Home Latest News ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು
Latest NewsCrime NewsHomeKadurnamma chikmagalur

ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು

Share
Share

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ ಎಂದು ತೆಂಗಿನ ತೋಟದ ಮಾಲೀಕ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.

ಗೊಲ್ಲರಹಟ್ಟಿ ನಿವಾಸಿ ಕುಮಾರ್(೩೭) ಮೃತ ವ್ಯಕ್ತಿ. ಹಲ್ಲೆ ಮಾಡಿದ ಮಧು ಮತ್ತು ಚಂದ್ರಪ್ಪ ವಿರುದ್ಧ ಸಖ ರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ ರಸ್ತೆ ಪಕ್ಕ ಚಂದ್ರಪ್ಪ ಅವರ ತೋಟವಿದ್ದು ಕುಮಾರ್ ಬಿದ್ದ ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ಕುಮಾರ್ ಮೇಲೆ ತೋಟದ ಮಾಲೀಕ ಚಂದ್ರಪ್ಪ ಮತ್ತು ಚಂದ್ರಪ್ಪ ಅವರ ಅಳಿಯ ಮಧು ಮನಸ್ಸೋ ಇಚ್ಛೆ ಥಳಿಸಿದ್ದಾರೆ.

ತೋಟದ ಪಕ್ಕದ ಹಳ್ಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುಮಾರ್‌ನನ್ನು ಪೋಷಕರು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿ ದ್ದಾನೆ. ಹಲ್ಲೆ ನಡೆಸಿದ ಮಧು ಮತ್ತು ಚಂದ್ರಪ್ಪ ನನ್ನು ಸಖರಾಯಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಳ್ಳಲು ಸಖರಾಯಪಟ್ಟ ಪೊಲೀಸ್ ಠಾಣೆ ಪೊಲೀಸರು ವಿಳಂಬ ನೀತಿ ಅನುಸರಿಸಿದ್ದಾರೆಂದು ಮೃತನ ಕುಟುಂಬಸ್ಥರು ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಧಿಕ್ಕಾಗಿ ಕೂಗಿ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Man attacked for stealing coconuts – dies after treatment fails

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...