Home namma chikmagalur ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಶೇ 77.76 ಮತದಾನ
namma chikmagalurajjampuraHomeLatest News

ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಶೇ 77.76 ಮತದಾನ

Share
Share

ಅಜ್ಜಂಪುರ: ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಭಾನುವಾರ ನಡೆದ ಮೊದಲ ಚುನಾವಣೆಯಲ್ಲಿ ಶೇ 77.76 ಮತದಾನವಾಗಿದೆ.

4,967 ಪುರುಷ ಮತಗಳಲ್ಲಿ 3,916 ಹಾಗೂ 5,285 ಮಹಿಳಾ ಮತಗಳಲ್ಲಿ 4,056 ಮತಗಳು ಚಲಾವಣೆಗೊಂಡವು. ಒಟ್ಟಾರೆ 10,252 ಮತದಾರರಲ್ಲಿ 7,972 ಮತದಾರರು ತಮ್ಮ ಹಕ್ಕು ಚಲಾಯಿಸಿದರು.

1 ನೇ ವಾರ್ಡ್‌ನ ಒಟ್ಟು 876 ಮತಗಳಲ್ಲಿ 628, 2 ನೇ ವಾರ್ಡ್‌ನ 1,529 ಮತಗಳಲ್ಲಿ 1,108, 3ನೇ ವಾರ್ಡ್‌ನ 1,704 ಮತಗಳಲ್ಲಿ 1,313, 4ನೇ ವಾರ್ಡ್‌ನ 788 ಮತಗಳಲ್ಲಿ 595, 5ನೇ ವಾರ್ಡ್‌ನ 791 ಮತಗಳಲ್ಲಿ 630, 6ನೇ ವಾರ್ಡ್‌ನ 761 ಮತಗಳಲ್ಲಿ 658, 7ನೇ ವಾರ್ಡ್‌ನ 789 ಮತಗಳಲ್ಲಿ 643, 8ನೇ ವಾರ್ಡ್‌ನ 505 ಮತಗಳಲ್ಲಿ 442, 9ನೇ ವಾರ್ಡ್‌ನ 467 ಮತಗಳಲ್ಲಿ 430, 10ನೇ ವಾರ್ಡ್‌ನ 855 ಮತಗಳಲ್ಲಿ 662, 11ನೇ ವಾರ್ಡ್‌ನ 1,187 ಮತಗಳಲ್ಲಿ 863 ಮತಗಳು ಚಲಾವಣೆಯಾದವು.

ಬೆಳಗಿನಿಂದಲೇ ಮತದಾರರು ಮತ ಕೇಂದ್ರದತ್ತ ಮುಖ ಮಾಡಿದ್ದರು. 10 ಗಂಟೆಯಿಂದ 3 ಗಂಟೆವರೆಗೆ ಮತದಾನ ಏರುಗತಿ ಪಡೆದಿತ್ತು. ಮತ ಕೇಂದ್ರದಲ್ಲಿ ಸಾಲುಗಟ್ಟಿ ನಿಂತು ಮತದಾನ ಮಾಡಿದರು. ಸಂಜೆ ವೇಳೆಗೆ ಮತದಾನ ಪ್ರಮಾಣ ಕ್ಷೀಣಿಸಿತ್ತು.

ಶೆಟ್ರು ಸಿದ್ದಪ್ಪ ಪದವಿ ಪೂರ್ವ ಕಾಲೇಜು, ಸರ್ಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆ, ಸರ್ಕಾರಿ ಉರ್ದು ಶಾಲೆ, ಸರ್ಕಾರಿ ಉತ್ತರ ದಿಕ್ಕಿನ ಶಾಲೆ, ಸರ್ಕಾರಿ ಪೂರ್ವ ದಿಕ್ಕಿನ ಶಾಲೆ ಮತ ಕೇಂದ್ರದ ಬಳಿ ಅಭ್ಯರ್ಥಿಗಳು, ಕಾರ್ಯಕರ್ತರು, ಬೆಂಬಲಿಗರು ಜಮಾಯಿಸಿದ್ದರು. ಮತದಾರರ ಮನವೊಲಿಸಲು ಅಂತಿಮ ಹಂತದವರೆಗೂ ಕಸರತ್ತು ನಡೆಸಿದ್ದು ಕಂಡುಬಂದಿತು.

11 ವಾರ್ಡ್‌ಗಳ 31 ಅಭ್ಯರ್ಥಿಗಳ ಭವಿಷ್ಯಗಳಲ್ಲಿ ಇವಿಎಂಗಳಲ್ಲಿ ಭದ್ರವಾಗಿದ್ದು, ಮತ ಎಣಿಕೆ ಬುಧವಾರ (ಆ.20) ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.

77.76% voter turnout in Ajjampura town panchayat elections

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...