Home Latest News ಶೃಂಗೇರಿಯಲ್ಲಿ ಆ.23ರಂದು ಎರಡನೇ ಬೃಹತ್ ಉದ್ಯೋಗ ಮೇಳ
Latest NewschikamagalurHomenamma chikmagalur

ಶೃಂಗೇರಿಯಲ್ಲಿ ಆ.23ರಂದು ಎರಡನೇ ಬೃಹತ್ ಉದ್ಯೋಗ ಮೇಳ

Share
Share

ಕೊಪ್ಪ: ಅಮ್ಮ ಫೌಂಡೇಶನ್ ವತಿಯಿಂದ ಆಗಸ್ಟ್‌ 23ರಂದು ಎರಡನೇ ಬೃಹತ್ ಉದ್ಯೋಗ ಮೇಳವನ್ನು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಆಯೋಜಿಸ ಲಾಗಿದೆ ಎಂದು ಅಮ್ಮ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ತಿಳಿಸಿದರು.

‘ಬೆಂಗಳೂರಿನ ಹಲವು ಪ್ರತಿಷ್ಠಿತ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಪದವಿಪೂರ್ವ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಅಭ್ಯರ್ಥಿಗಳು ಹಾಜರಾಗಬಹುದು. ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಭಾವಚಿತ್ರ, ಆಧಾರ್ ಕಾರ್ಡ್, ಸ್ವ ವಿವರದ ಅರ್ಜಿಯೊಂದಿಗೆ ಹಾಜರಾಗಬೇಕು’ ಎಂದು ಭಾನುವಾರ ‍ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕೊಪ್ಪ, ಶೃಂಗೇರಿ, ಎನ್. ಆರ್.ಪುರ ತಾಲ್ಲೂಕಿನ ಕಾಲೇಜುಗಳಲ್ಲಿ ಕ್ಯಾಂಪಸ್ ಸಂದರ್ಶನ ಇಲ್ಲ. ಪ್ರತಿವರ್ಷ 1,800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಮುಗಿಸಿ ಹೊರ ಬರುತ್ತಿದ್ದಾರೆ. ಅವರು ಉದ್ಯೋಗ ಪಡೆಯುವಲ್ಲಿ ಸವಾಲು ಎದುರಿಸುತ್ತಿದ್ದು, ನಿರುದ್ಯೋಗಿಗಳಾಗುತ್ತಿದ್ದಾರೆ. ಹೇಗೆ ಸಂದರ್ಶನ ಎದುರಿಸಬೇಕು ಎಂಬ ಮಾಹಿತಿಯನ್ನು ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಆ.20 ರಂದು ತರಬೇತಿ ನೀಡಲಾಗುತ್ತಿದೆ’ ಎಂದರು.

‘ಅಂದು ಕನಿಷ್ಠ 150 ಮಂದಿಗೆ ಸ್ಥಳದಲ್ಲೇ ಆಯ್ಕೆ ಪ್ರಮಾಣ ಪತ್ರ ವಿತರಿಸಲಾಗುತ್ತದೆ. ಈ ಭಾಗದ 500 ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಉದ್ಯೋಗದಾತ ಫೌಂಡೇಶನ್‌ನ ರುಕ್ಮಾಂಗದ ಅವರು ಸಹಕಾರ ನೀಡುತ್ತಿದ್ದಾರೆ.

2022ರಲ್ಲಿ ನಡೆದ ಉದ್ಯೋಗ ಮೇಳದಲ್ಲಿ 3,485 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಬಾರಿ 300ಕ್ಕೂ ಹೆಚ್ಚು ಮಂದಿ ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದಾರೆ. ಉದ್ಯೋಗ ಮೇಳದ ದಿನ ಸ್ಥಳದಲ್ಲಿ ಬೆಳಿಗ್ಗೆ 9 ಗಂಟೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಮಾಹಿತಿಗೆ 80956 79666 ಸಂಪರ್ಕಿಸಬಹುದು’ ಎಂದು ಹೇಳಿದರು.

ಶೃಂಗೇರಿ ಕ್ಷೇತ್ರ ಜೆಡಿಎಸ್ ಘಟಕದ ಅಧ್ಯಕ್ಷ ದಿವಾಕರ ಭಟ್ ಬಂಡಿಗಡಿ, ಮುಖಂಡರಾದ ಎಚ್.ಎಸ್.ಕಳಸಪ್ಪ, ಭರತ್, ದೇವೇಂದ್ರ, ಶ್ರೀನಿವಾಸ್, ಕಲ್ಕಟ್ಟೆ ದಿನೇಶ್ ಹೆಗಡೆ, ಉದಯ್ ಸುವರ್ಣ, ಅಚ್ಚುತ್ ಮತ್ತಿತರರು ‍ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Second mega job fair in Sringeri on August 23rd

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...