Home namma chikmagalur ದೇವರಾಜ ಅರಸು ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆ
namma chikmagalurchikamagalurHomeLatest News

ದೇವರಾಜ ಅರಸು ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆ

Share
Share

ಚಿಕ್ಕಮಗಳೂರು:  ಸುದೀರ್ಘ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಕ್ರಾಂತಿಕಾರಿ ನಿಲುವುಗಳಿಂದ ರಾಜ್ಯಕ್ಕೆ ಅಪ್ರತಿಮ ಕೊಡುಗೆಯನ್ನು ನೀಡಿದವರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ಎಂದು ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸುರವರ ೧೧೦ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸುರವರು ಸುದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗವನ್ನು ರಚಿಸಿ, ನಂತರದ ದಿನಗಳಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ಹಿಂದುಳಿದ ವರ್ಗದ ನಿಗಮ, ಮಂಡಳಿಯನ್ನು ಪ್ರಾರಂಭಿಸಿದರು. ಜೀತ ಪದ್ಧತಿಯನ್ನು ರದ್ದುಗೊಳಿಸಿ, ಬಡವರು ಹಾಗೂ ಶ್ರೀಮಂತರ ನಡುವೆ ಇರುವ ಅಂತರ ಹಾಗೂ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದ ಅವರು, ೧೯೭೩ರಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣೀಭೂತರಾದವರು ಎಂದರು.

ನಂತರ ರೈತರಿಗೆ ಅನುಕೂಲವಾಗುವಂತೆ ಕಾಳಿ ಯೋಜನೆಯನ್ನು ಜಾರಿಗೆ ತಂದರು. ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಹಿಂದುಳಿದ ವರ್ಗದವರು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂದುವರಿಯಬೇಕೆಂಬ ಆಶಯ ಹೊಂದಿದ್ದರು. ಈ ಕಾರಣದಿಂದಲೇ ಹಿಂದುಳಿದ ವರ್ಗದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ಟೈಫಂಡರಿ ಯೋಜನೆಯಲ್ಲಿ ಉದ್ಯೋಗ ಕಲ್ಪಿಸಿದ್ದರು. ಬಡವರ ಧ್ವನಿಯಾಗಿ ಭೂಸುಧಾರಣೆಯನ್ನು ಜಾರಿಗೆ ತಂದು ಉಳುವವನೇ ಭೂಮಿಯ ಹೊಲದೊಡೆಯ ಎನ್ನುವ ಕಾನೂನನ್ನು ಜಾರಿಗೆ ತಂದರು ಎಂದು ತಿಳಿಸಿದರು.

ಅಂದು ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದ ತಮ್ಮ ತಂದೆ ಬೇಗಾನೆ ರಾಮಯ್ಯನವರು ಅರಸು ಅವರ ನಿಕಟವರ್ತಿಯಾಗಿ ಭೂಸುಧಾರಣಾ ಸಮಿತಿಯ ಸದಸ್ಯರೂ ಆಗಿದ್ದರು. ನಂತರ ಅವರು ಈ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮಲೆನಾಡು ಭಾಗಕ್ಕೆ ಬೋರ್‌ವೆಲ್ ಅನ್ನು ಒದಗಿಸುವ ಮೂಲಕ ಬೋರ್‌ವೆಲ್ ರಾಮಯ್ಯ ಎಂದೇ ಖ್ಯಾತಿ ಪಡೆದಿದ್ದರು ಎಂದು ಹೇಳಿದರು.

ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಇಂದು ದೇಶ ಕಂಡ ಅಪ್ರತಿಮ ನಾಯಕ ದೇವರಾಜ ಅರಸು ಅವರ ಹಾಗೂ ಆಧುನಿಕ ತಂತ್ರಜ್ಞಾನದ ಹರಿಕಾರರಾಗಿದ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಹುಟ್ಟುಹಬ್ಬವೂ ಆಗಿದೆ. ತಮ್ಮ ದಕ್ಷ ಆಡಳಿತದ ಮೂಲಕ ಹಲವಾರು ದೂರದೃಷ್ಟಿಯ ಕಾರ್ಯಕ್ರಮಗಳನ್ನು ನೀಡಿದ ದೇವರಾಜ ಅರಸು, ಭೂ ಒಡೆತನದ ಹಕ್ಕು ನೀಡಿರುವುದು ಮಾತ್ರವಲ್ಲ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ೨೦ ಅಂಶಗಳ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದವರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಹಾಸ್ಟೆಲ್ ಸೌಲಭ್ಯವಲ್ಲದೆ, ವಿದ್ಯಾರ್ಥಿ ವೇತನವನ್ನು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದು ಬಡವರಿಗೆ ಬದುಕು ಕಟ್ಟಿಕೊಟ್ಟವರು ಎಂದು ತಿಳಿಸಿದರು.

ದಿ.ಡಿ.ದೇವರಾಜ ಅರಸು ಅವರ ತತ್ವ ಮತ್ತು ಸಾಧನೆಗಳ ಬಗ್ಗೆ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಅರ್ಥಶಾಸ್ತ್ರ-ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ್ ಉಪನ್ಯಾಸ ನೀಡಿ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಒಬ್ಬ ಶ್ರೇಷ್ಠ ಮತ್ತು ಧೀಮಂತ ನಾಯಕ, ದಾರ್ಶನಿಕ. ೧೯೬೯ ರಿಂದ ೧೯೭೯ರವರೆಗಿನ ಕಾಲಘಟ್ಟವನ್ನು ಅರಸು ಯುಗವೆಂದು ಕರೆಯಲಾಗುತ್ತದೆ. ೧೯೬೯-೭೦ರ ಅವಧಿಯಲ್ಲಿ ರಾಜ್ಯದ ಅವಿಸ್ಮರಣೀಯ ಬೆಳವಣಿಗೆಗೆ ಉತ್ತಮ ಅಡಿಪಾಯವನ್ನು ಹಾಕಿಕೊಟ್ಟವರು. ಅವರು ವಿಶೇಷವಾಗಿ ದೀನ ದಲಿತರು, ಬಡವರು, ಹಿಂದುಳಿದವರ ಬಗ್ಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದವರು. ಶೋಷಿತ ಜನರ ಕಷ್ಟ ಕಾರ್ಪಣ್ಯವನ್ನು ಅರಿತುಕೊಂಡಿದ್ದರು. ಬಡತನ ನಿರ್ಮೂಲನೆಗೆ ಶ್ರಮಿಸಿದ ಮಹಾನ್ ನಾಯಕ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪೌತಿ ಖಾತೆಯ ವಾರಸುದಾರರಿಗೆ ಪಹಣಿಗಳನ್ನು ವಿತರಿಸಲಾಯಿತು. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಅರಸು ಸಂಘದ ಅಧ್ಯಕ್ಷ ಕೆ.ಜೆ.ಮಂಜುನಾಥ ರಾಜ್ ಅರಸ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ನಾಗರಾಜ ಅರಸ್, ನಗರಸಭೆ ಸದಸ್ಯರುಗಳಾದ ಮಧುಕುಮಾರ್ ರಾಜೇ ಅರಸ್, ಪರಮೇಶ್ ಅರಸ್, ಅಲೆಮಾರಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಉಪವಿಭಾಗಾಧಿಕಾರಿ ಸುದರ್ಶನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಆಲದರ್ತಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಹೆಚ್.ಪಿ.ಮಂಜೇಗೌಡ, ಜಯರಾಜ ಅರಸ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎನ್.ಮಂಜುನಾಥ್ ಸ್ವಾಗತಿಸಿದರು. ಮಲ್ಲಿಗೆ ಸುಧೀರ್ ಮತ್ತು ತಂಡದವರು ನಾಡಗೀತೆ ಹಾಗೂ ಗೀತ ಗಾಯನ ನಡೆಸಿಕೊಟ್ಟರು.

ಇದಕ್ಕೂ ತಾಲ್ಲೂಕು ಕಚೇರಿ ಆವರಣದಿಂದ ಆರಂಭಗೊಂಡ ಮೆರವಣಿಗೆಗೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಚಾಲನೆ ನೀಡಿದರು.

Devaraja Urs made an unparalleled contribution to the state with his revolutionary stances.

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...