ್ರಾಮಗಳಲ್ಲಿ ಶಿರ್ಲು, ಹಾದಿ, ಕೆರೆ, ಸುಂಕದಮಕ್ಕಿ, ನಿಲಂದೂರು, ಕುಂಬ್ರಗೋಡು, ಕೂಗೋಡು ಮೊದಲಾದ ಗ್ರಾಮಗಳು ಪಟ್ಟಣದಿಂದ 25 ರಿಂದ 30 ಕಿಲೋ ಮೀಟರ್ ದೂರವಿದ್ದು, ಇಲ್ಲಿನ ರಸ್ತೆಗಳು ಹದಗೆಟ್ಟಿರುವುದರಿಂದ ಅನಾರೋಗ್ಯ, ಅಪಘಾತ ಸಂಭವಿಸಿದರೆ ಆಸ್ಪತ್ರೆಗೆ ಬರಲು ಅಲ್ಲಿನ ಜನ ಹರಸಾಹಸ ಪಡಬೇಕಿದೆ.

ಅತಿಯಾದ ಮಳೆಯ ಕಾರಣ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಸೋಮವಾರ (ಆ.18) ರಜಾ ಘೋಷಿಸಲಾಗಿದೆ. ಪೊಲೀಸ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ತಾಲ್ಲೂಕಿನ ಶೃಂಗೇರಿಯಲ್ಲಿ 132 ಮಿ.ಮೀ, ಕಿಗ್ಗಾದಲ್ಲಿ 152.8 ಮಿ.ಮೀ, ಕೆರೆಕಟ್ಟೆ 154 ಮಿ.ಮೀ ಮಳೆಯಾಗಿದೆ. ಒಟ್ಟು 3,475 ಮಿ.ಮೀ ಮಳೆಯಾಗಿದೆ. ಮಳೆಯಿಂದ ಶೃಂಗೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರ ನೆಮ್ಮಾರ್‌ನಲ್ಲಿ ರಸ್ತೆ ಜಲಾವೃತಗೊಂಡು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಶೃಂಗೇರಿಯ ಭಾರತೀತೀರ್ಥ ರಸ್ತೆ ನೀರಿನಿಂದ ಆವೃತಗೊಂಡಿದೆ. ಕುರುಬಕೇರಿ ರಸ್ತೆ ನೀರಿನಿಂದ ಆವೃತಗೊಂಡು ರಸ್ತೆಯ 2 ಕಡೆ ನೀರಿನಿಂದ ತುಂಬಿದ್ದು ಮಧ್ಯೆ ದ್ವೀಪದಂತಾಗಿದೆ.

Heavy rains cause flooding in Sringeri Tunga river

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...